ದಕ್ಷಿಣ ಕನ್ನಡ | ಉತ್ತಮ ಬಡ್ಡಿ ದರದೊಂದಿಗೆ ಅಂಚೆ ಯೋಜನೆ;‌ ಖಾತೆ ತೆರೆಯಲು ಕೆಲವೇ ದಿನ ಬಾಕಿ

Date:

Advertisements

ಉತ್ತಮ ಬಡ್ಡಿಯನ್ನು ಒದಗಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ  ಯೋಜನೆಯಡಿ ಖಾತೆ ತೆರೆಯಲು ಕೆಲವೇ ದಿನಗಳು ಬಾಕಿ ಇವೆ.

ಮಹಿಳಾ ಸಮ್ಮಾನ್‌ ಉಳಿತಾಯ ಖಾತೆ ಕುರಿತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ವರ್ಷ ಮಂಗಳೂರು ವಿಭಾಗದಲ್ಲಿ 23793 ಮಹಿಳಾ ಸಮ್ಮಾನ್‌ ಉಳಿತಾಯ ಖಾತೆ ರಚನೆಯಾಗಿದ್ದವು. ಈ ವರ್ಷ ಹತ್ತು ತಿಂಗಳ ಅವಧಿಯಲ್ಲಿ ಸುಮಾರು 11194 ಖಾತೆಗಳು ರಚನೆಯಾಗಿ ಮಾಹಿಳೆಯರು ನಗದು ಠೇವಣಿ ಇರಿಸಿದ್ದಾರೆ.

2023ರ ಏಪ್ರಿಲ್‌ 01ರಿಂದ ಜಾರಿಗೆ ಬಂದಿರುವ ಈ ಯೋಜನೆಯು ಇದೇ ಮಾರ್ಚ್‌ 31ರಂದು ಮುಕ್ತಾಯಗೊಳ್ಳಲಿದೆ. ಎರಡು ವರ್ಷದ ಅವಧಿಗೆ ಮಹಿಳೆಯರು ಈ ಯೋಜನೆಯಡಿ ಠೇವಣಿ ಇಡಲು ಅವಕಾಶವಿದೆ. ಕನಿಷ್ಟ 1 ಸಾವಿರದಿಂದ 2 ಲಕ್ಷಗಳ ವರೆಗೆ ಠೇವಣಿ ಇಟ್ಟರೆ ಶೇ. 7.5ರಷ್ಟು ಆಕರ್ಷಕ ಬಡ್ಡಿಯೊಂದಿಗೆ 2 ವರ್ಷದ ನಂತರ ಹಣವನ್ನು ಹಿಂದಿರುಗಿಸುವ ಯೋಜನೆ ಇದಾಗಿದೆ. ಮಹಿಳಾ ಸಬಲೀಕರಣವನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ಈ ನಡೆಗೆ ಮುಂದಾಗಿದೆ.

Advertisements

2 ಲಕ್ಷ ಠೇವಣಿ ಇರಿಸಿದ ಖಾತೆದಾರರಿಗೆ ಬಡ್ಡಿ ಸಹಿತ 2,32,044 ರೂ ಹಣವನ್ನು ಹಿಂದಿರುಗಿಸಲಾಗುತ್ತದೆ. ಚಿಕ್ಕಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದ ಮಹಿಳೆಯರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಒಬ್ಬ ಮಹಿಳೆಗೆ ಒಂದೇ ಠೇವಣಿಗೆ ಅವಕಾಶವಿದ್ದು, ಮತ್ತೊಮ್ಮೆ ಠೇವಣಿ ಇಡ ಬಯಸಿದರೆ ಮೂರು ತಿಂಗಳ ಬಳಿಕ ಇಡಬಹುದಾಗಿದೆ.

ಈ ಸುದ್ದಿ ಓದಿದ್ದೀರಾ?:ದಕ್ಷಿಣ ಕನ್ನಡ | ಬಜಾಲ್ ವಾರ್ಡ್ ಅಭಿವೃದ್ಧಿಗೆ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ: ಡಿವೈಎಫ್ಐ ಆರೋಪ

ಎಲ್ಲಾ ವರ್ಗದ ಮಹಿಳೆಯರಿಗೆ ಈ ಯೋಜನೆ ಅನುಕೂಲವಾಗಲಿದ್ದು, ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅಂಚೆ ಇಲಾಖೆ ಪ್ರಕಟಣೆ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X