ವಿಜಯಪುರ | ಪೊಲೀಸರ ಅಕ್ರಮ ಪ್ರವೇಶ; ದಲಿತ ಕುಟುಂಬಕ್ಕೆ ಕಿರುಕುಳ ನೀಡಿದ ಅಧಿಕಾರಿಗಳ ಅಮಾನತಿಗೆ ಆಗ್ರಹ

Date:

Advertisements

ಮುಂಜಾನೆ 5-30ರ ಸುಮಾರಿಗೆ ಪೊಲೀಸರು ಅಕ್ರಮವಾಗಿ ಮನೆ ಪ್ರವೇಶ ಮಾಡಿದ್ದು, ದಲಿತ ಕುಟುಂಬಕ್ಕೆ ಕಿರುಕುಳ ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ.

ದಲಿತ ಕುಟುಂಬದ ಮನೆಯ ಬಾಗಿಲು ತಟ್ಟಿ ಮನೆಯಲ್ಲಿದ್ದ ಮಹಿಳೆಯರು, ಮಕ್ಕಳನ್ನು ಹೊರಹಾಕಿ ಅಕ್ರಮವಾಗಿ ಮನೆ ಪ್ರವೇಶ ಮಾಡಿದ್ದೂ ಅಲ್ಲದೆ ನೀವು ನಮಗೆ ಸಹಕರಿಸದಿದ್ದರೆ ನಿಮ್ಮ ಮೇಲೆ ಪ್ರಕರಣ ದಾಖಲಿಸುತ್ತೇವೆಂದು ಹೇಳಿ ಇಡೀ ಕುಟುಂಬವನ್ನು ಹೆದರಿಸಿರುವ ಘಟನೆ ಬೆಳಕಿಗೆ ಬಂದಿದೆ.

“ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದಲಿತ ಕುಟುಂಬವೊಂದು ತನ್ನ ಪರಿವಾರದೊಂದಿಗೆ ನಿದ್ರೆಯಲ್ಲಿ ಇರುವಾಗ ಸುಖಾಸುಮ್ಮನೆ ಪೊಲೀಸರು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಅಲ್ಲದೆ ಅವರನ್ನು ಮನೆಯಿಂದ ಹೊರಗೆಹಾಕಿ ಹೆದರಿಸಿರುವುದು ಖಂಡನೀಯ ಎಂದು ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ವಿಜಯಪುರ ಜಿಲ್ಲಾ ಸಮಿತಿಯ ಸಹ ಸಂಚಾಲಕ ಚೆನ್ನು ಕಟ್ಟಿಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements
ಪೊಲೀಸರ ಅಕ್ರಮ ಪ್ರವೇಶ 1

“ಬಸವಣ್ಣ ಹುಟ್ಟಿದ ನಾಡಿನಲ್ಲಿ ಇಂದಿಗೂ ಜಾತೀಯತೆ, ಅಸಮಾನತೆ ತಾಂಡವವಾಡುತ್ತಿದ್ದು, ಇಂತಹ ವಿಷಮ ಪರಿಸ್ಥಿತಿಯಲ್ಲಿ ಬಸವನ ಬಾಗೇವಾಡಿ ಪೋಲಿಸ್ ಅಧಿಕಾರಿಗಳೂ ಕೂಡಾ ದಲಿತರನ್ನು ನೋಡಿದರೆ ಸಾಕು ಮೈಮೇಲೆ ಹಾವು ಹರಿದಂತೆ ನಡೆದುಕೊಳ್ಳುತ್ತಿದ್ದಾರೆ. ಒಂದು ಕುಟುಂಬವನ್ನು ಸುಖಾ ಸುಮ್ಮನೆ ಮನೆಯಿಂದ ಹೊರಹಾಕಿ ತಪಾಸಣೆ ಮಾಡುವ ಅನಿವಾರ್ಯತೆ ಏನಿತ್ತು” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ರೈತರಿಗೆ ಗುಣಮಟ್ಟ, ಸಮರ್ಪಕ ವಿದ್ಯುತ್ ಪೂರೈಸಬೇಕು: ರೈತ ಸಂಘ ಆಗ್ರಹ

“ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಗಳು ಈ ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿ ಬಾಗೇವಾಡಿ ಪೊಲೀಸರು ದಲಿತ ಕುಟುಂಬಕ್ಕೆ ನೀಡುತ್ತಿರುವ ಕಿರುಕುಳವನ್ನು ತಪ್ಪಿಸಬೇಕು ಹಾಗೂ ಈ ಅಧಿಕಾರಿಗಳನ್ನು ಅಮಾನತು ಮಾಡಿ ಇಲಾಖಾ ತನಿಖೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X