ಮೈಸೂರು | ಡಾ ಬಾಬು ಜಗಜೀವನ ರಾಂ,ಡಾ ರಾಜ್ ಕುಮಾರ್ ಪ್ರತಿಮೆಗಳಿಗೆ ಮೇಲ್ಛಾವಣಿ ನಿರ್ಮಾಣ ಮಾಡುವಂತೆ ಆಗ್ರಹ

Date:

Advertisements

ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಹಾಗೂ ವರನಟ ಡಾ.ರಾಜ್ ಕುಮಾರ್ ರವರ ಪ್ರತಿಮೆಗಳಿಗೆ ಮೇಲ್ಟಾವಣಿ (ಮಂಟಪ) ನಿರ್ಮಾಣ ಮಾಡಬೇಕೆಂದು ಹೋರಾಟ ಸಮಿತಿಯು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪರವರನ್ನು ಆಗ್ರಹಿಸಿದ್ದಾರೆ.

ಮೈಸೂರು ನಗರದಲ್ಲಿ ಡಾ ಬಿ ಆರ್ ಅಂಬೇಡ್ಕರ್, ಕುವೆಂಪು, ಬಸವಣ್ಣ, ಪರಮಹಂಸ, ಜಯ ಚಾಮರಾಜೇಂದ್ರ ಒಡೆಯರ್, ಕೃಷ್ಣರಾಜ ಒಡೆಯರ್ ಇನ್ನಿತರ ನಾಯಕರುಗಳ ಪ್ರತಿಮೆಗಳಿಗೆ ಸುಂದರವಾದ ಮೇಲ್ಪಾವಣಿ, ಅತ್ಯಾಕರ್ಷಕವಾದ ಮಂಟಪ ನಿರ್ಮಾಣ ಮಾಡಿರುವುದು ಮೈಸೂರಿನ ಜನತೆಗೆ ಸಂತೋಷದ ವಿಷಯವಾಗಿರುತ್ತದೆ. ಅದೇ ರೀತಿ ಕನ್ನಡ ನಾಡಿನ ನಾಡು, ನುಡಿ, ನೆಲ, ಜಲ, ಸಾಹಿತ್ಯ, ಕನ್ನಡ ಚಲನ ಚಿತ್ರರಂಗ, ರಂಗಭೂಮಿ, ಪೌರಾಣಿಕ, ಐತಿಹಾಸಿಕ ನಾಟಕಗಳಿಗೆ ಸೇವೆ ಸಲ್ಲಿಸಿದ ಡಾ ರಾಜ್ ಕುಮಾರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನ ಮಂತ್ರಿ, ದಲಿತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಹೋರಾಟ ಮಾಡಿದಂತಹ ಡಾ ಬಾಬು ಜಗಜೀವನ ರಾಂ ರವರ ಪ್ರತಿಮೆಗಳಿಗೆ ಮೇಲ್ಬಾವಣಿ (ಮಂಟಪ) ಇಲ್ಲದಿರುವುದು ವಿಷಾದನೀಯವಾಗಿರುತ್ತದೆ.

ಈ ಕೂಡಲೇ ಈ ಸಾಲಿನ ಬಜೆಟ್‌ನಲ್ಲಿ ಇವರಿಬ್ಬರ ಮಹನೀಯರ ಪುತ್ಥಳಿಗಳಿಗೆ ಆಕರ್ಷಣೀಯವಾದ ಮೇಲ್ಪಾವಣಿ (ಮಂಟಪ) ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡಬೇಕಾಗಿ ಹೋರಾಟ ಸಮಿತಿಯ ಅಧ್ಯಕ್ಷರಾದ ಎಸ್ ರಾಜೇಶ್ ರವರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಆಗ್ರಹಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಒಕ್ಕಲಿಗರ ವಿಕಾಸ ವೇದಿಕೆಯಿಂದ ‘ಹತ್ತನೇ ಚಾಮರಾಜ ಒಡೆಯರ್ ಜಯಂತ್ಯುತ್ಸವ ‘

ಪತ್ರಿಕಾ ಗೋಷ್ಠಿಯಲ್ಲಿ ಮುಖಂಡರುಗಳಾದ ಹರಿಶ್ಚಂದ್ರ,ಕೆಪಿಸಿಸಿ ಸದಸ್ಯ ಬಿ ಜಿ ಕೇಶವ,ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ನಗರ ಕಾರ್ಯದರ್ಶಿ ರಾಮಣ್ಣ,ಕಾಂಗ್ರೆಸ್ ನಗರ ಉಪಾಧ್ಯಕ್ಷರಾದ ರವಿ, ಶ್ರೀನಿವಾಸ್ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X