ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ: ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್

Date:

Advertisements

ಕೇಂದ್ರ ಸರ್ಕಾರದ ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿ ತಮಿಳು ನಟಿ, ರಾಜಕಾರಣಿ ರಂಜನಾ ನಾಚಿಯಾರ್ ಮಂಗಳವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತನ್ನ ರಾಜೀನಾಮೆಯಲ್ಲಿ ರಂಜನಾ ಅವರು, “ತ್ರಿಭಾಷಾ ನೀತಿ ಹೇರಿಕೆ ತಪ್ಪು” ಎಂದು ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸದಿದ್ದರೆ ಸಮಗ್ರ ಶಿಕ್ಷ ಮಿಷನ್‌ಗೆ 2,400 ರೂಪಾಯಿ ನಿಧಿಯನ್ನು ನೀಡುವುದಿಲ್ಲ ಎಂದು ತಮಿಳುನಾಡು ಸರ್ಕಾರಕ್ಕೆ ಬೆದರಿಕೆ ಹಾಕಿದ್ದರು. ಕೇಂದ್ರ ಸಚಿವರ ಈ ಬೆದರಿಕೆಗೆ ತಮಿಳುನಾಡು ನಾಯಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ಹೇರಿಕೆ | ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ: ಉದಯನಿಧಿ ಸ್ಟ್ಯಾಲಿನ್ ಘೋಷಣೆ

Advertisements

“ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ” ಎಂದು ಉದಯನಿಧಿ ಸ್ಟ್ಯಾಲಿನ್ ಘೋಷಿಸಿದ್ದಾರೆ. ಹಾಗೆಯೇ “ಹಿಂದಿಯನ್ನು ಒಪ್ಪಿಕೊಳ್ಳುವ ರಾಜ್ಯಗಳು ತಮ್ಮ ಮಾತೃಭಾಷೆಯನ್ನು ಕಳೆದುಕೊಳ್ಳಲಿದೆ” ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಸದ್ಯ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುವುದರ ವಿರುದ್ಧವಾಗಿ ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ವಾಗ್ವಾದ ನಡೆಯುತ್ತಲೇ ಇದೆ. ಈ ನಡುವೆ ರಂಜನಾ ಬಿಜೆಪಿ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಇವೆಲ್ಲವುದರ ನಡುವೆ ಚುನಾವಣೆಗೂ ಮುನ್ನ ಭಾಷೆ ವಿಚಾರವನ್ನು ಆಡಳಿತಾರೂಢ ಡಿಎಂಕೆ ಸರ್ಕಾರವು ರಾಜಕೀಯಕರಣಗೊಳಿಸುತ್ತಿದೆ ಎಂದು ಎಐಎಡಿಎಂಕೆ ಸಂಸದ ಎಂ ಥಂಬಿದುರೈ ದೂರಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಎಐಎಡಿಎಂಕೆ ಸಂಸದ, “ರಾಜ್ಯ ಸರ್ಕಾರವು ಹಲವು ಭಾಷೆಗಳನ್ನು ಕಲಿಸುವ ಸಿಬಿಎಸ್‌ಇ ಶಾಲೆಗಳಿಗೆ ಅವಕಾಶ ನೀಡುತ್ತದೆ. ಆದರೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು, ಹಿಂದಿ ಹೇರಿಕೆಯನ್ನು ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ದಿವಸ | ಭಾಷಾ ಹೇರಿಕೆ ವಿರುದ್ಧ ಇಂದು ಪ್ರತಿಭಟನೆ: ‘ಕರಾಳ ದಿನ’ ಆಚರಣೆಗೆ ಕರವೇ ಕರೆ

ಅವೈಜ್ಞಾನಿಕ ರಾಷ್ಟ್ರೀಯ ಶಿಕ್ಷಣ ನೀತಿಗೆ ಹಲವು ರಾಜಕೀಯ ಪಕ್ಷಗಳು, ರಾಜ್ಯಗಳು ವಿರೋಧ ವ್ಯಕ್ತಪಡಿಸಿದೆ. ಅದರಲ್ಲೂ ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರೀಕರಣದ ಯತ್ನ ಮತ್ತು ಹಿಂದಿ ಹೇರಿಕೆ ಮಾಡುವುದನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದೆ.

ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳು ಸ್ಥಳೀಯ ಭಾಷೆಗಳನ್ನು ನಿಧಾನವಾಗಿ ನಾಶಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರವನ್ನು ವಿರೋಧಿಸುತ್ತಾ ಬಂದಿದೆ. ಇತರೆ ಭಾಷೆಗಳನ್ನು ಕಲಿಯಬಾರದು ಎಂಬ ವಾದವನ್ನು ಯಾವ ರಾಜ್ಯಗಳೂ ಮಾಡಿಲ್ಲ. ಬದಲಾಗಿ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂಬಂತೆ ಬಿಂಬಿಸಿ ಹೇರಿಕೆ ಮಾಡುವುದನ್ನು ವಿರೋಧಿಸಿದೆ. ನಮ್ಮ ದೇಶದಲ್ಲಿ ಸಂಸ್ಕೃತಿ, ಭಾಷೆ, ಆಚರಣೆ ಎಲ್ಲವೂ ವೈವಿಧ್ಯವಾಗಿದ್ದು ಇದ್ಯಾವುದನ್ನು ಕೂಡಾ ನಾಶ ಮಾಡಬಾರದು ಎಂಬುದು ಸ್ಥಳೀಯ ಭಾಷಿಕರ ವಾದವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X