ಕುಡಚಿ ರೈಲು ಮಾರ್ಗಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು, ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಉಪವಿಭಾಗಾಧಿ ಕಚೇರಿ (ಎಸಿ)ಯ ಪಿಠೋಪಕರಣಗಳನ್ನು ಜಪ್ತಿ ಮಾಡುವಂತೆ 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಯಲ್ಲಪ್ಪ ಚೊಳಚಗುಡ್ಡ ಅವರಿಗೆ ಸೇರಿದ 3 ಎಕರೆ 8 ಗುಂಟೆ ಜಮೀನನ್ನು ಬಾಗಲಕೋಟೆ-ಕುಡಚಿ ರೈಲು ಮಾರ್ಗಕ್ಕಾಗಿ ಕಂದಾಯ ಇಲಾಖೆ ಸ್ವಾಧೀನ ಪಡಿಸಿಕೊಂಡಿತ್ತು. ಕೋರ್ಟ್ ಆದೇಶ ಇದ್ದರೂ ಕೂಡ ಮೂರು ತಿಂಗಳಿಂದ ಪರಿಹಾರ ನೀಡದ ವಿಚಾರಕ್ಕೆ ಸಂಬಂಧಿಸಿ ಬಾಗಲಕೋಟೆ 2ನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ಎಸಿ ಕಚೇರಿ ಜಪ್ತಿಗೆ ಆದೇಶ ಹೊರಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ ಶಾಹೀನ್ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣ ರದ್ದು
ಭೂ ಮಾಲೀಕ ಯಲ್ಲಪ್ಪ ಚೊಳಚಗುಡ್ಡ ಅವರಿಗೆ ₹14,23,70,807 ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಪರಿಹಾರ ನೀಡದ ಹಿನ್ನೆಲೆಯಲ್ಲಿ ಎಸಿ ಕಚೇರಿ ಜಪ್ತಿಗೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಮೂರು ತಿಂಗಳ ಹಿಂದೆಯೇ ಎಸಿ ಕಚೇರಿ ಜಪ್ತಿ ಮಾಡುವಂತೆ ತಿಳಿಸಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಇಂದು ನ್ಯಾಯವಾದಿಗಳು ಕಚೇರಿ ಜಪ್ತಿ ಮಾಡಿದರು. ಹೆಚ್ಚುವರಿ ನ್ಯಾಯಾಲಯದ ಆದೇಶ ಪ್ರಶ್ನಿಸಿ, ಅಧಿಕಾರಿಗಳು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಲಿದ್ದಾರೆ.