ಬೀದರ್‌ | ಕೋಮು ಸೌಹಾರ್ದತೆ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಮಮತಾಜ್‌ ಅಲಿ

Date:

Advertisements

ಸಮಾಜದಲ್ಲಿ ಕೋಮು ಸೌರ್ಹಾದತೆಯ ಅರಿವು ಮೂಡಿಸಲು ಪ್ರತಿಯೊಬ್ಬರೂ ಕೈಜೋಡಿಸುವ ಅಗತ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಮುಖ್ಯಸ್ಥೆ ಮಮತಾಜ್ ಬೇಗಂ ಹೇಳಿದರು.

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಸಹಾರಾ ಗ್ರಾಮೀಣ ಅಭಿವೃದ್ಧಿ ಮತ್ತು ಶೈಕ್ಷಣಿಕ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಹಿಡಿಯುವಲ್ಲಿ ಕೋಮು ಸೌಹಾರ್ದತೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼಗ್ರಾಮೀಣ ಭಾಗದಲ್ಲಿ ಕೋಮು ಸೌಹಾರ್ದತೆ ಕಾಪಾಡಿಕೊಂಡು ಹೋಗಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಸಾರ್ವಜನಿಕರು ಎಲ್ಲರೂ ಒಂದೇ ಎನ್ನುವ ಭಾವದಿಂದ ಜೀವಿಸಿದರೆ ಯಾವುದೇ ಕಾನೂನಿನ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಎಲ್ಲ ಕೋಮಿನವರು ಭಾತೃತ್ವದಿಂದ ಬದುಕಬೇಕುʼ ಎಂದರು.

Advertisements

ಧನ್ನೂರ್‌ ಠಾಣೆ ಎಎಸ್‌ಐ ಬಾಪುರಾವ್‌ ಮಾತನಾಡಿ, ʼಇಡೀ ಮಾನವ ಜನಾಂಗಕ್ಕಾಗಿ ಹೋರಾಡಿದ ಡಾ.ಅಂಬೇಡ್ಕರ್‌ ಅವರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ಅಂಬೇಡ್ಕರ್‌ ಅವರ ಬದುಕು-ಹೋರಾಟದ ಆಶಯದಂತೆ ಮುನ್ನಡೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯʼ ಎಂದು ನುಡಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಸಹಾರಾ ಸಂಸ್ಥೆಯ ಅಧ್ಯಕ್ಷೆ ಕವಿತಾ ಓಂಕಾರ ಮಜಕೂರೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಭು ಕಾಂಬಳೆ ಮತ್ತು ತಂಡದವರು ಸುಗಮ ಸಂಗೀತ ನಡೆಸಿಕೊಟ್ಟರು. ಶಾಂತಮ್ಮ ಡೊಣಗಾಪುರ ಮತ್ತು ಕಲಾ ತಂಡದವರು ವಚನ ಗಾಯನ ನಡೆಸಿ, ಜಾನಪದ ಗೀತೆಗಳ ಮೂಲಕ ಕೋಮು ಸೌಹಾರ್ದತೆಯ ಜಾಗೃತಿ ಮೂಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ತುಕ್ಕು ಹಿಡಿಯುತ್ತಿವೆ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪಿಸಿದ ಶುದ್ಧ ನೀರಿನ ಘಟಕ!

ಗ್ರಾಪಂ ಅಧ್ಯಕ್ಷೆ ಜ್ಯೋತಿ ಷಣ್ಮುಖ, ಉಪಾಧ್ಯಕ್ಷ ರಾಜಕುಮಾರ ಪಾಟೀಲ್‌, ಸದಸ್ಯರಾದ ಶಾಮ ಪಾಟೀಲ್‌ ಹಾಗೂ ಓಂಕಾರ ಮಜಕೂರೆ, ರಾಜಕುಮಾರ ಪಾಟೀಲ, ಸಲೀಮ ಬಾಗವಾನ್, ಶಿಕ್ಷಕಿ ಸಾರಿಕಾ, ಸತ್ಯಕಲಾ, ಅಂಬುಜಾ, ಛಾಯಾ ಪ್ರಮುಖರಾದ ಶರಣಪ್ಪ, ರವೀಂದ್ರ ಕರಂಜೆ, ಸರೋಜಿನಿ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X