ಸುರ್ಜೇವಾಲ ಇದ್ದ ಸಭೆ ಸರ್ಕಾರದ ಅಧಿಕೃತ ಸಭೆಯಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements
  • ಸುರ್ಜೇವಾಲ ವಿರುದ್ದ ರಾಜ್ಯಪಾಲರಿಗೆ ದೂರು ನೀಡಲು ಮುಂದಾದ ಬಿಜೆಪಿ
  • ಸಂಸದ ಪ್ರತಾಪ್ ಸಿಂಹ ಎಳಸು, ಆತನಿಗೆ ರಾಜಕೀಯ ಪಕ್ವತೆ ಇಲ್ಲ ಎಂದ ಸಿಎಂ

ಬಿಬಿಎಂಪಿ ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಡೆಸಿದ್ದ ಸಭೆ ಸರ್ಕಾರದ ಅಧಿಕೃತ ಸಭೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಪಕ್ಷದ ಶಾಸಕರೊಂದಿಗೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸುತ್ತಿದ್ದರು. ಅದು ಅಧಿಕಾರಿಗಳ ಸಭೆಯಲ್ಲ ಎಂದು ಸಿಎಂ ಹೇಳಿ, ಸಭೆ ಹಿನ್ನೆಲೆ ವಿವರಿಸಿದರು.

ಇತ್ತ ಸಭೆ ನಡೆಯುತ್ತಿದ್ದ ಸಂದರ್ಭದಲ್ಲೇ ಹೆಬ್ಬಾಳ ಸಂಚಾರದಟ್ಟಣೆ ಪರಿಶೀಲಿಸಲು ಡಿಸಿಎಂ ಶಿವಕುಮಾರ್ ಆ ಮಾರ್ಗ ತೆರಳುತ್ತಿದ್ದರು. ಅವರು ಸುರ್ಜೇವಾಲರನ್ನು ಭೇಟಿ ಮಾಡಲು ತೆರಳಿದಾಗ ಜೊತೆಯಲ್ಲಿದ್ದ ಅಧಿಕಾರಿಗಳು ಅವರೊಂದಿಗೆ ತೆರಳಿ ಸೌಜನ್ಯದ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು.

Advertisements

ಸುರ್ಜೇವಾಲಗೆ ಅಧಿಕಾರಿಗಳ ಸಭೆ ಕರೆಯಲು ಆಗುತ್ತದೆಯೇ? ಅಥವಾ ಅವರೇಕೆ ಹಾಗೆ ಮಾಡುತ್ತಾರೆ ಎಂದ ಸಿದ್ದರಾಮಯ್ಯ ಕುಮಾರಸ್ವಾಮಿ ಸುಮ್ಮನೆ ಇಲ್ಲದ ಆರೋಪ ಮಾಡುತ್ತಾರೆ ಎಂದರು.

ಬಿಜೆಪಿಯವರು ಸಣ್ಣಸಣ್ಣ ವಿಚಾರವನ್ನು ದೊಡ್ಡದು ಮಾಡುತ್ತಾರೆ. ಈ ವಿಚಾರದಲ್ಲಿ ಅವರೇನೋ ರಾಜ್ಯಪಾಲರಿಗೆ ದೂರು ಕೊಡುತ್ತಾರಂತೆ, ಕೊಡಲಿ ಬಿಡಿ. ನಾವೂ ರಾಜ್ಯಪಾಲರಿಗೆ ವಿಚಾರದ ಸ್ಪಷ್ಟನೆ ನೀಡುತ್ತೇವೆ ಎಂದು ಹೇಳಿದರು.

ಪ್ರತಾಪ್ ಸಿಂಹ ಎಳಸು

ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಆತ ಎಳಸು, ಆತನಿಗೆ ರಾಜಕೀಯದ ಪಕ್ವತೆ ಇಲ್ಲ. ಬಾಯಿಗೆ ಬಂದಂತೆ ಏನೇನೋ ಮಾತಾಡ್ತಾನೆ ಎಂದ ಸಿಎಂ ಆರೋಪ ಮಾಡುವ ಆತ ಮೊದಲು ನೇರವಾಗಿ ಹೊಂದಾಣಿಕೆ ಮಾಡಿಕೊಂಡವರ ಹೆಸರು ಹೇಳಲಿ. ಅದಕ್ಕೇಕೆ ಹಿಂಜರಿಕೆ ಎಂದರು.

ಈ ಸುದ್ದಿ ಓದಿದ್ದೀರಾ?:ಧಮ್ಮು, ತಾಕತ್ತು ಇದ್ದರೆ ಅಡ್ಜಸ್ಮೆಂಟ್ ಮಾಡಿಕೊಂಡವರ ಹೆಸರು ಹೇಳಿ: ಸಿ ಟಿ ರವಿಗೆ ಕಾಂಗ್ರೆಸ್ ಸವಾಲು

ಪ್ರತಾಪ್ ಸಿಂಹ ಹೇಳಿದ ತಕ್ಷಣ ಅವನು ಆಗ್ರಹಿಸುವ ವಿಚಾರಗಳ ತನಿಖೆ ಮಾಡಿಸಲು ಆಗುತ್ತದೆಯೇ? ನಾವು ಯಾವಾಗ ಯಾವುದರ ತನಿಖೆ ಮಾಡಿಸಬೇಕು, ಯಾರಿಂದ ತನಿಖೆ ಮಾಡಿಸಬೇಕು ಎನ್ನುವುದನ್ನು ತಿಳಿದುಕೊಂಡಿದ್ದೇವೆ ಎಂದು ಪ್ರತಾಪ್ ಸಿಂಹಗೆ ತಿರುಗೇಟು ನೀಡಿದರು.

ನಾನು ಅಧಿಕಾರದಲ್ಲಿರುವಾಗ ವಿಪಕ್ಷದವರ ಜತೆ ಮಾತಾಡುವುದಿಲ್ಲ. ಅವರ ಮನೆಗೂ ಹೋಗುವುದಿಲ್ಲ, ಅವರೇ ಏನಾದರೂ ಬಂದರೆ ಸೌಜನ್ಯಕ್ಕೆ ಮಾತನಾಡುತ್ತೇನೆಯೇ ಹೊರತು ರಾಜಕೀಯವನ್ನೆಂದೂ ಮಾತಾಡುವುದಿಲ್ಲ ಎಂದು ಸಿದ್ದರಾಮಯ್ಯ ಇದೇ ವೇಳೆ ಸ್ಪಷ್ಟಪಡಿಸಿದರು.

ರಾಜ್ಯಪಾಲರಿಗೆ ದೂರು

ಸರ್ಕಾರಿ ಅಧಿಕಾರಿಗಳೊಂದಿಗೆ ಖಾಸಗಿ ಹೋಟೆಲ್‌ನಲ್ಲಿ ಸುರ್ಜೇವಾಲ ನಡೆಸಿದ ಸಭೆ ಕಾನೂನಿನ ಉಲ್ಲಂಘನೆ ಪಕ್ಷದ ಪದಾಧಿಕಾರಿಯಾದವರು ಈ ರೀತಿ ಸಭೆ ನಡೆಸುವಂತಿಲ್ಲ. ಕಾಂಗ್ರೆಸ್ಸಿನ ಈ ನಡೆ ಖಂಡಿಸಿ ರಾಜ್ಯಪಾಲರಿಗೆ ಈ ಸಂಬಂಧ ದೂರು ದಾಖಲಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X