ಕೊಪ್ಪಳದ ಹಣ್ಣುಗಳ ಪ್ರದರ್ಶನ ಮೇಳದಲ್ಲಿ 8 ಲಕ್ಷ ರೂ. ಬೆಲೆಯ ಜಗತ್ತಿನ ದುಬಾರಿ ದ್ರಾಕ್ಷಿ ಮಾರಾಟ

Date:

Advertisements

ಇಂದು ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ವಿವಿಧ ಹಣ್ಣುಗಳ ಮಾರಾಟ ಮತ್ತು ಪ್ರದರ್ಶನ ಮೇಳವನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಿದರು.

ಈ ಮೇಳದಲ್ಲಿ ತೋಟಗಾರಿಕೆ ಇಲಾಖೆಯಿಂದ ಪ್ರದರ್ಶನಕ್ಕೆ ಇಡಲಾಗಿದ್ದ, ಜಗತ್ತಿನ ದುಬಾರಿ ದ್ರಾಕ್ಷಿಯಾದ ರೂಬಿ ರೋಮನ್ ದ್ರಾಕ್ಷಿಯು ಎಲ್ಲರ ಗಮನ ಸೆಳೆದಿದೆ, ಈ ತಳಿಯ ಒಂದು ಕೆಜಿ ದ್ರಾಕ್ಷಿಯು ಎಂಟು ಲಕ್ಷ ರೂಪಾಯಿ ಬೆಲೆಬಾಳುತ್ತದೆ.

ಈ ತಳಿಯು ಜಪಾನ್ ದೇಶದಾಗಿದ್ದು, ಅಲ್ಲಿನ ಇಶಿಕಾವಾ ಪ್ರಿಫೆಕ್ಚರ್‌ನಲ್ಲಿ ಬೆಳೆಸಲಾಗುತ್ತದೆ. ಅಲ್ಲಿಂದ ಮುಂಬೈ ಮುಖಾಂತರ ಕೊಪ್ಪಳಕ್ಕೆ ತರಿಸಿ ಜನರಿಗೆ ತೋರಿಸುವ ಮತ್ತು ಅದನ್ನು ಇಲ್ಲಿನ ರೈತರು ಬೆಳೆಸುವ ಸಲುವಾಗಿ ತರಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

ರೂಬಿ ರೋಮನ್ ಒಂದು ಬಗೆಯ ಟೇಬಲ್ ದ್ರಾಕ್ಷಿಯಾಗಿದ್ದು, ರೂಬಿ ರೋಮನ್ ತಳಿಯ ಪ್ರತಿ ದ್ರಾಕ್ಷಿಯು ಸಾಮಾನ್ಯ ದ್ರಾಕ್ಷಿಗಿಂತ ಶೇ.18 ಕ್ಕಿಂತ ಹೆಚ್ಚು ಸಕ್ಕರೆಯ ಅಂಶವನ್ನು ಹೊಂದಿರುತ್ತದೆ, ಇದರ ಜೊತಗೆ ಇದು ಉತ್ಕರ್ಷಣ ನಿರೋಧಕಗಳನ್ನು ಹೆಚ್ಚಾಗಿ ಹೊಂದಿದ್ದು, ಮಿಟಮಿನ್ ಸಿ ಅನ್ನು ಹೊಂದಿರುತ್ತದೆ.

ತೋಟಗಾರಿಕೆ ಇಲಾಖೆಯ ಉಪನಿರ್ದೆಶಕ ಕೃಷ್ಣ ಉಕ್ಕುಂದ್ ಅವರು, ರೈತರಿಗೆ ಅನುಕೂಲ ವಾಗುವಂತೆ ಕೃಷಿ ಮೇಳವನ್ನು ಆಯೋಜಿಸಿ ರೈತರಿಂದ ನೇರವಾಗಿ ಜನರಿಗೆ ತಲುಪಿಸುವಂತಹ ಕೆಲಸ ಮಾಡುತಿದ್ದಾರೆ, ಕಳೆದ ವರ್ಷ ಜಗತ್ತಿನ ದುಬಾರಿ ಮಾವಿನ ಹಣ್ಣು ಮಿಯಾ ಜಾಕಿ ಅನ್ನು ಪ್ರದರ್ಶಕ್ಕೆ ತರಲಾಗಿತ್ತು, ಮಿಯಾ ಜಾಕಿತಳಿಯನ್ನು ಇಲ್ಲಿನ ರೈತರಿಂದ ಬೆಳಸಲಾಗುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿ ಬೇಡಿಕೆ ಈಡೇರಿಸುವಂತೆ ಸಾಮೂಹಿಕ ಪ್ರತಿಭಟನೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ...

ದರೋಡೆ ಮಾಡಿ ಕೊಡುಗೆ ನೀಡುವ ಮಾಡರ್ನ್ ರಾಬಿನ್ ಹುಡ್- ಮೋದಿ!

ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ...

ಕೊಪ್ಪಳ | ಗವಿಸಿದ್ದಪ್ಪನ ಕೊಲೆ ಪ್ರಕರಣ: ಮೃತನ ತಾಯಿ-ತಂದೆ, ಸಹೋದರಿಯರ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕೊಪ್ಪಳ ನಗರದಲ್ಲಿ ಪ್ರೀತಿ ವಿಚಾರವಾಗಿ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಪ್ರಕರಣವು ದಿನಕ್ಕೊಂದು...

Download Eedina App Android / iOS

X