ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಒಂಬತ್ತು ಜನ ಸಾವು, ಹತ್ತು ಮಂದಿಗೆ ಗಾಯ

Date:

Advertisements

ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಮುಂದುವರಿದಿದೆ. ಖಮೆನ್‌ಲೋಕ್‌ನ ಹಳ್ಳಿಯೊಂದರ ಮೇಲೆ ಶಸ್ತ್ರಸಜ್ಜಿತ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಕನಿಷ್ಠ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದು, 10 ಮಂದಿ  ಗಾಯಗೊಂಡಿದ್ದಾರೆ.

ಇಂಫಾಲ್ ಪೂರ್ವ ಜಿಲ್ಲೆ ಮತ್ತು ಕಾಂಗ್ಪೋಕಿ ಜಿಲ್ಲೆಯ ಗಡಿಯಲ್ಲಿರುವ ಖಮೆಲೋಕ್ ಗ್ರಾಮವನ್ನು ಸುತ್ತುವರೆದ ಭಯೋತ್ಪಾದಕರು, ಮಂಗಳವಾರ ತಡ ರಾತ್ರಿ 1 ಗಂಟೆಯ ಸುಮಾರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ದಾಳಿ ನಡೆಸಿದ್ದಾರೆ. ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಇಂಫಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇತೀ ಪ್ರಾಬಲ್ಯದ ಇಂಫಾಲ್ ಪೂರ್ವ ಜಿಲ್ಲೆ ಮತ್ತು ಬುಡಕಟ್ಟು ಜನಾಂಗದ ಬಹುಸಂಖ್ಯಾತ ಕಾಂಗ್ಪೋಕ್ಪಿ ಜಿಲ್ಲೆಯ ಗಡಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.

Advertisements

ಮಣಿಪುರದಲ್ಲಿ ಕುಕಿ ಮತ್ತು ಮೇತೀ ಸಮುದಾಯಗಳ ನಡುವೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ಇನ್ನೂ ನಿಂತಿಲ್ಲ. ಇದುವರೆಗೂ ನೂರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ.

ರಾಜ್ಯದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಸುಮಾರು 10,000 ಯೋಧರನ್ನು ನಿಯೋಜಿಸಲಾಗಿದೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ಶಾಂತಿ ಕಾಪಾಡಲು ಕರ್ಫ್ಯೂ, ಮತ್ತು ಜೂನ್‌ 15ರವರೆಗೆ ಇಂಟರ್‌ನೆಟ್ ಸ್ಥಗಿತಗೊಳಿಸಿದರೂ ಉದ್ವಿಗ್ನ ಸ್ಥಿತಿ ಕಡಿಮೆಯಾಗಿಲ್ಲ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ಸ್ಥಳಾಂತರಗೊಂಡ 50,000ಕ್ಕೂ ಹೆಚ್ಚು ಜನರು, ರಾಜ್ಯಾದ್ಯಂತ 349 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಇದ್ದಾರೆ. 253 ಚರ್ಚ್‌ಗಳು ಮತ್ತು ಹಲವು ದೇವಸ್ಥಾನಗಳನ್ನು ಸುಟ್ಟು ಹಾಕಲಾಗಿದೆ ಎಂದು ವರದಿಗಳಿವೆ ಹೇಳಿದೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X