ರಾಯಚೂರು | ಮೂಲ ಸೌಕರ್ಯ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Date:

Advertisements

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಮೂಲ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಜಂಟಿ ಸಂಘಟನೆಗಳು ಪಟ್ಟಣ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದವು.

ಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರು, ಶೌಚಾಲಯ, ರಸ್ತೆ, ವಿದ್ಯುತ್‌ ಸೇರಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಾಗಿದೆ. ಜೊತೆಗೆ ಬಸ್ ನಿಲ್ದಾಣ ಒತ್ತುವರಿ, ರುದ್ರಭೂಮಿ, ಮಟಕಾ, ಇಸ್ಪೀಟ್ ದಂಧೆ ಮಿತಿ ಮೀರಿದ್ದು ಸಂಬಂಧಪಟ್ಟ ಇಲಾಖೆಗಳು ಅದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದವು.

ಹಲವು ವರ್ಷಗಳಿಂದ ಅನೇಕ ಬೇಡಿಕೆಗಳ ಈಡೇರಿಕೆಗೆ ಹಲವು ಹಂತಗಳಲ್ಲಿ ಹೋರಾಟ ನಡೆಸಿ ಪಟ್ಟಣ ಪಂಚಾಯತಿಯ ಅಧ್ಯಕ್ಷ ಹಾಗೂ ಮುಖ್ಯಾಧಿಕಾರಿ ಸೇರಿ ತಾಲೂಕಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ಸಮಸ್ಯೆಗಳನ್ನು ಈಡೇರಿಸುವಲ್ಲಿ ಪಪಂ ಹಾಗೂ ತಾಲೂಕು ಪಂಚಾಯತಿ ಆಡಳಿತ ವಿಫಲವಾಗಿವೆ. ಈ ಕುರಿತು ಅಸಡ್ಡೆ ತೋರುತ್ತಿವೆ ಎಂದು ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದರು.

ಈಗಲಾದರೂ ಎಚ್ಚೆತ್ತು ಆಡಳಿತ ವರ್ಗ ಇತ್ತ ಗಮನಹರಿಸಬೇಕು. ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಬೀಗಮುದ್ರೆ ಹಾಕಿ ಧರಣಿ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಮುಖ್ಯಾಧಿಕಾರಿ ಜಗನಾಥ್ ದೇಸಾಯಿ ಮನವಿ ಪತ್ರ ಸ್ವೀಕರಿಸಿ ಆದಷ್ಟು ಬೇಗ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ: ರಾಯಚೂರು | ಅವೈಜ್ಞಾನಿಕ ಟೋಲ್ ಗೇಟ್; ಕೂಡಲೇ ಕಾಮಗಾರಿ ನಿಲ್ಲಿಸುವಂತೆ ರೈತ ಸಂಘ ಒತ್ತಾಯ

Advertisements

ಈ ವೇಳೆ ಸಿಪಿಎಂ ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು, ಸಿಐಟಿಯು ತಾಲೂಕು ಸಂಚಾಲಕ ಹನೀಫ್, ಡಿವೈಎಫ್ಐ ರಿಯಾಜ್ ಖುರೇಷಿ, ಚನ್ನಬಸವ ಅಂಬೇಡ್ಕರ್ ನಗರ, ಸಿಐಟಿಯು ಮುಖಂಡ ವೆಂಕಟೇಶ ಗೋರಕಲ್, ನಿಂಗಪ್ಪ ಎಂ, ಅಲ್ಲಾಭಕ್ಷ ದೇವರಭೂಪುರು, ರಫಿ, ಎಸ್ಎಫ್ಐ ಮುಖಂಡ ವಿನಯ್ ಕುಮಾರ್, ನಾಗರಾಜ್ ಹನಮಗುಡ್ಡ ಹೊಸೂರು, ಹಾಜಿ ಕಟ್ಟಿಮನಿ, ಖಾಜಾ ಮೈನುದ್ದೀನ್, ಮಹಾಂತೇಶ್ ಮುದಗಲ್, ನಾಗಯ್ಯ ತಾತಾ, ಇಮ್ರಾನ್, ಬೆಟ್ಟಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X