ಉಡುಪಿ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ – ದಯಾನಂದ

Date:

Advertisements

ಮನೆಯ ಕಸವನ್ನು ರಸ್ತೆಗೆ ಎಸೆಯದೆ ಅದನ್ನು ಕಾಂಪೋಸ್ಟ್ ಗೊಬ್ಬರವಾಗಿಸಿ ಉಪಯೋಗಿಸುವುದರಿಂದ ತೋಟದ ಫಲವತ್ತತೆ ಹೆಚ್ಚಿಸಬಹುದು ಈ ಮೂಲಕ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ ಬೀಳುವುದನ್ನು ತಪ್ಪಿಸಿ ಪರಿಸರವನ್ನು ಸ್ವಚ್ಚವಾಗಿಸಿಡಬಹುದು ಎಂದು ತೆಂಕನಿಡಿಯೂರು ಗ್ರಾಮಪಂಚಾಯತ್ ಅಭಿವೃದ್ಧಿಸ ಅಧಿಕಾರಿ ದಯಾನಂದ ಹೇಳಿದರು.

ಅವರು ಭಾನುವಾರ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಸಭಾಂಗಣದಲ್ಲಿ ಚರ್ಚಿನ ಪರಿಸರ ಆಯೋಗ, ಸಮನ್ವಯ ಸರ್ವ ಧರ್ಮ ಸೌಹಾರ್ದ ಸಮಿತಿ ತೊಟ್ಟಂ, ತೆಂಕನಿಡಿಯೂರು ಮತ್ತು ಬಡಾನಿಡಿಯೂರು ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಕೃತಿ – ಪರಿಸರ ಸಂರಕ್ಷಣೆ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು
ಜನರು ಪರಿಸರದ ಮೇಲೆ ಕಾಳಜಿ ತೋರದಿದ್ದರೆ ಮುಂದೊಂದು ಇಡೀ ಜೀವ ಸಂಕುಲಕ್ಕೆ ಆಪತ್ತು ಎದುರಾಗುವ ಸಾಧ್ಯತೆ ಇದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಮರ ಗಿಡಗಳನ್ನು ಬೆಳೆಸುವುದರಿಂದ ತಾಪಮಾನ ತಗ್ಗಲು ಸಾಧ್ಯವಿದೆ ಎಂದರು.

1004508431

ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಪರಿಸರ ಅಸಮತೋಲನದಿಂದಲೇ ಹವಾಮಾನ ವೈಪರಿತ್ಯ ಉಂಟಾಗುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಪರಿಸರ ರಕ್ಷಣೆಗೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿದೆ. ಪ್ರತಿಯೊಂದು ಜೀವರಾಶಿಗೆ ಪರಿಸರ ಅತ್ಯಂತ ಅಮೂಲ್ಯ ಕೊಡುಗೆಯಾಗಿದ್ದು ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು ಎಂದೆಂದಿಗೂ ಉಳಿಯಬೇಕು. ಪ್ರತಿಯೊಬ್ಬರೂ ಕೂಡ ಪರಿಸರದ ಮೇಲೆ ಅವಲಂಭಿತರಾಗಿದ್ದು ಅದಕ್ಕಾಗಿ ಪರಿಸರ ಸಂರಕ್ಷಿಸಲು ಮುಂದಾಗಬೇಕು ಎಂದರು.
ಸಮನ್ವಯ ಸರ್ವ ಧರ್ಮ ಸೌಹಾರ್ದ ಸಮಿತಿ ತೊಟ್ಟಂ ಇದರ ಅಧ್ಯಕ್ಷರಾದ ರಮೇಶ್ ತಿಂಗಳಾಯ ಮಾತನಾಡಿ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯತೆ ಇಂದಿನ ದಿನಗಳಲ್ಲಿ ಮುಖ್ಯವಾಗಿ ಆಗಬೇಕಾಗಿದೆ. ಪರಿಸರದಲ್ಲಿ ಕಸದ ಸಮಸ್ಯೆ ಹೆಚ್ಚಾಗುತ್ತಿದ್ದು ಇದರ ಸೂಕ್ತ ನಿರ್ವಹಣೆ ಬಗ್ಗೆ ಪಂಚಾಯತ್ ಗಳು ಗಮನ ಹರಿಸಬೇಕು ಇದರೊಂದಿಗೆ ಜನರು ಸಹ ಕಸವನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ನಿಲ್ಲಿಸಬೇಕು ಎಂದರು.

Advertisements

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಸ್ಟೀವನ್ ಕ್ವಾಡ್ರಸ್ ಪೆರ್ಮುದೆ ಅವರು ಪರಿಸರ ನಾಶದಿಂದ ಆಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.
ತೆಂಕನಿಡಿಯೂರು ಮತ್ತು ಬಡಾನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಡಿ ನಾಯ್ಕ್, ಬಡಾನಿಡಿಯೂರು ಗ್ರಾಪಂ ಅಧ್ಯಕ್ಷೆ ಯಶೋಧಾ ಆಚಾರ್ಯ, ಪಂಚಾಯತ್ ಕಾರ್ಯದರ್ಶಿ ಗುರುರಾಜ್, ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಸುನೀಲ್ ಫೆರ್ನಾಂಡಿಸ್, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, 20 ಆಯೋಗಗಳ ಸಂಯೋಜಕಿ ವನಿತಾ ಫೆರ್ನಾಂಡಿಸ್, ಕಾನ್ವೆಂಟಿನ ಮುಖ್ಯಸ್ಥರಾದ ಸಿಸ್ಟರ್ ಸುಶ್ಮಾ, ಸಮನ್ವಯ ಸರ್ವ ಧರ್ಮ ಸೌಹಾರ್ದ ಸಮಿತಿ ತೊಟ್ಟಂ ಉಪಾಧ್ಯಕ್ಷರಾದ ಶಬೀರ್ ಸಾಹೇಬ್, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಶರತ್ ಶೆಟ್ಟಿ, ಮೀನಾ ಪಿಂಟೊ, ಯಾದವ ಹಾಗೂ ಇತರರು ಉಪಸ್ಥಿತರಿದ್ದರು.

ಸಮನ್ವಯ ಸರ್ವ ಧರ್ಮ ಸೌಹಾರ್ದ ಸಮಿತಿ ತೊಟ್ಟಂ ಕಾರ್ಯದರ್ಶಿ ಲೆಸ್ಲಿ ಆರೋಜಾ ಸ್ವಾಗತಿಸಿ, ಪರಿಸರ ಆಯೋಗದ ಸಂಚಾಲಕರಾದ ಜೊಸೇಫ್ ಪಿಂಟೊ ವಂದಿಸಿದರು. ಲವೀನಾ ಎ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X