ಕೊಪ್ಪಳ | ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಪ್ರೌಢಶಾಲೆ; ಕಣ್ಮುಚ್ಚಿ ಕುಳಿತ ಗ್ರಾಪಂ

Date:

Advertisements

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬರಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಕಾಂಪೌಂಡ್ ಇಲ್ಲದೇ ಪುಂಡ-ಪುಡಾರಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ತಾಲೂಕಿನಲ್ಲಿ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಈ ಶಾಲೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.

ಪ್ರತಿವರ್ಷ ಗ್ರಾಮದ ವಿದ್ಯಾರ್ಥಿಗಳು ಅಗ್ರಸ್ಥಾನದಲ್ಲಿ ಅಂಕಪಡೆದು ಕೊಪ್ಪಳ ಜಿಲ್ಲೆಯಲ್ಲಿ ಹೆಸರು ಮಾಡುತ್ತಿದ್ದಾರೆ. ಆದರೆ, ಶಾಲೆಗೆ ಸುತ್ತಲೂ ಕಾಂಪೌಂಡ್ ಇಲ್ಲ. ಶಾಲೆಯ ಆಟದ ಮೈದಾನ ಊರಿನ ಜಾನುವಾರುಗಳ ನಿತ್ಯವೂ ಮೇಯುವ ಹುಲ್ಲುಗಾವಲು ಪ್ರದೇಶವಾಗಿದೆ. ರೈತರ ಒಕ್ಕಲ ಕಣವಾಣಿಗಿದೆ. ರಾತ್ರಿಯಾದರೆ ಕುಡಕರ ಕೂಟವಾಗಿ, ಮದ್ಯಪಾನದ ಬಾಟಲಿಯ ಗೂಡಾಗಿದೆ. ನಸುಕಿನ ಜಾವ ಗ್ರಾಮಸ್ಥರ ಬಯಲು ಶೌಚಾಲಯ, ಗಂಡುಮಕ್ಕಳ ಮತ್ತು ಹೆಣ್ಣುಮಕ್ಕಳ ಶೌಚಾಲಯದ ಕೊಠಡಿಗಳು ತುಂಬಿ ದುರ್ವಾಸನೆ ಬೀರುತ್ತಿವೆ.

WhatsApp Image 2025 02 27 at 11.13.47 AM

ಹೆಣ್ಣುಮಕ್ಕಳ ಶೌಚಾಲಯ ಇದ್ದರೂ ಕೇವಲ ನಾಮಕಾವಸ್ಥೆಗೆ ಅಷ್ಟೆ. ಅದಕ್ಕೆ ನೀರಿನ ವ್ಯವಸ್ಥೆ ಇಲ್ಲ. ಮಕ್ಕಳು ಕುಳಿತು ಊಟ ಮಾಡಲು ಸುಸಜ್ಜಿತವಾದ ಸಭಾಂಗಣವಿದ್ದರೂ ಬಳಕೆಗೆ ಅನುಕೂಲ ಇಲ್ಲ. ಮೈದಾನದ‌ ತುಂಬಾ ಜಾನುವಾರುಗಳ ಇಕ್ಕೆ, ಸಗಣೆಯ ಗುಂಪೆಗಳು ಕಂಡುಬರುತ್ತವೆ. ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.

Advertisements

ಶಾಲೆಯ ಮುಖ್ಯೋಪಾಧ್ಯಾಯರು ಸಮಸ್ಯೆಯ ಕುರಿತು ಈದಿನ ಡಾಟ್ ಕಾಮ್‌ ನೊಂದಿಗೆ ಮಾತನಾಡಿ, “ಶಾಲೆಯ ಸುತ್ತಲೂ ಕಾಂಪೌಂಡ್ ನಿರ್ಮಿಸಲು, ವಿಶೇಷವಾಗಿ ವಿದ್ಯಾರ್ಥಿನಿಯರ ಶೌಚಾಲಯ ನಿರ್ಮಿಸಿಕೊಡಲು ಸಾಕಷ್ಟು ಬಾರಿ ಶಾಲೆಯ ವತಿಯಿಂದ ಗ್ರಾಮ ಪಂಚಾಯತಿಗೆ ಮೌಖಿಕವಾಗಿ ಮತ್ತು ಲಿಖಿತವಾಗಿ ಮನವಿ ಸಲ್ಲಿಸಿದ್ದೇವೆ. ಅಲ್ಲದೇ, ನಮ್ಮ ಮೇಲಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೂ ಯಾವೊಬ್ಬ ಅಧಿಕಾರಿಯೂ ಇತ್ತ ಗಮನ ಹರಿಸಿಲ್ಲ” ಎಂದರು.

