ತುಮಕೂರು | ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ : ಸಚಿವರುಗಳ‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕೆಡಿಪಿ ಸಭೆಯಿಂದ ಹೊರನಡೆದ ಬಿಜೆಪಿ ಶಾಸಕ ಸುರೇಶ್ ಗೌಡ

Date:

Advertisements

ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.‌ಜಿ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆತ್ತಿರುವ 2024-25 ನೇ ಸಾಲಿನ ಮೂರನೇ  ತ್ರೈಮಾಸಿಕ ಕೆಡಿಪಿ‌ ಸಭೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಮಾತ್ರವೇ ಚರ್ಚೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಭೆಯಯಲ್ಲಿ ಸಚಿವರುಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿ  ತುಮಕೂರು ಗ್ರಾಮಾಂತರ ಬಿಜೆಪಿ  ಶಾಸಕ ಸುರೇಶ್  ಗೌಡ ಕೆಡಿಪಿ ಸಭೇ ಬಹಿಷ್ಕರಿಸಿ ಸಭೆಯಿಂದ ಹೊರನಡೆದರು.

1001092900

ಗ್ಯಾರಂಟಿ ಬಗ್ಗೆ ಚರ್ಚೆ ನಡೆಸಲು ಮತ್ತೊಂದು ಸಭೆ ಮಾಡಿ‌ಕೊಳ್ಳಿ. ಮೂರು ತಿಂಗಳಿಗೆ   ಮಾಡುವ  ಸಭೆಯನ್ನು  ಆರು ತಿಂಗಳಿಗೆ‌ ಮಾಡುತ್ತೀರ. ಈ ಸಭೆಯಲ್ಲಿ ಮುಖ್ಯವಾಗಿ ರೈತರ‌ ಹಲವಾರು ಸಮಸ್ಯೆಗಳಿವೆ. ಅದರ ಬಗ್ಗೆ ಚರ್ಚೆ ಯಾಗಬೇಕು. ಜನರು ಸಮಸ್ಯೆಯಿಂದ ಬಾಯಿ ಬಡಿದುಕೊಳ್ಳುತ್ತಿದ್ದಾರೆ ಎಂದು ಶಾಸಕ ಸುರೇಶ್ ಗೌಡ  ಸಚಿವರುಗಳ‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕೆಡಿಪಿ ಸಭೆಯಿಂದ ಹೊರನಡೆದರು.

ನಂತರ ಮಾಧ್ಯಮದವರೊಂಗೆ ಮಾತನಾಡಿದ ಶಾಸಕ ಸುರೇಶ್ ಗೌಡ,  ಇದೊಂದು ಟೈಂ ಪಾಸ್ ಸಭೆ. ಮೂರು ತಿಂಗಳಿಗೊಮ್ಮೆ ನಡೆಯುವ ಸಭೆಯನ್ನು  ಆರು ತಿಂಗಳಿಗೆ ನಡೆಸುತ್ತಿದ್ದಾರೆ. ನಾವು ಆರು ತಿಂಗಳ‌ ಹಿಂದಿನಿಂದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಹೇಮಾವತಿ ನೀರಿನ ಬಗ್ಗೆ, ಬೇಸಿಗೆ ಆರಂಭದಲ್ಲಿ ಕುಡಿಯುವ ನೀರಿನ ಸಮಸ್ಯೆ.ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಆದರೆ ಗಂಟೆಗಟ್ಟಲೆ ಗ್ಯಾರಂಟಿ ಬಗ್ಗೆಯೇ ಚರ್ಚೆ ಮಾಡುತ್ತಿದ್ದಾರೆ. 

Advertisements
1001092899

ಗ್ಯಾರಂಟಿ ಯೋಜನೆಗಳ  ಪ್ರಗತಿ ಪರಿಶೀಲನೆಗೆ  ಪ್ರತ್ಯೇಕ ಸಭೆ  ಮಾಡಿಕೊಳ್ಳಲಿ. ಪ್ರಸ್ತುತ ಸಮಸ್ಯೆಗಳ ಚರ್ಚೆಗೆ ಸಭೆಯಲ್ಲಿ  ಹೆಚ್ಚಿನ ಆದ್ಯತೆ ನೀಡಬೇಕು. ರೇವಣ್ಣ ಅವರು ಯಾವೋದು ಕ್ಯಾಬಿನೆಟ್ ರ್ಯಾಂಕ್ ತಗೊಂಡು ಬಂದು ಮೀಟಿಂಗ್ ಮಾಡಿಕೊಂಡು ಕುಳಿತಿದ್ದಾರೆ. ಈತರ ಮೀಟಿಂಗ್ ಗಳು ಆಗಬಾರದು. ಸಚಿವ  ಪರಮೇಶ್ವರ್ ಅವರು  ಮೂರು  ತಿಂಗಳಿಗೊಮ್ಮೆ ಸಭೆ ನಡೆಸಲಿ.  ಈ ರೀತಿಯ ಟೈಂ ಪಾಸ್ ಮಾಡೋ ಮೀಟಿಂಗ್ ಗೆ ಟಿ‌ ಕಾಫಿಗೆ ಯಾಕೆ ಬರಬೇಕು. ಅದಕ್ಕೆ ಸಭೆ ಬಹಿಷ್ಕರಿಸಿ   ಹೊರಬಂದಿದ್ದೇನೆ ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X