ಕೇರಳ | ಸಹಪಾಠಿಯಿಂದ ಇರಿತ; ಮಿಜೋರಾಂನ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Date:

Advertisements

ಮಿಜೋರಾಂನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜಿನ ಬಳಿ ತನ್ನ ಸಹಪಾಠಿಯಿಂದ ಇರಿತಕ್ಕೊಳಗಾಗಿ ಮೃತಪಟ್ಟಿದ್ದು, ಆರೋಪಿ ಸಹಪಾಠಿ ಕೂಡಾ ಈಶಾನ್ಯ ರಾಜ್ಯದ ವಿದ್ಯಾರ್ಥಿಯಾಗಿದ್ದಾನೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿಯನ್ನು ವಿ.ಎಲ್. ವ್ಯಾಲೆಂಟೈನ್ (23) ಎಂದು ಗುರುತಿಸಲಾಗಿದ್ದು, ನಾಗರೂರ್ ನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಾಲ್ಕನೆ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದನು. ಈ ಸಂಬಂಧ ಆರೋಪಿ ಸಹಪಾಠಿ ಲಾಮ್ಸಾಂಗ್ ಸ್ವಾಲಾ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದೂ ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

Advertisements

ಪೊಲೀಸರ ಪ್ರಕಾರ, ಈ ಘಟನೆ ಶನಿವಾರ ಬೆಳಗ್ಗೆ ಸುಮಾರು 10.45 ಗಂಟೆಗೆ ಕಾಲೇಜಿನ ಬಳಿ ನಡೆದಿದೆ.
ವಿದ್ಯಾರ್ಥಿಗಳ ಗುಂಪೊಂದು ಮದ್ಯ ಸೇವಿಸುತ್ತಿದ್ದಾಗ ಅವರ ನಡುವೆ ವಾಗ್ವಾದ ಸ್ಫೋಟಗೊಂಡು, ಈ ಘರ್ಷಣೆಯ ಸಂದರ್ಭದಲ್ಲಿ ವ್ಯಾಲೆಂಟೈನ್ ಗೆ ಚಾಕುವಿನಿಂದ ಇರಿಯಲಾಗಿದೆ. ತಕ್ಷಣವೇ ಗಾಯಗೊಂಡ ವಿದ್ಯಾರ್ಥಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ನಂತರ, ಆತನನ್ನು ತಿರುವನಂತಪುರಂನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ, ಆತ ಬದುಕುಳಿಯಲಿಲ್ಲ ಎಂದೂ ಪೊಲೀಸರು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X