ಚಿತ್ರಮಂದಿರಗಳಿಂದ ಎತ್ತಂಗಡಿ; ಒಟಿಟಿಯತ್ತ ಮುಖ ಮಾಡಿದ ʼಕಬ್ಜ?

Date:

Advertisements
  • ‘ಕಬ್ಜ’ ₹100 ಕೋಟಿ ಗಳಿಸಿಲ್ಲ ಎಂದ ಸಿನಿ ವಿಶ್ಲೇಷಕರು
  • ಎರಡೇ ದಿನಕ್ಕೆ ₹100 ಕೋಟಿ ಗಳಿಕೆ ಎಂದ ನಿರ್ದೇಶಕರು

ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯದ ʼಕಬ್ಜʼ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ಕಾಣುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ನಡುವೆಯೇ ಚಿತ್ರ ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ.

ನಿರ್ದೇಶಕ ಆರ್‌ ಚಂದ್ರು, ಉಪೇಂದ್ರ ಮತ್ತು ಚಿತ್ರತಂಡ ಇತ್ತೀಚೆಗೆ ಕೇಕ್‌ ಕತ್ತರಿಸಿ ‘ಕಬ್ಜ’ ಚಿತ್ರದ ಯಶಸ್ಸನ್ನು ಸಂಭ್ರಮಿಸಿತ್ತು. ಆದರೆ, ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಟೀಕೆಗೆ ಗುರಿಯಾಗಿರುವ ಈ ಚಿತ್ರ ತೆರೆಕಂಡ ಒಂದೇ ವಾರಕ್ಕೆ ಚಿತ್ರಮಂದಿರಗಳಿಂದ ಎತ್ತಂಗಡಿಯಾಗುತ್ತಿದೆ. ಹೀಗಾಗಿ ಚಿತ್ರವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

‘ಕಬ್ಜ’ ಚಿತ್ರದ ಒಟಿಟಿ ಹಕ್ಕನ್ನು ಜನಪ್ರಿಯ ಒಟಿಟಿ ಸಂಸ್ಥೆ ಅಮೆಜಾನ್‌ ಪ್ರೈಂ ಬಹುಕೋಟಿ ಮೊತ್ತಕ್ಕೆ ಖರೀದಿಸಿದ್ದು, ತೆರೆಕಂಡು ತಿಂಗಳು ಕಳೆಯುವ ಮುನ್ನ ಅಂದರೆ ಏಪ್ರಿಲ್‌ 14ರಂದು ಚಿತ್ರ ಒಟಿಟಿಯಲ್ಲಿ ಪ್ರಸಾರವಾಗಲಿದೆ ಎಂದು ವರದಿಯಾಗಿದೆ. ಆದರೆ, ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

ಅಂದಾಜು 120 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ʼಕಬ್ಜʼ ಸಿನಿಮಾ ತೆರೆಕಂಡ ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಕಲೆ ಹಾಕಿದೆ ಎಂದು ಆರ್‌ ಚಂದ್ರು ಹೇಳಿಕೊಂಡಿದ್ದರು. ಆದರೆ, ಈವರೆಗೆ ಚಿತ್ರದ ಗಳಿಕೆ 33 ಕೋಟಿ ರೂಪಾಯಿಗಳನ್ನು ಕೂಡ ದಾಟಿಲ್ಲ. ಅಷ್ಟೇ ಅಲ್ಲ, ಕನ್ನಡದ ಹೊರತಾಗಿ ಚಿತ್ರದ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಅವತರಣಿಕೆಗಳು 1 ಕೋಟಿ 75 ಲಕ್ಷ ರೂಪಾಯಿಗಳನ್ನು ಮಾತ್ರ ಗಳಿಸಲು ಸಾಧ್ಯವಾಗಿದೆ ಎಂದು ಸಿನಿ ವಿಶ್ಲೇಷಕರು ಅಸಲಿ ಲೆಕ್ಕಾಚಾರ ಬಿಚ್ಚಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X