ಹಾವೇರಿ | ಅಲೆಮಾರಿ ಬಾಲಕಿಯರ ಅನುಮಾನಾಸ್ಪದ ಸಾವು: ತನಿಖೆಗೆ ಒತ್ತಾಯ

Date:

Advertisements

ಬುಡ್ಗ ಜಂಗಮ ಜಾತಿಯ ಇಬ್ಬರು ಬಾಲಕಿಯರ ಶವ ಪತ್ತೆಯಾಗಿದ್ದು, ಈ ಇಬ್ಬರೂ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅನುಮಾನ ಮೂಡಿದೆ ಕೂಡಲೇ ಈ ಬಗ್ಗೆ ತನಿಖೆ ನಡೆಸುವಂತೆ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ಸಿಎಂಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಡಿ ವೈ ಎಫ್ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಪೂಜಾರ್ ಮಾತನಾಡಿ, “ಶ್ಯಾಮಮ್ಮ ಗಂ/ಹುಸೇನಪ್ಪ ಸಿರಿಗಿರಿ. 19 ವರ್ಷ ಸಾಯಮ್ಮ ತಂ/ ಭೀಮಪ್ಪ ಸಿರಿಗಿರಿ ವಯಸ್ಸು 15 ವರ್ಷ ಇಬ್ಬರ ಶವವು ಫೆ: 12-2-25 ರಂದು ಗುರುಮಠಕಲ್ ನೀಲಹಳ್ಳಿ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದ್ದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಹೊಟ್ಟೆ ಪಾಡಿಗಾಗಿ ಚಿಂದಿ ಆಯಲು ಹೋಗಿದ್ದ ಇವರ ಮೇಲೆ ಅತ್ಯಾಚಾರ ಎಸಗಿ, ಕೆರೆಗೆ ಎಸೆದು ಕೊಲೆ ಮಾಡಿರುವುದಾಗಿ ಸ್ಥಳೀಯ ಅಲೆಮಾರಿ ಬಂಧುಗಳು ಆರೋಪಿಸಿದ್ದಾರೆ” ಎಂದರು.

“ಈ ಇಬ್ಬರು ಮಹಿಳೆಯರ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ, ಸತ್ಯ ಬಯಲಿಗೆ ತರಬೇಕು. ಒಂದು ವೇಳೆ ತಪ್ಪಿತಸ್ತರಿಗೆ ಶಿಕ್ಷೆಗೆ ಒಳಗಾಗದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು. ಎಂದು ಬಸವರಾಜ್ ಪೂಜಾರ್ ಎಚ್ಚರಿಕೆ ನೀರಿದರು.

Advertisements

ಅಲೆಮಾರಿ ಸಮುದಾಯ ಜಿಲ್ಲಾಧ್ಯಕ್ಷ ಶೆಟ್ಟಿ ವಿಭೂತಿ ಮಾತನಾಡಿ, “ಈಗಾಗಲೇ ಸೈದಾಪೂರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ಆಗಿದ್ದು, ಪೊಲೀಸರು ತನಿಖೆಯ ಮೇಲೆ ಅನುಮಾನ ಇದ್ದು, ಆದ ಕಾರಣ ಇಬ್ಬರು ಬಾಲಕಿಯರ ಸಾವಿನ ಬಗ್ಗೆ ಸಮಗ್ರವಾದ ತನಿಖೆ ನಡೆಸಿ, ಇವರ ಸಾವಿಗೆ ಕಾರಣ ಏನೆಂಬುದನ್ನು ಪತಿ ಹಚ್ಚಿ, ಇವರ ಸಾವಿಗೆ ಕಾರಣರಾದವರ ಮೇಲೆ ಕಾನೂನು ಕ್ರಮ ಜರುಗಿಸಿ, ಬಡ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ತುಕ್ಕು ಹಿಡಿಯುತ್ತಿವೆ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪಿಸಿದ ಶುದ್ಧ ನೀರಿನ ಘಟಕ!

ಮನವಿ ಸಂದರ್ಭದಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಹಾವೇರಿ ಜಿಲ್ಲಾಧ್ಯಕ್ಷ ಉಡಚಪ್ಪ ಮಾಳಗಿ, ಮುಖಂಡ ಮಾರೇಪ್ಪ ಮೊತಿ, ಲಕ್ಷ್ಮಣ ಸಿರಿಶಾಲ ಜಗದೀಶ್ ಹರಿಜನ, ಮತ್ತಿತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X