ಕ್ಷೇತ್ರ ಪುನರ್ ವಿಂಗಡಣೆ | ದಕ್ಷಿಣ ರಾಜ್ಯಗಳಿಗೆ ನ್ಯಾಯಯುತ ಪಾಲು, ಒಂದು ಸ್ಥಾನವೂ ಕಡಿಮೆಯಾಗಲ್ಲ: ಅಮಿತ್ ಶಾ

Date:

Advertisements

ಕ್ಷೇತ್ರ ಪುನರ್ ವಿಂಗಡಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಕ್ಷೇತ್ರ ಪುನರ್‌ ವಿಂಗಡನೆ ಮಾಡುವಾಗ ದಕ್ಷಿಣ ರಾಜ್ಯಗಳಿಗೆ ನ್ಯಾಯಯುತ ಪಾಲು ಸಿಗಲಿದೆ. ಒಂದು ಸ್ಥಾನವೂ ಕೂಡಾ ಕಡಿಮೆಯಾಗಲ್ಲ” ಎಂದು ತಿಳಿಸಿದ್ದಾರೆ.

ಕ್ಷೇತ್ರ ಪುನರ್ ವಿಂಗಡನೆ ಮಾಡುವುದರಿಂದಾಗಿ ತಮಿಳುನಾಡಿನಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಬಹುದು. ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳ ಪುನರ್‌ವಿಂಗಡಣೆ ಮಾಡಿದರೆ ನಮ್ಮ ಜನಸಂಖ್ಯೆ ಕಡಿಮೆ ಇರುವುದರಿಂದ ತಮಿಳುನಾಡು 8 ಕ್ಷೇತ್ರಗಳನ್ನು ಕಳೆದುಕೊಳ್ಳುತ್ತದೆ. ಇದರಿಂದ ಸಂಸತ್ತಿನಲ್ಲಿ ತಮಿಳುನಾಡು ಪ್ರಾತಿನಿಧ್ಯ ಕಳೆದುಕೊಳ್ಳಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ಹೇರಿಕೆ | ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ: ಉದಯನಿಧಿ ಸ್ಟ್ಯಾಲಿನ್ ಘೋಷಣೆ

Advertisements

ಈ ನಿಟ್ಟಿನಲ್ಲಿ ಸ್ಟಾಲಿನ್ ಮಾರ್ಚ್ 5ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಗೆ ಸುಮಾರು 40 ರಾಜಕೀಯ ಪಕ್ಷಗಳನ್ನು ಕರೆಯಲಾಗಿದೆ. ಪ್ರಸ್ತುತ ತಮಿಳುನಾಡು 39 ಸಂಸದರನ್ನು ಹೊಂದಿದೆ. ಆದರೆ ಜನಗಣತಿಯ ಆಧಾರದಲ್ಲಿ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡಿದರೆ ಸಂಸದರ ಸಂಖ್ಯೆ 31ಕ್ಕೆ ಇಳಿಯಬಹುದು

ಈ ಬಗ್ಗೆ ಕೊಯಮತ್ತೂರು, ತಿರುವಣ್ಣಾಮಲೈ ಮತ್ತು ರಾಮನಾಥಪುರಂನಲ್ಲಿ ಬಿಜೆಪಿ ಕಚೇರಿಗಳ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಕ್ಷೇತ್ರ ಪುನರ್ ವಿಂಗಡನೆ ಸಂದರ್ಭದಲ್ಲಿ ದಕ್ಷಿಣ ರಾಜ್ಯಗಳಿಗೆ ಯಾವುದೇ ನಷ್ಟವಾಗದಂತೆ ನೋಡಿಕೊಳ್ಳಲಾಗುವುದು” ಎಂದು ತಿಳಿಸಿದರು.

“ತಮಿಳುನಾಡಿನಲ್ಲಿ ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ಆದ್ದರಿಂದಾಗಿ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ಹೇರಿಕೆ | ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್ ವಿಜಯ್‌ರ ಟಿವಿಕೆ ಸೇರ್ಪಡೆ

“ಸ್ಟಾಲಿನ್ ಅವರೇ ಅನುಪಾತದ ಆಧಾರದ ಮೇಲೆ ಮಾಡಲಾಗುವುದು, ಇದರಿಂದ ಒಂದು ಕ್ಷೇತ್ರವು ಕಡಿಮೆಯಾಗದು ಎಂದು ಮೋದಿ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ದಕ್ಷಿಣ ರಾಜ್ಯಗಳಿಗೆ ನ್ಯಾಯಯುತ ಪಾಲು ಸಿಗಲಿದೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ” ಎಂದು ತಿಳಿಸಿದ್ದಾರೆ.

“ಸ್ಟಾಲಿನ್ ತಮಿಳುನಾಡು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ತಪ್ಪು ಮಾಹಿತಿ ನೀಡಿ ಜನರನ್ನು ಕ್ಷೇತ್ರ ಪುನರ್ ವಿಂಗಡನೆ ವಿಚಾರದಲ್ಲಿ ಸ್ಟಾಲಿನ್ ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ನನಗೆ ಈ ಬಗ್ಗೆ ಪ್ರತಿಕ್ರಿಯೆ ಬೇಕು. ನೀವು ಯಾಕೆ ಈ ರೀತಿ ಸುಳ್ಳು ಹೇಳುತ್ತಿದ್ದೀರಿ” ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.

ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ಈಗಾಗಲೇ ಹಲವು ವಿಚಾರಗಳ ವಾಕ್ಸಮರ ನಡೆಯುತ್ತಲೇ ಇದೆ. ಹಿಂದಿ ಹೇರಿಕೆ, ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ವಿಚಾರದಲ್ಲಿ ಶೀತಲ ಸಮರ ನಡೆಯುತ್ತಿದೆ. ಇದೀಗ ಕ್ಷೇತ್ರ ಪುನರ್‌ ವಿಂಗಡಣೆ ವಿಚಾರದಲ್ಲಿಯೂ ಕೇಂದ್ರ ಬಿಜೆಪಿ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ನಡುವೆ ವಾಕ್ಸಮರ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X