ತೀರ್ಥಹಳ್ಳಿ | ಮಕ್ಕಳ ಮೌಲ್ಯಯುತ ಶಿಕ್ಷಣಕ್ಕೆ ಪೋಷಕರು ವಿಶೇಷ ಗಮನ ಹರಿಸಿ: ಸಚಿವ ಮಧು ಬಂಗಾರಪ್ಪ

Date:

Advertisements

ಪೋಷಕರು ತಮ್ಮ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಲು ಹಾಗೂ ಅವರ ಉಜ್ವಲ ಭವಿಷ್ಯ ನಿರ್ಮಿಸಲು ವಿಶೇಷ ಗಮನ ಹರಿಸಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಮನವಿ ಮಾಡಿದರು.

ಬೇಗುವಳ್ಳಿಯ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, “ಸರ್ಕಾರಿ ಶಾಲೆಗಳಲ್ಲಿ ಶ್ರೇಷ್ಠ ದರ್ಜೆಯ ಶಿಕ್ಷಕರಿದ್ದಾರೆ. ಈಗಾಗಲೇ ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ನೀರು ಮತ್ತು ವಿದ್ಯುತ್ತನ್ನು ಏಕಕಾಲಕ್ಕೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನೇಕ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ” ಎಂದರು.

1001273592

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ಅವರು ವ್ಯಾಸಂಗ ಮಾಡಿದ ಹೆಮ್ಮೆಯ ಶಾಲೆ ಇದಾಗಿರುವುದು ವಿಶೇಷವಾಗಿದೆ. ಈ ಶಾಲೆಯ ಕೊಠಡಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ನೆರವನ್ನು ಒದಗಿಸುವುದಾಗಿ ಅವರು ತಿಳಿಸಿದರು.

Advertisements

ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ ಇರುವ ಶಿಕ್ಷಕರ ಕೊರತೆ ನೀಗಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದರು.

1001273585

ರಾಜ್ಯದ ಪ್ರತಿ ಮನೆಯಲ್ಲೂ ಗ್ಯಾರಂಟಿ ಯೋಜನೆಗಳ ಪಲಾನುಭವಿಗಳಿರುವುದು ಸಂತಸದ ಸಂಗತಿಯಾಗಿದೆ. ಅಜೀಮ್ ಪ್ರೇಮ್ ಜಿ ಅವರ ಫೌಂಡೇಶನ್ ನೀಡಿದ 1591 ಕೋಟಿ ರೂಗಳ ಆರ್ಥಿಕ ನೆರವಿನೊಂದಿಗೆ ಶಾಲೆಯ ಎಲ್ಲಾ ಮಕ್ಕಳಿಗೆ ವಾರದ ಆರು ದಿನಗಳ ಕಾಲ ಬಿಸಿ ಊಟದ ಜೊತೆಗೆ ಪೌಷ್ಟಿಕ ಆಹಾರ, ಮೊಟ್ಟೆ, ಹಾಲು ವಿತರಿಸಲಾಗುತ್ತಿದೆ ಎಂದರು.

ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಆರ್‌.ಎಂ. ಮಂಜುನಾಥಗೌಡ ಅವರು ಮಾತನಾಡಿ, ಸರ್ಕಾರವು ನೂತನವಾಗಿ ಅನುಷ್ಠಾನಗೊಳಿಸಿರುವ ನಮ್ಮ ಶಾಲೆ ನಮ್ಮ ಜವಾಬ್ದಾರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ಅಲ್ಲದೆ ಮಂಡಳಿಯಿಂದ ಹಾಗೂ ವೈಯಕ್ತಿಕವಾಗಿ ಆರ್ಥಿಕ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ?:ತೀರ್ಥಹಳ್ಳಿ | ಭೀಕರ ಅಪಘಾತ; ಕಾರಿನಡಿ ಸಿಲುಕಿ ಮಹಿಳೆ ಸಾವು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X