WhatsApp Image 2025 02 27 at 11.13.48 AM

ಶಾಲೆಯ ವಿದ್ಯಾರ್ಥಿನಿ ಮಾತಾನಾಡಿ, “ಶೌಚಾಲಯ ಇವೆ; ಆದರೆ, ಅವು ಬಳಕೆಗೆ ಯೋಗ್ಯವಿಲ್ಲದವು. ನೀರಿನ ವ್ಯವಸ್ಥೆ ಇಲ್ಲ, ಊರಿನ ಜನ ಬಂದು ಅಲ್ಲಿಯೇ ಮಲ-ಮೂತ್ರ ವಿಸರ್ಜನೆ ಮಾಡಿ ಹೋಗುತ್ತಾರೆ. ರಾತ್ರಿ ಆದ್ರೆ ಗ್ರೌಂಡ್‌ನಲ್ಲಿ, ಶಾಲೆಯ ಕಟ್ಟೆಯ ಮೇಲೆ ಪುಂಡ ಪೋಕರಿಗಳು ಸಾರಾಯಿ ಕುಡಿದ ಬಾಟಲಿಗಳ ತುಂಡಾದ ಚೂರಗಳನ್ನು ಬೆಳಗಾದರೆ ನಾವೇ ಸ್ವಚ್ಛ ಮಾಡಬೇಕು” ಎಂದು ಬೇಸರ ವ್ಯಕ್ತಪಡಿಸಿದರು.

ಕೆವಿಎಸ್ ಸಂಘಟನೆಯ ಕಾರ್ಯದರ್ಶಿ ಮಾತನಾಡಿ, “ಶಾಲೆಗೆ ಕಾಂಪೌಂಡ್ ಇಲ್ಲದ ಕಾರಣ ಇಲ್ಲಿ ನಡೆಯಬಾರದ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮತ್ತು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರೂ ಏನೇನೋ ಕಾರಣ ಹೇಳುತ್ತಾರೆ. ಶಾಲಾ ಕಟ್ಟಡ ಬೇರೆಯ ಸರ್ವೇ ನಂಬರಲ್ಲಿದೆ ಅದಕ್ಕಾಗಿ ಕಾಂಪೌಂಡ್ ನಿರ್ಮಿಸಲು ತಾಂತ್ರಿಕ ದೋಷಗಳು ಇವೆ ಎಂದು ಸಬೂಬು ಹೇಳುತ್ತಾರೆ” ಎಂದರು.

WhatsApp Image 2025 02 27 at 11.13.49 AM

ಬರಗೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಈದಿನ ಡಾಟ್ ಕಾಂನೊಂದಿಗೆ ಮಾತನಾಡಿ, “ಸರ್ವೇ ನಂಬರ್ ಅದಲು ಬದಲಾಗಿದೆ. ಅದರ ‌ಚಕ್‌ಬಂದಿಗಾಗಿ ಸರ್ವೇ ಮಾಡಿಸಿ, ಕಾಂಪೌಂಡ್ ನಿರ್ಮಿಸಲು ವ್ಯವಸ್ಥೆ ಮಾಡುತ್ತೇವೆ. ಅದಕ್ಕಾಗಿಯೇ 40 ಲಕ್ಷ ಅನುದಾನ ಮೀಸಲಿಡಲಾಗಿದೆ. ಕಟ್ಟಡ ಚಕ್‌ಬಂದಿ ಅದಲು ಬದಲಾಗಿರುವುದನ್ನ ಹಾಗೂ ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಿ ಈಗಾಗಲೇ ಕ್ರಮ ಕೈಗೊಂಡಿದ್ದು, ಶೀಘ್ರದಲ್ಲಿ ಶಾಲೆಗೆ ಕಾಂಪೌಂಡ್ ಜತೆಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ನಿರ್ಮಿಸಿಕೊಡುತ್ತೇವೆ” ಎಂದು ಭರವಸೆಯಿತ್ತರು.

ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾತನಾಡಿ, “ಪಹಣಿಯಲ್ಲಿ ಸರ್ವೇ ನಂಬರ್ ವ್ಯತ್ಯಾಸ ಆಗಿರುದನ್ನ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಅಲ್ಲಿ ಪಹಣಿಪತ್ರ ಸರಿಪಡಿಸಿದ ನಂತರ ಕಾಂಪೌಂಡ್ ಕಟ್ಟಿಸುವ ವ್ಯವಸ್ಥೆ ಮಾಡಿಸುತ್ತೇವೆ” ಎಂದರು.

ಇದನ್ನೂ ಓದಿ: ಕೊಪ್ಪಳ | ಶುಲ್ಕ ಪಾವತಿ ಸಮಸ್ಯೆ ಬಗೆಹರಿಸಲು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಒತ್ತಾಯ

ಇವೆಲ್ಲವೂ ಕೇವಲ ಭರವಸೆಗಳಾಗಿಯೇ ಉಳಿಯುತ್ತವೆಯೋ ಅಥವಾ ಬರಗೂರು ಶಾಲೆಗೆ ಕಾಂಪೌಂಡ್‌ ಭಾಗ್ಯ ದೊರೆಯುವುದೋ ಕಾದು ನೋಡಬೇಕಿದೆ.

WhatsApp Image 2025 02 27 at 11.13.49 AM 1
IMG 20241219 WA0001
ಕೇಶವ ಕಟ್ಟಿಮನಿ
+ posts

ಕೃಷಿ, ಪುಸ್ತಕ ಓದುಗ,

ಫೀಲ್ಡ್ ಕೋರ್ಡಿನೇಟರ್,
ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಕೇಶವ ಕಟ್ಟಿಮನಿ
ಕೇಶವ ಕಟ್ಟಿಮನಿ
ಕೃಷಿ, ಪುಸ್ತಕ ಓದುಗ, ಫೀಲ್ಡ್ ಕೋರ್ಡಿನೇಟರ್, ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X