ದೆಹಲಿ ಸಿಎಂ ಕಚೇರಿಯಲ್ಲಿ ಅಂಬೇಡ್ಕರ್ ಫೋಟೋ ತೆರವು?

Date:

Advertisements

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ಬಳಿಕ, ದೆಹಲಿ ಮುಖ್ಯಮಂತ್ರಿ ಕಚೇರಿಯಲ್ಲಿದ್ದ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಭಗತ್‌ ಸಿಂಗ್‌ ಅವರು ಫೋಟೋಗಳನ್ನು ತೆಗೆದುಹಾಕಿದೆ. ಈ ಫೋಟೋಗಳಿದ್ದ ಜಾಗದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರಪತಿ ದ್ರೌಪತಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಫೋಟೋಗಳನ್ನು ಹಾಕಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಆದರೆ, ಎಎಪಿಯ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ಮುಖ್ಯಮಂತ್ರಿ ಕಚೇರಿಯಲ್ಲಿವೆ ಎಂದು ಹೇಳಿದೆ.

ಫೋಟೋ ತೆರವು ಕುರಿತು ದೆಹಲಿ ವಿಧಾನಸಭೆಯ ವಿಪಕ್ಷ ನಾಯಕಿ, ಮಾಜಿ ಮುಖ್ಯಮಂತ್ರಿ ಆತಿಶಿ ಅವರು ಫೋಟೋವೊಂದನ್ನು ಟ್ವೀಟ್ ಮಾಡಿದ್ದು, “ದೆಹಲಿ ಮುಖ್ಯಮಂತ್ರಿ ಕಚೇರಿಯಿಂದ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಫೋಟೋಗಳನ್ನು ಬಿಜೆಪಿ ತೆಗೆದುಹಾಕಿದೆ. ತನ್ನ ‘ದಲಿತ ವಿರೋಧಿ” ಮತ್ತು ‘ಸಿಖ್ ವಿರೋಧಿ’ ಧೋರಣೆಯನ್ನು ತೋರಿಸಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿ ಎಲ್ಲರಿಗೂ ತಿಳಿದಿದೆ. ಇಂದು, ಅದರ ದಲಿತ ವಿರೋಧಿ ಮನಸ್ಥಿತಿಗೆ ಪುರಾವೆ ನೀಡಲಾಗಿದೆ. ಕೇಜ್ರಿವಾಲ್ ದೆಹಲಿ ಸರ್ಕಾರದ ಪ್ರತಿಯೊಂದು ಕಚೇರಿಯಲ್ಲೂ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಶಹೀದ್ ಭಗತ್ ಸಿಂಗ್ ಅವರ ಫೋಟೋಗಳನ್ನು ಇರಿಸಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಈ ಎರಡೂ ಫೋಟೋಗಳನ್ನು ಮುಖ್ಯಮಂತ್ರಿ ಕಚೇರಿಯಿಂದ ತೆಗೆದುಹಾಕಲಾಗಿದೆ” ಎಂದು ಆರೋಪಿಸಿದ್ದಾರೆ.

Advertisements

ಇನ್ನು, ಅರವಿಂದ್ ಕೇಜ್ರಿವಾಲ್ ಕೂಡ ಟ್ವೀಟ್ ಮಾಡಿದ್ದು, “ದೆಹಲಿಯ ಹೊಸ ಬಿಜೆಪಿ ಸರ್ಕಾರ ಬಾಬಾ ಸಾಹೇಬರ ಫೋಟೋವನ್ನು ತೆಗೆದು ಪ್ರಧಾನಿ ಮೋದಿ ಫೋಟೋ ಹಾಕಿದೆ. ಇದು ಸರಿಯಲ್ಲ. ಬಾಬಾ ಸಾಹೇಬರ ಲಕ್ಷಾಂತರ ಅನುಯಾಯಿಗಳಿಗೆ ನೋವುಂಟು ಮಾಡಿದೆ. ಬಿಜೆಪಿಗೆ ನನ್ನದೊಂದು ವಿನಂತಿ. ನೀವು ಪ್ರಧಾನ ಮಂತ್ರಿಯ ಫೋಟೋ ಹಾಕಬಹುದು, ಆದರೆ ಬಾಬಾ ಸಾಹೇಬರ ಫೋಟೋ ತೆಗೆಯಬೇಡಿ” ಎಂದಿದ್ದಾರೆ.

ಈ ವರದಿ ಓದಿದ್ದೀರಾ?: ಬಿಜೆಪಿಯ ಕರಾಳ ಮುಖ | ರೀಲ್ಸ್‌ ಮಾಡುವುದು, ಅವಘಡವಾದಾಗ ಅಳಿಸಲು ನೋಟಿಸ್‌ ಕೊಡುವುದು!

ಎಎಪಿ ಹೇಳಿಕೆಯನ್ನು ಬಿಜೆಪಿ ನಿರಾಕಿಸಿದೆ. ಮತ್ತೊಂದು ಚಿತ್ರವನ್ನು ಹಂಚಿಕೊಂಡಿರುವ ಬಿಜೆಪಿ, ಮುಖ್ಯಮಂತ್ರಿ ಕುರ್ಚಿಯ ಹಿಂದಿನ ಗೋಡೆಯಲ್ಲಿದ್ದ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಫೋಟೋಗಳನ್ನು ಪಕ್ಕದ ಗೋಡೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿಕೊಂಡಿದೆ.

“ದೆಹಲಿ ಮುಖ್ಯಮಂತ್ರಿ ರಾಖಾ ಗುಪ್ತಾ ಮತ್ತು ಎಲ್ಲ ಮಂತ್ರಿಗಳ ಕೊಠಡಿಗಳಲ್ಲಿ ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್, ಭಗತ್ ಸಿಂಗ್, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಚಿತ್ರಗಳನ್ನು ಇರಿಸಲಾಗಿದೆ” ಎಂದು ಬಿಜೆಪಿ ಹೇಳಿಕೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X