ಬೆಳಗಾವಿ | ಫೈನಾನ್ಸ್ ಕಂಪನಿ ಕಿರುಕುಳ ಮಹಿಳೆ ಆತ್ಮಹತ್ಯೆ

Date:

Advertisements

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಸ್ವ ಹಾಗೂ ಸಹಾಯ ಸಂಘದ ಹೆಸರಿನಲ್ಲಿ ಸಾಲ ಮತ್ತು ಫೈನಾನ್ಸ್ ಕಂಪನಿ ಸಿಬ್ಬಂದಿಗಳ ಕಿರುಕುಳದಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ ತಾಲ್ಲೂಕಿನ ಯಮನಾಪುರ ಗ್ರಾಮದ ಹೊಳೆಪ್ಪ ದಡ್ಡಿ ಹಾಗೂ ಕುಟುಂಬದ ಇತರ ನಾಲ್ವರು ಸೇರಿ ಸ್ವಸಹಾಯ ಸಂಘ ತೆರೆದಿದ್ದರು. ಸರೋಜಾ ಅವರು ಹೆಚ್ಚಿನ ರಿಯಾಯಿತಿ ಸಿಗುತ್ತದೆ ಎಂಬ ಆಸೆಗೆ ದಡ್ಡಿ ಅವರ ಸಂಸ್ಥೆಯಿಂದ ಸಾಲ ಪಡೆದಿದ್ದರು. ಅರ್ಧದಷ್ಟು ಸಾಲ ಮಾತ್ರ ನೀವು ತುಂಬಬೇಕು, ಇನ್ನರ್ಧ ನಮ್ಮ ಸಂಸ್ಥೆ ಭರಿಸುತ್ತದೆ’ ಎಂದು ಸರೋಜಾ ಅವರನ್ನು ನಂಬಿಸಲಾಗಿತ್ತು ಎಂದು ಕಾಕತಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಹೊಳೆಪ್ಪ ದಡ್ಡಿ ಮತ್ತು ಕುಟುಂಬದವರು 7,000 ಮಹಿಳೆಯರನ್ನು ಈ ರೀತಿ ವಂಚಿಸಿದ್ದಾರೆ ಎಂಬ ಕಾರಣಕ್ಕೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆದರೆ, ಪಡೆದ ಸಾಲವನ್ನು ಪೂರ್ಣ ಪ್ರಮಾಣದಲ್ಲಿ ತುಂಬಬೇಕು ಎಂದು ಫೈನಾನ್ಸ್‌ನವರು ಸರೋಜಾ ಸೇರಿ ಹಲವರಿಗೆ ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದು ಸರೋಜಾ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಕತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X