ಮೈಸೂರು | ಕಾವೇರಿ ಕುಡಿಯುವ ನೀರು ಸರಬರಾಜು ಮಾಡುವಂತೆ ದಸಂಸ ಮನವಿ

Date:

Advertisements

ಮೈಸೂರಿನ ಏಕಲವ್ಯ ನಗರ ಹಾಗೂ ಚಾಮುಂಡೇಶ್ವರಿ ರೈಲ್ವೆ ಬಡಾವಣೆಯ ನಿವಾಸಿಗಳಿಗೆ ಕಾವೇರಿ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ, ಸರ್ಕಾರದಿಂದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದರೂ ಈ ಎರಡು ಬಡಾವಣೆಗಳಿಗೆ ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯವರು ನೀರನ್ನು ಪೂರೈಕೆ ಮಾಡದೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ಮೈಸೂರಿನ ಸರಸ್ವತಿಪುರಂನಲ್ಲಿರುವ ಜಲಮಂಡಳಿ ಕಾರ್ಯಪಾಲಕ ಅಭಿಯಂತ ಆಸೀಫ್‌ ಖಲೀಲ್‌ ರವರಿಗೆ ಮನವಿ ಪತ್ರ ಸಲ್ಲಿಸಿದರು.

ದಸಂಸ ಮುಖಂಡ ನಿಂಗರಾಜ್‌ ಮಲ್ಲಾಡಿ ಮಾತನಾಡಿ ” ಏಕಲವ್ಯ ನಗರ ಹಾಗೂ ಚಾಮುಂಡೇಶ್ವರಿ ಬಡಾವಣೆಯ ನಿವಾಸಿಗಳು ಕಲುಷಿತ ನೀರನ್ನು ಕುಡಿದು ಅನೇಕ ರೋಗ, ರುಜಿನಗಳಿಂದ ಬಳಲುತ್ತಾ ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಜಲಮಂಡಳಿ ವತಿಯಿಂದ ಕೂಡಲೆ ಶುದ್ಧ ಕುಡಿಯವು ನೀರನ್ನು ಪೂರೈಕೆ ಮಾಡಿಕೊಡಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿರುವುದಾಗಿ ” ಹೇಳಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕಾರ್ಯಪಾಲಕ ಅಭಿಯಂತ ಆಸೀಫ್‌ ಖಲೀಲ್ ” ಕಾಮಗಾರಿ ಪೂರ್ಣಗೊಂಡಿದ್ದು, ಕೆಲವು ತಾಂತ್ರಿಕ ಕಾರಣದಿಂದ ಈ ಎರಡೂ ಬಡಾವಣೆಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಲಾಗಿಲ್ಲ. ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನು ಪರಿಹರಿಸಿ ನೀರನ್ನು ಪೂರೈಕೆ ಮಾಡಲಾಗುವುದು ” ಎಂದರು.

Advertisements

ಬಳಿಕ, ಜಲದರ್ಶಿನಿಯಲ್ಲಿ ದಸಂಸ ಕಾರ್ಯಕರ್ತರ ಸಭೆ ನಡೆಸಿ ದಲಿತರ, ಅಲೆಮಾರಿ ಸಮುದಾಯಗಳ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿ ಈ ಬಾರಿಯ ಬಜೆಟ್ ನಲ್ಲಿ ಜಾರಿ ಮಾಡುವಂತೆ ಹಾಕ್ಕೋತ್ತಾಯ
ಸಲ್ಲಿಸುವ ನಿರ್ಣಯ ಕೈಗೊಂಡರು.

ಹಕ್ಕೋತ್ತಾಯಗಳು:

  • ಈ ಬಾರಿಯ ಬಜೆಟ್‌ನಲ್ಲಿ ದಲಿತರಿಗೆ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಹೆಚ್ಚು ಹಣ ಮೀಸಲಿಡಬೇಕು. ಮೀಸಲಿಟ್ಟ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳಬಾರದು.
  • ಮೈಸೂರು ನಗರದಲ್ಲಿ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಡಾ ಬಿ ಆರ್ ಅಂಬೇಡ್ಕರ್‌ ಭವನದ ಕಾಮಗಾರಿಯನ್ನು ಸರ್ಕಾರದ ವತಿಯಿಂದ ಅಗತ್ಯ ಹಣ ಬಿಡುಗಡೆಗೊಳಿಸಿ ಪೂರ್ಣಗೊಳಿಸಬೇಕು.
  • ರಾಜ್ಯದ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ಜಾತಿ ನಿರುದ್ಯೋಗಿ ಯುವಕ, ಯುವತಿಯರಿಗೆ ತರಬೇತಿ ನೀಡಿ ಕಾರ್ಖಾನೆಗಳಿಗೆ ಮಾಲೀಕತ್ವ ನೀಡುವ ಯೋಜನೆಗಳನ್ನು ಸರ್ಕಾರ ರೂಪಿಸಬೇಕು.
  • ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನದಾರರು ಸಂಕಷ್ಟದಲ್ಲಿದ್ದು, ಪ್ರತಿ ತಿಂಗಳ ಮಾಸಾಶನವನ್ನು ತಲಾ 3000 ರೂ ಗಳಿಗೆ ಹೆಚ್ಚಿಸಬೇಕು.

ಸಭೆಯಲ್ಲಿ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೈ ಕುಮಾರ್‌,ದಸಂಸ ಮುಖಂಡ ದೇವೇಂದ್ರ ಕುಳುವಾಡಿ, ಕಿರಿಜಾಜಿ ಗಜೇಂದ್ರ, ವೆಂಕಟೇಶ, ಶ್ರೀಧರ, ನಂದನ್‌ ಕುಮಾರ್‌, ಲೋಕೇಶ, ಸ್ವಾಮಿ, ಮಂಜಪ್ಪ, ಸತೀಶ, ಮಲ್ಲೇಶ, ಶ್ರೀನಿವಾಸ, ಹರೀಶ, ಅಂಗವಿಕಲರ ಸಂಘದ ಅಧ್ಯಕ್ಷ ಶಿವಶೆಟ್ಟಿ ಕೆರೆಯೂರು, ತಿಮ್ಮರಾಯಿ, ಕುಮಾರ,ಶ್ರೀಧರ, ದೇವರಾಜು, ಸಿಂಗೇಗೌಡ,ಆರಾಧ್ಯ, ಲೋಕೇಶ, ಸ್ವಾಮಿ, ಸತೀಶ, ಮಹಿಳಾ ಸದಸ್ಯರಾದ ರಾಜೇಶ್ವರಿ, ಶೈಲಜಾ, ಚಿಕ್ಕಮಾದೇವಮ್ಮ, ರಾಣಿ ಮುಂತಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X