ಗದಗ | ಮಾರ್ಚ್ 3ರಂದು ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ

Date:

Advertisements

“ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿರುವ 2025 ಮಾರ್ಚ್ 3ರಿಂದ ಸಿಐಟಿಯು ನೇತೃತ್ವದಲ್ಲಿ ವಿವಿಧ ವಿಭಾಗದ ಕಾರ್ಮಿಕರು ತಮ್ಮ ಬೇಡಿಕೆಗಳಾಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಮಾರ್ಚ್ ಮೂರರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ ಅವಧಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ” ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ್ ಪತ್ತಾರ್ ಪತ್ರಿಕಾ ಘೋಷ್ಠಿಯಲ್ಲಿ ಹೇಳಿದರು.

ಗದಗ ಪಟ್ಟಣದ ಪತ್ರಿಕಾ ಭವನದಲ್ಲಿ ಕಾರ್ಮಿಕ ವರ್ಗದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

“ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ ಇತ್ತೀಚಿಗೆ ಮಂಡಿಸಿದ 2025 26ನೇ ಸಾಲಿನ ಬಜೆಟ್ ನಲ್ಲಿ 99ರಷ್ಟು ದುಡಿಯುವ ವರ್ಗಕ್ಕೆ ದ್ರೋಹ ಬಗೆದಿದೆ. ಈ ದೇಶದ ಒಂದು ರಷ್ಟು ಇರುವ ಶ್ರೀಮಂತರ ಪಕ್ಷಪಾತಿಯಾಗಿದೆ. ಇದುವರೆಗೂ ನಮ್ಮ ಸಾರ್ವಜನಿಕ ಕ್ಷೇತ್ರಗಳಾದ ವಿದ್ಯುತ್, ತೈಲ, ಸಾರಿಗೆ, ಮತ್ತು ಹೆದ್ದಾರಿಗಳು ಕಲ್ಲಿದ್ದಲು, ಇತರ ಖನಿಜಗಳು ಸೇರಿದಂತೆ ಅಮೂಲ್ಯವಾದ ಮೂಲ ಸೌಕರ್ಯಗಳು, ಕಣಜಗಳು ಸಾರ್ವಜನಿಕ ಸೇವಾ ಜಾಲ ಇತ್ಯಾದಿಗಳನ್ನು ಖಾಸಗಿ ವಲಯಕ್ಕೆ ಹಸ್ತಾಂತರಿಸಲು ಬೇಕಾದ ಸ್ಪಷ್ಟ ನೀಲಿ ನಕ್ಷೆಯನ್ನು ಸಿದ್ಧಪಡಿಸಿದೆ. ಅದೇ ವೇಳೆಗೆ ನಮ್ಮ ದೇಶದ ಅಭಿವೃದ್ಧಿ ಶಿಕ್ಷಣ ಆರೋಗ್ಯ ಉದ್ಯೋಗ ಹಾಗೂ ಆಹಾರ ಪೂರೈಸಲು ಬೇಕಾದ ಸಂಪೂರ್ಣ ಕಡಿತಗೊಳಿಸಲಾಗಿದೆ” ಎಂದು ಹೇಳಿದರು.

Advertisements

“ದೇಶದ ದುಡಿಯುವ ಜನ ಅಂಗನವಾಡಿ ಬಿಸಿಯೂಟ ಆಶಾ ಉದ್ಯೋಗ ಖಾತ್ರಿ ಮೊದಲಾದ ಯೋಜನೆಗಳಿಗೆ ಹಾಗೂ ಅಲ್ಲಿ ದುಡಿಯುತ್ತಿರುವ ಕೋಟ್ಯಾಂತರ ಗೌರವದನ ಆಧಾರದಲ್ಲಿ ನೌಕರರು ಹಾಗೂ ಅಸಂಘಟಿತ ಕಾರ್ಮಿಕ ವರ್ಗದ ಜೀವನೋಪಾಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ” ಎಂದು ಮಹೇಶ್ ಪತ್ತಾರ ಹೇಳಿದರು.

ನಂತರ ಸಿಐಟಿಯು ಜಿಲ್ಲಾ ಸಂಚಾಲಕರು ಮಹೇಶ್ ಹಿರೇಮಠ ಮಾತನಾಡಿ, ಅಹೋರಾತ್ರಿ ಧರಣಿಯಲ್ಲಿ  ಗ್ರಾಮ ಪಂಚಾಯತಿ ನೌಕರರು, ಬಿಸಿಯೂಟ ಕಾರ್ಮಿಕರು, ಕಟ್ಟಡ ಕಾರ್ಮಿಕರು ಹಮಾಲಿ ಮಾಲೀಕರು, ಕಾರ್ಖಾನೆ ಕಾರ್ಮಿಕರು ಅಂಗನವಾಡಿ ನೌಕರರು ಸೇರಿದಂತೆ ವಿವಿಧ ವಲಯದ ಸಂಘಟಿತ ಹಾಗೂ ಸಂಘಟಿತ ಕಾರ್ಮಿಕರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುವರು” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಮುಖಂಡರಾದ ಬಸವರಾಜ್ ಮಂತೂರ್, ಮೆಹಬೂಬ ಹವಾಲ್ದಾರ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X