ಜಾತಿ ದೌರ್ಜನ್ಯ | ಕುದುರೆ ಮೇಲೆ ಮೆರವಣಿಗೆ: ದಲಿತ ವರನ ಮೇಲೆ 40 ಮಂದಿ ಪ್ರಬಲ ಜಾತಿಯ ದುರುಳರಿಂದ ಹಲ್ಲೆ

Date:

Advertisements

ದಲಿತ ಸಮುದಾಯದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದ ಮೆರವಣಿಗೆಯಲ್ಲಿ ಕುದುರೆ ಮೇಲೆ ಸವಾರಿ ಮಾಡುತ್ತಿದ್ದ ವರನ ಮೇಲೆ ಪ್ರಬಲ ಜಾತಿಯ 40 ಮಂದಿ ದುರುಳರು ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

ಬುಲಂದ್‌ಶಹರ್‌ನ ಧಮ್ರಾವಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ದಲಿತ ವರ ಸೇರಿದಂತೆ ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಪ್ರಬಲ ಜಾತಿಯ ದುರುಳರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ. ವರನನ್ನು ಕುದುರೆಯಿಂದ ಎಳೆದು ಬೀಳಿಸಿದ್ದಾರೆ.

ಮೆರವಣಿಗೆ ಸಮಯದಲ್ಲಿ ಡಿಜೆ ಹಾಕಲಾಗಿತ್ತು. ವರನನ್ನು ಕುದುರೆ ಮೇಲೆ ಮೆರವಣಿಗೆ ಮಾಡಲಾಗುತ್ತಿತ್ತು. ಇದನ್ನು ಸಹಿಸದ ಪ್ರಬಲ ಜಾತಿಯವರು ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ.

Advertisements

ವರನ ಕುಟುಂಬಸ್ಥರಾದ ಭಗವತ್ ಸಿಂಗ್ ಅವರ ಪ್ರಕಾರ, ರಾತ್ರಿ 8 ಗಂಟೆ ಸುಮಾರಿಗೆ ಮೆರವಣಿಗೆ ನಡೆಯುತ್ತಿತ್ತು. ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆ ಸಂಗೀತವನ್ನು ವಿರೋಧಿಸಿದ ಠಾಕೂರ್ ಸಮುದಾಯದವರು ಗಲಾಟೆ ಮಾಡಿದರು. ಮದುವೆಗೆ ಬಂದಿದ್ದ ಅತಿಥಿಗಳಿಗೆ ಜಾತಿ ನಿಂದನೆ ಮಾಡಿ, ಕೋಲುಗಳು, ಕಬ್ಬಿಣದ ರಾಡ್‌ಗಳು ಮತ್ತು ಚೂಪಾದ ವಸ್ತುಗಳಿಂದ ಹಲ್ಲೆ ನಡೆಸಿದರು. ಹಲವರಿಗೆ ಗಾಯಗಳಾಗಿವೆ. ಗಾಯಾಳಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ರಿಜುಲ್ ಕುಮಾರ್ ಮತ್ತು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಈವರೆಗೆ ಐದು ಜನರನ್ನು ಬಂಧಿಸಲಾಗಿದೆ. ಗುರುತಿಸಲಾದ 30 ವ್ಯಕ್ತಿಗಳು ಮತ್ತು ಕೆಲವು ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

“ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 191(2) (ಗಲಭೆ), 126(2) (ಚಲನೆಗೆ ತಡೆ), 324 (4) (ಕಿಡಿಗೇಡಿತನ), 115 (2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 352 (ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (1) (ಬಿ) (ಸಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ರಿಜುಲ್ ಕುಮಾರ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X