ಕೊಡಗು | ಶಿಕ್ಷಣದಿಂದ ಜ್ಞಾನ; ಶ್ರಮದಿಂದ ಬದುಕು : ಸಾಹಿತಿ ಉಳುವಂಗಡ ಕಾವೇರಿ ಉದಯ

Date:

Advertisements

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು,ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಪ್ರಾಥಮಿಕ ಶಾಲೆ ಸಂಯುಕ್ತಾಶ್ರಯದಲ್ಲಿ ‘ ಕೈಬುಲಿರ ಪಾರ್ವತಿ ಬೋಪಯ್ಯ ದತ್ತಿ ‘ ಕಾರ್ಯಕ್ರಮದಲ್ಲಿ ಸಾಹಿತಿ ಉಳುವಂಗಡ ಕಾವೇರಿ ಉದಯ ಮಾತನಾಡಿ ” ಶಿಕ್ಷಣದಿಂದ ಜ್ಞಾನ, ಶ್ರಮದಿಂದ ಬದುಕು ” ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ, ಶಿಕ್ಷಣದಿಂದ ಬರುವಂತದ್ದು ಮಕ್ಕಳು ಪ್ರೌಢಶಾಲಾ ಹಂತದಲ್ಲಿ ಉತ್ತಮ ಶಿಕ್ಷಣ ಪಡೆದರೆ ಯಾವ ಸಾಧನೆ ಬೇಕಾದರೂ ಮಾಡಬಹುದು .ದತ್ತಿ ದಾನಿಗಳ ಆಶಯದಂತೆ 2023-24ನೇ ಸಾಲಿನಲ್ಲಿ 10ನೇ ತರಗತಿಯ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಾದಾಪುರದ ಶ್ರೀಮತಿ ಚೆನ್ನಮ್ಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅದವಿಯಾ ಯು ಮೂಡಬಿದರೆಯ ಕಾಲೇಜಿನಲ್ಲಿ ಮುಂದಿನ ಶಿಕ್ಷಣ ಪಡೆಯುತಿದ್ದು ಮಕ್ಕಳು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಸಾಕ್ಷಿ, ಈ ಸಮಯದಲ್ಲಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ ಪಿ ಕೇಶವ ಕಾಮತ್ ಮಾತನಾಡಿ ” ಕೊಡಗು ಜಿಲ್ಲೆಯಲ್ಲಿ ಈಗಾಗಲೇ 35 ದತ್ತಿನಿಧಿಗಳು ಸ್ಥಾಪಿತವಾಗಿದೆ. ವಿದ್ಯಾರ್ಥಿಗಳಿಗೆ ಸಾಹಿತ್ಯ,ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ವಿಚಾರಗಳ ಪರಿಚಯ ಮಾಡುವುದಾಗಿದೆ. ಜಾನಪದ ಕಲೆ, ಜಾನಪದ ಸಾಹಿತ್ಯ, ಕನ್ನಡ ಸಾಹಿತ್ಯದ ಬೆಳವಣಿಗೆ, ಕನ್ನಡ ಮತ್ತು ಕೊಡವ ಭಾಷಾ ಸಂಬಂಧ, ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರಾದ ಫೀಲ್ಡ್ ಮಾರ್ಷಲ್ ಕಾರಿಯಪ್ಪ, ಜನರಲ್ ತಿಮ್ಮಯ್ಯ ಅವರ ಸಾಧನೆಗಳ ಕುರಿತು ಉಪನ್ಯಾಸಗಳಿವೆ “ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಮಡಿಕೇರಿ | ಕೊಡಗು ವಿವಿ ಮುಚ್ಚಿದರೆ ಜಿಲ್ಲೆಗೆ ಅಪಮಾನ ; ಕೆಎಂಎ ಅಧ್ಯಕ್ಷ ಸೂಫಿ ಹಾಜಿ

ಬಿರುನಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮ್ಮತ್ತಿರ ರಾಜೇಶ್, ಪೊನ್ನಂಪೇಟೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಎ ಬಿ ಲಾಲ ಅಪ್ಪಣ್ಣ,ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ, ಶಾಲಾ ಮುಖ್ಯೋಪಾಧ್ಯಾಯರಾದ ಬಿ ಬಿ ಸರಸ್ವತಿ.ಮಾಜಿ ಯೋಧ ಕಾಳಿಮಾಡ ಮುತ್ತಣ್ಣ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಬೊಳ್ಳೆರ ಪೊನ್ನಪ್ಪ, ಹುದಿಕೇರಿ ಹೋಬಳಿ ಗೌರವ ಕಾರ್ಯದರ್ಶಿ ಕುಪ್ಪಣ್ಣಮಾಡ ನಂಜಮ್ಮ, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಾನಂಗಡ ಅರುಣ್, ಪೊನ್ನಂಪೇಟೆ ತಾಲ್ಲೂಕು ಕಸಾಪ ನಿರ್ದೇಶಕ ಬುಟ್ಟಿಯಂಡ ಸುನಿತ ಗಣಪತಿ,ಹುದಿಕೇರಿ ಹೋಬಳಿ ಕಸಾಪ ಗೌರವ ಕೋಶಾಧಿಕಾರಿ ಅಣ್ಣಳಮಾಡ ಭವ್ಯ, ಸಂಘಟನಾ ಕಾರ್ಯದರ್ಶಿ ಕರ್ತಮಾಡ ಪಾರ್ವತಿ ವಿಜಯ, ಸದಸ್ಯರುಗಳಾದ ಬುಟ್ಟಿಯಂಡ ರೋಹಿಣಿ, ಧರಣಿ, ಸಬಿತಾ, ಸದಕುಮಾರ್, ಅರುವತ್ತೊಕ್ಲುವಿನ ಕೆ ಪಿ ಅಶ್ರಫ್, ಶಾಲಾ ಶಿಕ್ಷಕರು ಹಾಗೂ ಪೋಷಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X