ಆಟಿಸಂ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕನನ್ನು ಎಳೆದೊಯ್ದ ಬೀದಿ ನಾಯಿಗಳು: ಸಾವು

Date:

Advertisements

ಭಿನ್ನ ಸಾಮರ್ಥ್ಯದ ಬಾಲಕನೋರ್ವ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿ, ಎಳೆದೊಯ್ದ ಪರಿಣಾಮ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಕಣ್ಣೂರ್‌ ಜಿಲ್ಲೆಯ ಮುಝಪ್ಪಿಲಂಗಾಡ್ ಎಂಬಲ್ಲಿ ನಡೆದಿದೆ.

ಮೃತ ಬಾಲಕನನ್ನು ನಿಹಾಲ್‌ ನೌಶಾದ್‌ (10) ಎಂದು ಗುರುತಿಸಲಾಗಿದೆ.

ಘಟನೆಯ ವಿವರ

Advertisements

ಆಟಿಸಂ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕ ನಿಹಾಲ್‌, ತಾಯಿ ನೌಫೀಸಾ ಮತ್ತು ತಮ್ಮ ನಝಲ್‌ ಜೊತೆ ಕೆಟ್ಟಿನಗಂ ಎಂಬಲ್ಲಿ ವಾಸವಾಗಿದ್ದ. ಘಟನೆ ನಡೆದ ದಿನ ಸಂಜೆ ಪಕ್ಕದ ಮನೆಯ ಉಯ್ಯಾಲೆಯಲ್ಲಿ ಆಟವಾಡಲು ತೆರಳಿದ್ದಾನೆ. ನಿಹಾಲ್‌ ಮನೆಯಿಂದ ಹೊರ ಹೋಗಿರುವುದು ತಾಯಿಯ ಗಮನಕ್ಕೆ ಬಂದಿರಲಿಲ್ಲ. ನಿಹಾಲ್‌ ಆಟವಾಡಲು ತೆರಳಿದ್ದ ಮನೆಯಲ್ಲಿ ಯಾರೂ ವಾಸವಿರಲಿಲ್ಲ. ತನ್ನ ಮನೆಯಿಂದ ಸಂಜೆ 5ರ ವೇಳೆಗೆ ತೆರಳಿದ್ದ ಬಾಲಕ, ರಾತ್ರಿಯಾದರೂ ಪತ್ತೆಯಾಗಿರಲಿಲ್ಲ. ವಿಷಯ ತಿಳಿಯುತ್ತಿದ್ಧಂತೆಯೇ ಊರವರೆಲ್ಲಾ ಸೇರಿ ಹುಡುಕಾಟ ನಡೆಸಿದ್ದಾರೆ. ರಾತ್ರಿ 8.30ರ ವೇಳೆಗೆ ಪಕ್ಕದ ಮನೆಯ ಕಾಂಪೌಂಡ್‌ ಬಳಿ ನಿಹಾಲ್‌ ಪತ್ತೆಯಾಗಿದ್ದಾನೆ.

ಬೀದಿ ನಾಯಿಗಳ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ನಿಹಾಲ್‌ನನ್ನು ಸ್ಥಳೀಯರು ತಲಶ್ಶೇರಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ದೇಹದ ಬಹುತೇಕ ಭಾಗಗಳನ್ನೂ ಬೀದಿ ನಾಯಿಗಳು ಕಚ್ಚಿ ಎಳೆದಾಡಿದ್ದ ಕಾರಣ, ತೀವ್ರ ರಕ್ತ ಸ್ರಾವದಿಂದ ಬಾಲಕ ಮೃತಪಟ್ಟಿದ್ದಾನೆ.

ನಿಹಾಲ್‌ಗೆ ಮಾತು ಬಾರದೇ ಇದ್ದುದರಿಂದ ಸಹಾಯಕ್ಕಾಗಿ ಯಾರನ್ನೂ ಕೂಗಲು ಸಾಧ್ಯವಾಗಿರಲಿಲ್ಲ ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೃತ ನಿಹಾಲ್‌ ಮನೆಯಲ್ಲಿ ಮೃತದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದ ವೇಳೆ ನೂರಾರು ಸಂಖ್ಯೆಯಲ್ಲಿ ಸೇರಿದ್ದವರ ಕಣ್ಣಾಲಿಗಳು ತೇವವಾಗಿದ್ದವು.

ಈ ಸುದ್ದಿ ಓದಿದ್ದೀರಾ?: ಮುಂದಿನ ನಾಲ್ಕು ವಾರಗಳಲ್ಲಿ ಭಾರತದಲ್ಲಿ ಮುಂಗಾರು ದುರ್ಬಲ: ಸ್ಕೈಮೆಟ್‌ ವರದಿ

ಸುಮೋಟೋ ಪ್ರಕರಣ ದಾಖಲಿಸಿದ ರಾಜ್ಯ ಮಾನವ ಹಕ್ಕು ಮತ್ತು ಮಕ್ಕಳ ಹಕ್ಕುಗಳ ಆಯೋಗ

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ಮಕ್ಕಳ ಹಕ್ಕುಗಳ ಆಯೋಗವು, ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದು, ಘಟನೆಯ ಕುರಿತು 15 ದಿನಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಮುಝಪ್ಪಿಲಂಗಾಡ್‌ ಪಂಚಾಯತ್ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಬಾಲಕಿ ಬಲಿ

ಉತ್ತರ ಪ್ರದೇಶದ ಆಗ್ರಾ ಬಳಿಯ ದೌಕಿ ಪ್ರದೇಶದ ಕುಯಿ ಕುಮಾರ್‌ಗಢ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದ ಕಾಂಚನ ಮತ್ತು ರಶ್ಮಿ ಎಂಬ ಬಾಲಕಿಯರಿಬ್ಬರ ಬೀದಿ ನಾಯಿಗಳ ಗುಂಪೊಂದು ಮೇಲೆ ದಾಳಿ ನಡೆಸಿದೆ. ಪರಿಣಾಮ ಐದು ವರ್ಷದ ಕಾಂಚನ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ರಶ್ಮಿಯನ್ನು ಆಗ್ರಾದ ಎಸ್‌ಎನ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X