ಲವ್ ಜಿಹಾದ್ ಭ್ರಾಂತಿ: ಕೋರ್ಟ್‌ನಲ್ಲಿ ಅಂತರ್‌ ಧರ್ಮೀಯ ದಂಪತಿ ಮೇಲೆ ವಕೀಲರಿಂದ ಹಲ್ಲೆ

Date:

Advertisements

ನ್ಯಾಯಾಲಯದಲ್ಲಿ ವಿಹಾಹ ನೋಂದಿಣಿ ಮಾಡಿಕೊಳ್ಳಲು ಬಂದಿದ್ದ ಅಂತರ್‌ ಧರ್ಮೀಯ ದಂಪತಿಗಳ ಮೇಲೆ ವಕೀಲರ ಗುಂಪು ಹಲ್ಲೆ ನಡೆಸಿರುವ ಅಮಾನುಷ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಮುಸ್ಲಿಂ ಯುವಕ ‘ಲವ್‌ ಜಿಹಾದ್‌’ ನಡೆಸುತ್ತಿದ್ದಾನೆಂದು ಆರೋಪಿಸಿರುವ ವಕೀಲರ ಗುಂಪು ಆತನ ಮೇಲೆ ಹಲ್ಲೆಗೈದಿದೆ.

ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ತಮ್ಮ ವಿವಾಹ ನೋಂದಣಿಗಾಗಿ ರೇವಾ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದರು. ಈ ವೇಳೆ, ವಕೀಲರು ಯುವತಿಯ ಹೆಸರು ಕೇಳಿದ್ದಾರೆ. ಆಧಾರ್ ಕಾರ್ಡ್‌ ತೋರಿಸುವಂತೆ ಒತ್ತಾಯಿಸಿದ್ದಾರೆ. ಆಕೆ ತನ್ನ ಹೆಸರು ಹೇಳುತ್ತಿದ್ದಂತೆಯೇ, ಇದು ‘ಲವ್‌ ಜಿಹಾದ್’ ಎಂದು ಆರೋಪಿಸಿ, ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ

ಹಲ್ಲೆಯ ಬಗ್ಗೆ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. “ಯುವತಿ ಹಿಂದು ಹೆಸರನ್ನು ಹೊಂದಿದ್ದು, ಬುರ್ಖಾ ಧರಿಸಿದ್ದರು. ಇದರಿಂದ, ವಕೀಲರು ಸಿಟ್ಟಾಗಿದ್ದಾರೆ. ಆಕೆ ಮೇಲ್ಜಾತಿಗೆ ಸೇರಿದ ಹಿಂದುವಾಗಿದ್ದು, ಆಕೆಯನ್ನು ಮುಸ್ಲಿಂ ಯುವಕ ‘ಲವ್‌ ಜಿಹಾದ್‌’ ಬಲೆಗೆ ಬೀಳಿಸಿದ್ದಾರೆಂದು ವಕೀಲರು ಆರೋಪಿಸಿ, ಥಳಿಸಿದ್ದಾರೆ. ನಾವು ಯುವಕನನ್ನು ರಕ್ಷಿಸಿದ್ದೇವೆ. ಕೋರ್ಟ್‌ ಆವರಣದಿಂದ ಹೊರಗೆ ಕರೆತಂದಿದ್ದೇವೆ. ಯುವತಿಯನ್ನು ಹತ್ತಿರದ ಸುರಕ್ಷಿತ ಸ್ಥಳದಲ್ಲಿ ಇರಿಸಿದ್ದೇವೆ” ಎಂದು ಸಿವಿಲ್‌ ಲೈನ್ಸ್‌ ಪೊಲೀಸ್‌ ಅಧಿಕಾರಿ ಕಮಲೇಶ್‌ ಸಾಹು ತಿಳಿಸಿದ್ದಾರೆ.

Advertisements

“ಸಂತ್ರಸ್ತ ಯುವಕ ಮತ್ತು ಯುವತಿ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರೀತಿಸುತ್ತಿದ್ದರು. ಮದುವೆಯಾಗಲು ನಿರ್ಧರಿಸಿದ್ದರು. ಆದರೆ, ಅವರ ಪ್ರೀತಿಗೆ ಕುಟುಂಬಸ್ಥರು ಒಪ್ಪದ ಕಾರಣ, ನ್ಯಾಯಾಲಯದಲ್ಲಿ ವಿವಾಹವಾಗಿ, ವಿವಾಹ ನೋಂದಣಿ ಮಾಡಿಸಿಕೊಳ್ಳಲು ಬಂದಿದ್ದರು” ಎಂದು ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಈ ವರದಿ ಓದಿದ್ದೀರಾ?: ಕೋಮುದ್ವೇಷದ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಯುವಕನ ಶರ್ಟ್‌ ಹರಿದು, ಹಲ್ಲೆ ನಡೆಸಲಾಗಿದೆ. ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ವರದಿಯಾಗಿದೆ. ಹಲ್ಲೆ ಘಟನೆಯಲ್ಲಿ ವಕೀಲರು ಭಾಗಿಯಾಗಿಲ್ಲವೆಂದು ರೇವಾ ಬಾರ್ ಅಸೋಸಿಯೇಷನ್ ಹೇಳಿಕೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X