ಗಂಗಾವತಿ | ನೆಹರೂ ಉದ್ಯಾನದ ಸ್ವಚ್ಛತೆ ಕುರಿತು ಶಾಸಕರ ಮಾತಿಗೂ ಕಿಮ್ಮತ್ತು ನೀಡದ ಪೌರಾಯುಕ್ತ: ಐಲಿ ನಾಗರಾಜ

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ನೆಹರೂ ಉದ್ಯಾನದ ಸುರಕ್ಷತೆ ಮತ್ತು ಸ್ವಚ್ಚತೆಯ ಬಗ್ಗೆ ನಗರಸಭೆ ಕಡೆಗಣಿಸಿದ್ದು, ಈ ಬಗ್ಗೆ ಸೂಕ್ತ ಕ್ರಮವಹಿಸಲು ಶಾಸಕರು ಸೂಚಿಸಿದ್ದರೂ ಕೂಡಾ, ಪೌರಾಯುಕ್ತರು ಶಾಸಕರ ಮಾತಿಗೆ ಕಿಮ್ಮತ್ತು ಕೊಡದೇ ನಿರ್ಲಕ್ಷ್ಯ ವಹಿಸಿರುತ್ತಾರೆ ಎಂದು ಕರವೇ ಗಂಗಾವತಿ ನಗರ ಘಟಕ ಅಧ್ಯಕ್ಷ ಐಲಿ ನಾಗರಾಜ ಆಕ್ರೋಶ ವ್ಯಕ್ತಪಡಿಸಿದರು.

“ಉದ್ಯಾನವನದ ಸ್ವಚ್ಛತೆ ಕಾಪಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಕರವೇ ಸಂಘಟನೆ, ಶಾಸಕರು ಹಾಗೂ ಪೌರಾಯುಕ್ತರ ಉಭಯ ಸಮ್ಮುಖದಲ್ಲಿ ಕಳೆದ ತಿಂಗಳು ನಡೆದ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದು, ಶಾಸಕರು ಈ ಬಗ್ಗೆ ಸೂಕ್ತ ಕ್ರಮವಹಿಸಲು ಪೌರಾಯುಕ್ತರಿಗೆ ಸೂಚಿಸಿದಾಗ್ಯೂ ಪೌರಾಯುಕ್ತರು ಶಾಸಕರ ಮಾತಿಗೆ ಕಿಮ್ಮತ್ತು ಕೊಡದೇ ನಿರ್ಲಕ್ಷ್ಯ ವಹಿಸಿರುತ್ತಾರೆ” ಎಂದರು.

“ಸದರಿ ಉದ್ಯಾನವನದಲ್ಲಿ ಬರುವ ಸಾರ್ವಜನಿರು ಮತ್ತು ಬೇರೆ ಬೇರೆ ಊರಿಗೆ ಹೋಗುವ ಪ್ರಯಾಣಿಕರು ವಿಶ್ರಾಂತಿಯ ಸಲುವಾಗಿ ಈ ಉದ್ಯಾನಕ್ಕೆ ಬರುತ್ತಾರೆ. ವಯಸ್ಸಾದ ವೃದ್ದರು, ಹಿರಿಯ ನಾಗಕರಿಕರು ಉದ್ಯಾನವನದಲ್ಲಿ ವಾಯು ವಿಹಾರಕ್ಕೆ, ವ್ಯಾಯಾಮಕ್ಕೆ ಬರುತ್ತಾರೆ. ಆದರೆ, ಉದ್ಯಾನವನ ಸ್ವಚ್ಛತೆ ಇಲ್ಲದೆ ಮತ್ತು ವ್ಯಾಯಾಮ ಸಲುವಾಗಿ ಹಾಕಿರುವ ಎಲ್ಲ ಸಾಮಾಗ್ರಿಗಳು ಸಂಪೂರ್ಣವಾಗಿ ಹಾಳಾಗಿವೆ. ಇದರಿಂದಾಗಿ ವೃದ್ಧರಿಗೆ, ಹಿರಿಯ ನಾಗರಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಹಗಲು ರಾತ್ರಿ ಈ ಉದ್ಯಾನವನದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಅನೈತಿಕ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿವೆ. ಇದರ ಬಗ್ಗೆ ಯಾವುದೇ ಇಲ್ಲಾಖೆಯ ಅಧಿಕಾರಿಗಳೂ ಕೂಡಾ ಕ್ರಮವಹಿಸುತ್ತಿಲ್ಲ. ಅಲ್ಲದೆ ಸ್ವಚ್ಚತೆ ಇಲ್ಲದೆ ಕಲುಷಿತ ವಾತಾವರಣ ಉಂಟಾಗಿದೆ” ಎಂದು ಆರೋಪಿಸಿದರು.‌

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಅವೈಜ್ಞಾನಿಕ ಟೋಲ್ ಗೇಟ್; ಕೂಡಲೇ ಕಾಮಗಾರಿ ನಿಲ್ಲಿಸುವಂತೆ ರೈತ ಸಂಘ ಒತ್ತಾಯ

“ಉದ್ಯಾನವನಕ್ಕೆ ಬರುವ ಸಾರ್ವಜನಿಕರು, ಪ್ರಯಾಣಿಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಉದ್ಯಾನದಲ್ಲಿ ಮದ್ಯಪಾನದ ಬಾಟೆಲ್‌ಗಳು, ಇತರೆ ಅನೈತಿಕ ಚಟುವಟಿಕೆಗೆ ಉಪಯೋಗಿಸುವ ವಸ್ತುಗಳು ಕಾಣುತ್ತಿವೆ. ಉದ್ಯಾನವನದ ಸುತ್ತಲು ಸರಿಯಾದ ಬೇಲಿ ವ್ಯವಸ್ಥೆ ಇರುವದಿಲ್ಲ. ಈಗಲಾದರೂ ಶಾಸಕರು ಹಾಗೂ ಪೌರಾಯುಕ್ತರು ಈ ಉದ್ಯಾನದತ್ತ ಗಮನಹರಿಸಿ ಸ್ಥಳಪರಿಶೀಲನೆ ಮಾಡಿ, ಇಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳನ್ನು ತಡೆಗಟ್ಟಬೇಕು. ಸ್ವಚ್ಛತೆ ಕಾಪಾಡಬೇಕು ಮತ್ತು ವ್ಯಾಯಾಮಕ್ಕೆ ಉಪಯೋಗಿಸುವ ಸಾಮಾಗ್ರಿಗಳು ಸರಿಪಡಿಸಬೇಕು. ಸಂಜೆ 6 ಗಂಟೆಯ ನಂತರ ಉದ್ಯಾನವನದ ಭದ್ರತೆಯ ಗೇಟಿಗೆ ಬೀಗಹಾಕಬೇಕು. ಜತೆಗೆ ಕಾವಲುಗಾರರನ್ನು ನೇಮಿಸಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X