ಕಾರವಾರ | ಸದಾಶಿವಗಡದಲ್ಲಿ 41.3 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲು; ರಾಜ್ಯದಲ್ಲೇ ಇದು ಗರಿಷ್ಠ!

Date:

Advertisements

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಸಾವಂತವಾಡಾ ಹೋಬಳಿ ವ್ಯಾಪ್ತಿಯಲ್ಲಿರುವ ಸದಾಶಿವಗಡದಲ್ಲಿ ಮಂಗಳವಾರ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಇದು ರಾಜ್ಯದಲ್ಲೇ ಗರಿಷ್ಠ ತಾಪಮಾನ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (ಕೆಎಸ್‌ಎನ್ಎಂಡಿಸಿ) ಮಾಹಿತಿ ನೀಡಿದೆ.

ಕರಾವಳಿಯ ಮೂರು ಜಿಲ್ಲೆಗಳ ಏಳು ಸ್ಥಳಗಳಲ್ಲಿ ಸರಾಸರಿ ಉಷ್ಣಾಂಶ ಪ್ರಮಾಣ 40 ಡಿಗ್ರಿ ಸೆಲ್ಸಿಯಸ್ ಮೀರಿದೆ. ಉತ್ತರ ಕನ್ನಡ ಜಿಲ್ಲೆಯ 6, ದಕ್ಷಿಣ ಕನ್ನಡದ 4, ಉಡುಪಿಯ 2 ಹಾಗೂ ರಾಯಚೂರು ಜಿಲ್ಲೆಯ 1 ಕಡೆಯಲ್ಲಿ ಸರಾಸರಿ ಉಷ್ಣಾಂಶ ಸರಾಸರಿ 39 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿತ್ತು ಎಂದು ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.

ಚಳಿ ಕಡಿಮೆಯಾಗಿ, ಏಕಾಏಕಿ ಸೆಕೆಯ ವಾತಾವರಣ ಆವರಿಸುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಕರಾವಳಿ ಭಾಗದಲ್ಲಿ ಉಷ್ಣಾಂಶ ಕಡಿಮೆ ಇದ್ದರೂ ಆರ್ದ್ರತೆ ಅಧಿಕ ಇರುವ ಕಾರಣ ಸೆಕೆ ಹೆಚ್ಚಿತ್ತು. ಈಗ ಉಷ್ಣಾಂಶ ಅಧಿಕ ಆಗಿರುವುದಿಂದ ಸೆಕೆ ಹೆಚ್ಚಾಗಬಹುದು ಎಂಬ ಆತಂಕವಿದೆ.

Advertisements

ಮೂರು ಜಿಲ್ಲೆಗಳಿಗೆ ಬಿಸಿಗಾಳಿ ಎಚ್ಚರಿಕೆ

ರಾಜ್ಯದ ಬಹುತೇಕ ಕಡೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚುತ್ತಿರುವ ಬೆನ್ನಲ್ಲೇ ಕರಾವಳಿಯ 3 ಜಿಲ್ಲೆಗಳಿಗೆ ಬುಧವಾರದಿಂದ ಮೂರು ದಿನಗಳ ಕಾಲ ಬಿಸಿಗಾಳಿಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಖಾ ಅಲೆ ಕಾಣಿಸಿಕೊಳ್ಳುವ ಸಂಭವವಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಉಷ್ಣಾಂಶವು ಸಾಮಾನ್ಯಕ್ಕಿಂತ ಐದು ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗುವ ಬಗ್ಗೆ ಅಂದಾಜಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X