ಗುಬ್ಬಿ | ಕೊಪ್ಪ ಗ್ರಾಮದಲ್ಲಿ ರಾಜ್ಯ ರೈತ ಸಂಘದ ಗ್ರಾಮ ಶಾಖೆ ಉದ್ಘಾಟಿಸಿದ ಎ ಗೋವಿಂದರಾಜು

Date:

Advertisements

 ಕೇಂದ್ರ ಸರ್ಕಾರಕ್ಕಾಗಲಿ ರಾಜ್ಯ ಸರ್ಕಾರಕ್ಕಾಗಲಿ ರೈತರ ಹಿತ ಕಾಯುವ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಕಿಡಿಕಾರಿದರು.

 ಗುಬ್ಬಿ   ತಾಲೂಕಿನ ಕಡಬ ಹೋಬಳಿಯ ಕೊಪ್ಪ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೂತನ ಗ್ರಾಮ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ರೈತರು ಮಾಡಿದ್ದ ನಿರಂತರ ಹೋರಾಟದಿಂದಾಗಿ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಆದರೆ ಈಗ ರೈತನ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಹೊರಟಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ರೈತರ ಜೇಬಿಗೆ ಕತ್ತರಿಯನ್ನು ಹಾಕುತ್ತಿದೆ. ಈ ಬೆಳವಣಿಗೆಯ ಬಗ್ಗೆ ರೈತರು ಧ್ವನಿಯೆತ್ತಬೇಕಿದೆ. ಇಂದು ಕೊಪ್ಪ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಶಾಖೆಯ ಸ್ಥಾಪನೆಯಾಗಿರುವುದು ರೈತರನ್ನು ಸಂಘಟಿಸುವುದು ಅನಿವಾರ್ಯವಾಗಿದೆ ಹಾಗೂ ಕೃಷಿ ಸಂಕಷ್ಟದಲ್ಲಿದೆ. ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸರ್ಕಾರ ಬೆಂಬಲ ಬೆಲೆಯನ್ನು ನೀಡಿದರೆ ರೈತರು ಸಾಲಗಾರಾಗುವ ಅವಶ್ಯಕತೆ ಇರುವುದಿಲ್ಲ. ರೈತರು ಬೆಳೆದ ಬೆಳೆಗಳಿಗೆ ಸರ್ಕಾರ ಉತ್ತಮ ಬೆಲೆ ನಿಗದಿ ಮಾಡಿದರೆ ರಾಷ್ಟ್ರದಲ್ಲಿ ಆರ್ಥಿಕತೆಯು ಹೆಚ್ಚಾಗುತ್ತದೆ. ಯಾವುದು ಸುಮ್ಮನೆ ನಮ್ಮ ಬಳಿ ಬರುವುದಿಲ್ಲ ಎಲ್ಲವನ್ನು ಹೋರಾಟದ ಮೂಲಕ ಚಳುವಳಿಯ ಮೂಲಕವೇ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ರೈತರು ಸಂಘಟಿತರಾದರೆ ಬಂಡವಾಳ ಶಾಹಿ ಸರ್ಕಾರಗಳನ್ನು ಎಚ್ಚರಿಸಬಹುದು ಎಂದು ತಿಳಿದರು.

1001090407

ರೈತ ಸಂಘದ ತಾಲೂಕು ಅಧ್ಯಕ್ಷ ವೆಂಕಟೇಗೌಡ ಮಾತನಾಡಿ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಮದ್ಯವರ್ತಿ ಬಂದು ಬೆಲೆ ನಿಗದಿ ಮಾಡುತ್ತಾನೆ. ರೈತರು ಬೆಳೆದ ಬೆಳೆಗಳಿಗೆ ರೈತನೇ ಬೆಲೆ ನಿಗದಿ ಮಾಡಿ ಮಾರಾಟ ಮಾಡಬೇಕು. ಇದರಿಂದ ರೈತರ ಜೀವನ ಮಟ್ಟ ಹಾಗೂ ಆರ್ಥಿಕತೆ ಸುಧಾರಿಸುತ್ತದೆ. ಇಂದು ಜನರು ಆರಿಸಿರುವ ಸರ್ಕಾರಗಳು ನಗರಗಳನ್ನು ವೈಭವೀಕರಿಸುತ್ತಿವೆ. ನಗರಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿವೆ ಯುವಕರು ಕೃಷಿ ಮಾಡುವುದನ್ನು ಬಿಟ್ಟು ನಗರಗಳತ್ತ ವಲಸೆ ಹೋಗುತ್ತಿದ್ದಾರೆ ಇದನ್ನು ಮನಗಂಡು ಸರ್ಕಾರಗಳು ಹಳ್ಳಿಗಳ ಅಭಿವೃದ್ಧಿಗೆ ಹೆಚ್ಚು ಹೆಚ್ಚು ಯೋಜನೆಗಳನ್ನು ರೂಪಿಸಬೇಕಿದೆ ಎಂದು ತಿಳಿಸಿದರು.

Advertisements

ಇದೇ ಸಂದರ್ಭದಲ್ಲಿ ರೈತ ಸಂಘದ ಕಾರ್ಯಾಧ್ಯಕ್ಷ ಗುರು ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಸಿ ಜಿ ಲೋಕೇಶ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಿರಿಜಮ್ಮ, ಪಿ ಟಿ ಕುಮಾರ್, ಸಿದ್ದಲಿಂಗಪ್ಪ,

ರೈತ ಸಂಘದ ತಾಲ್ಲೂಕು ಉಪಾಧ್ಯಕ್ಷ ಬಸವರಾಜಪ್ಪ ಹೋಬಳಿ ಅಧ್ಯಕ್ಷ ಯತೀಶ್ ವೆಂಕಟೇಶ್, ಲೋಕೇಶ್, ಸೇರಿದಂತೆ ಕೊಪ್ಪ ಗ್ರಾಮ ಶಾಖೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X