“ಒಳಮೀಸಲಾತಿ ಜಾರಿಯಾಗುವುದರಿಂದ ಸಾಮಾಜಿಕ ನ್ಯಾಯ ಸಿಗುತ್ತದೆ. ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಕೇವಲ ವೋಟ್ ಬ್ಯಾಂಕ್ ತೆವಲಿಗಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಒಳಮೀಸಲಾತಿ ವಿರೋಧಿ ಹೇಳಿಕೆ ನೀಡಿರುವುದು ಖಂಡನೀಯ” ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜ(ರಿ)ದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಕಿಡಿಕಾರಿದರು.
ಹಾವೇರಿ ಪಟ್ಟಣದ ಪತ್ರಿಕಾ ಗೋಷ್ಠಿಯಲ್ಲಿ ಉಡಚಪ್ಪ ಮಾಳಗಿ ಅವರು “ಶಾಸಕ ಬಸವನಗೌಡ ಯತ್ನಾಳ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನಷ್ಟವಾಯಿತು. ನಾನು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒಳಮೀಸಲಾತಿ ಕುರಿತು ಕ್ರಮ ತೆಗೆದುಕೊಳ್ಳಬಾರದು” ಎಂದು ಹೇಳಿರುವುದನ್ನು ವಿರೋಧಿಸಿ ಮಾತನಾಡಿದರು.
“ಒಳಮೀಸಲಾತಿ ಜಾರಿಗ ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದರೂ, ಸಮುದಾಯಗಳ ಮಧ್ಯ ಒಡಕು ಹುಟ್ಟಿಸುವ ಮೂಲಕ ಒಡೆದು ಆಳುವ ನೀತಿಯನ್ನು ತೋರಿರುವ ಬಸನಗೌಡ ಪಾಟೀಲ್ ಯತ್ನಾಳರ ನಡೆಯನ್ನು ಉಗ್ರವಾಗಿ ಖಂಡಿಸುತ್ತೇವೆ. ಗೋಸುಂಬೆಯಂತೆ ಬಣ್ಣ ಬದಲಿಸಿ ಒಳಮೀಸಲಾತಿ ವಿರೋಧಿ ಹೇಳಿಕೆ ನೀಡಿರುವುದು ಅವರ ನೈತಿಕ ಅಧೋಗತಿಯನ್ನು ಎತ್ತಿ ತೋರಿಸುತ್ತಿದೆ” ಅಸಮಾಧಾನ ವ್ಯಕ್ತಪಡಿಸಿದರು.
“ಒಳಮೀಸಲಾತಿಗಾಗಿ ಹೋರಾಟ ಮಾಡುತ್ತಿರುವ ಮಾದಿಗ ಸಮುದಾಯದ ವೋಟಗಳನ್ನು ಪಡೆಯದೇ ತಾವು ಇಷ್ಟು ವರ್ಷಗಳಿಂದ ಗೆದ್ದಿರುವಂತೆ ಬಣ್ಣಸಿ ಮಾತನಾಡಿದ ಅವರ ಹೇಳಿಕೆಯಿಂದ ಸಮುದಾಯಕ್ಕೆ ಅತೀವ ನೋವುಂಟು ಮಾಡಿದೆ. ಯತ್ನಾಳ್ ಅವರ ಹಿಂದೆ ಮುಂದೆ ಸುತ್ತುತ್ತಿರುವ ಮಾದಿಗ ಮುಖಂಡರು ಅವರ ಮಾದಿಗ ವಿರೋಧಿ ನೀತಿಯನ್ನು ಅರಿತು ಅವರನ್ನು ಬಹಿಷ್ಕಾರ ಮಾಡಬೇಕಾಗುತ್ತದೆ” ಎಂದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಕರ್ನಾಟಕದಲ್ಲಿ ಒಳಮಿಸಲಾತಿ ಜಾರಿಗೆ ಆಗುವವರಿಗೂ ಬ್ಯಾಕ್ ಲಾಕ್ ಹುದ್ದೆಗಳನ್ನು ನೇಮಕ ಮಾಡಬಾರದು ಎಂದು ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ ಅವರಿಗೆ ಉಡಚಪ್ಪ ಮಾಳಗಿ ಒತ್ತಾಯಿಸಿದರು.
