ಕೊಪ್ಪಳ | ಪೋಕ್ಸೋ ಕಾಯ್ದೆಯ ಕುರಿತು ಜನರಲ್ಲಿ ಅರಿವಿನ ಅಗತ್ಯವಿದೆ: ನ್ಯಾ. ಡಿ ಕೆ ಕುಮಾರ್

Date:

Advertisements

ಬಹಳಷ್ಟು ಮಂದಿ ಕಾನೂನು ಅರಿವಿಲ್ಲದೆ ಹಲವು ‌ತಪ್ಪುಗಳನ್ನು ಮಾಡುತ್ತಾರೆ. ಅವರಿಗೆ ಪೋಕ್ಸೋ ಕಾಯ್ದೆಯಂತಹ ಇತರೆ ಹಲವಾರು ಕಾಯ್ದೆ, ಕಾನೂನುಗಳ ಕುರಿತು ಅರಿವು ಮೂಡಿಸಿದಾಗ ಅವರು ತಪ್ಪುಗಳನ್ನು ಮಾಡಲು ಹಿಂಜರಿಯುತ್ತಾರೆ ಎಂದು ಕೊಪ್ಪಳ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಎಫ್.ಟಿ.ಎಚ್.ಸಿ ಪೋಕ್ಸೋ ನ್ಯಾಯಾಧೀಶ ಡಿ.ಕೆ. ಕುಮಾರ್ ಹೇಳಿದರು.

ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ‌ಕೊಪ್ಪಳ ವತಿಯಿಂದ ಪ್ರಧಾನ ಕೌಟುಂಬಿಕ ನ್ಯಾಯಾಲಯದ ಆವರಣ ಕೊಪ್ಪಳದಲ್ಲಿ ಹಮ್ಮಿಕೊಂಡಿದ್ದ ಬಯೋಮಂತ್ಲೀ ಸಭೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇತ್ತೀಚೆಗೆ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿವೆ. ಪೊಕ್ದೋ ಕಾಯ್ದೆಯಡಿ ಇದನ್ನು ಮಾಡಿದರಿಗೆ ಶಿಕ್ಷೆಯಾಗುತ್ತದೆ ಎಂದು ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ‘ಕಾಲೇಜುಗಳಲ್ಲಿ ಹುಡುಗ ಮತ್ತು ಹುಡುಗಿಯರು ಇಬ್ಬರಿಗೂ ‌ಲೈಂಗಿಕ ದೌರ್ಜನ್ಯ ನಡೆಸಿದರೆ ಪೋಕ್ಸೋ ಕಾಯ್ದೆಯಡಿ ಜೈಲುವಾಸ ಹಾಗೂ ‌ತಮ್ಮ ಮನೆಯ ಮರ್ಯಾದೆ ಹೋಗುತ್ತದೆ’ ಎಂದು ಶಿಕ್ಷಕರು ವಿಧ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರೆ ಅವರು ಇಂತಹ ತಪ್ಪುಗಳನ್ನು ಮಾಡುವುದಿಲ್ಲ. ಇದರ ಹೊರತಾಗಿ ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡಲು ಹಲವಾರು ಜನ ಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಬೇಕು” ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಎಸ್. ದರಗದ ಅವರು ಮಾತನಾಡಿ, “ನಾಲ್ಸಾದ 11 ಕಾರ್ಯಕ್ರಮಗಳಿದ್ದು ಅವುಗಳನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ‌ಹಮ್ಮಿಕೊಂಡು ಜನರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆಯರು ‌ಮತ್ತು ದೌರ್ಜನ್ಯಕ್ಕೆ ಒಳಗಾದವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಬೇಕಿದೆ. ವಿಶ್ವ ಜಲ ದಿನ, ಭೂ ದಿನ ಹೀಗೆ ಇತರೆ ಹಲವಾರು ಕಾರ್ಯಕ್ರಮಗಳನ್ನು ‌ಹಮ್ಮಿಕೊಂಡು ಪ್ರತಿಯೊಂದು ವಿಷಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು” ಎಂದರು

Advertisements

“ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಕಾನೂನಿನಲ್ಲಿ ಇರುವ ರಕ್ಷಣೆ. ಪರಿಶಿಷ್ಟ ‌ಜಾತಿ‌ ಹಾಗೂ ಪರಿಶೀಷ್ಟ ಪಂಗಡದ ಜನರ ಮೇಲೆ ದೌರ್ಜನ್ಯಗಳಾದಾಗ ಅವರಿಗೆ ಕಾನೂನಿನಲ್ಲಿರುವ ರಕ್ಷಣೆ ಸೇರಿದಂತೆ ಇತರೆ ‌ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ‌ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಹಮ್ಮಿಕೊಳ್ಳಬೇಕು” ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ‌ಪಂಚಾಯತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಹೇಮಂತ ಕುಮಾರ್, ಅರಣ್ಯ ಇಲಾಖೆಯ ‌ಎ.ಸಿ.ಎಫ್. ಎ.ಎಚ್.ಮುಲ್ಲಾ, ‌ಚುನಾವಣಾ ತಹಶೀಲ್ದಾರ್ ರವಿ ವಸ್ರ್ರದ ಸೇರಿದಂತೆ ಜಿಲ್ಲಾ ‌ಮಟ್ಟದ ಇತರೆ ವಿವಿಧ ಇಲಾಖೆಯ ‌ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X