ಜಾರ್ಖಂಡ್‌ | ಶಿವರಾತ್ರಿ ಆಚರಣೆ ವೇಳೆ ಕೋಮು ಘರ್ಷಣೆ; ಮೂವರ ಬಂಧನ

Date:

Advertisements

ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಸ್ಪೀಕರ್‌ಗಳನ್ನು ಅಳವಡಿಸುವ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಇಚಕ್ ಬ್ಲಾಕ್‌ನ ಡುಮ್ರಾನ್ ಗ್ರಾಮದಲ್ಲಿ ನಡೆದಿದೆ. ಘರ್ಷಣೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇತರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಡುಮ್ರಾನ್ ಗ್ರಾಮದಲ್ಲಿ ಶಾಲೆಯ ಮುಂದೆ ಧಾರ್ಮಿಕ ಧ್ವಜಗಳು ಮತ್ತು ಧ್ವನಿವರ್ಧಕವನ್ನು ಅಳವಡಿಸಲಾಗಿತ್ತು. ಶಾಲೆ ಎದುರು ಹಾಕಬಾರದೆಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ, ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಹಿಂಸಾಚಾರಕ್ಕೆ ಕಾರಣವಾಯಿತು. ಎರಡೂ ಕಡೆಯವರು ಕಲ್ಲು-ಇಟ್ಟಿಗೆಗಳ ತೂರಾಟ ನಡೆಸಿದ್ದಾರೆ. ಕೆಲವರಿಗೆ ಗಾಯಗಳಾಗಿವೆ ಎಂದು ಇಚಕ್ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಸಂತೋಷ್ ಕುಮಾರ್ ಹೇಳಿದ್ದಾರೆ.

ಹಿಂಸಾಚಾರದ ಸಂದರ್ಭದಲ್ಲಿ ಮೂರು ಮೋಟಾರ್ ಸೈಕಲ್‌ಗಳು ಮತ್ತು ಒಂದು ಕಾರನ್ನು ಸುಟ್ಟುಹಾಕಲಾಗಿದೆ. ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಹಜಾರಿಬಾಗ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ತಿಳಿಸಿದ್ದಾರೆ.

Advertisements

ಏತನ್ಮಧ್ಯೆ, ‘ಸಮಸ್ಯೆಯನ್ನು ಪರಿಹರಿಸಲು’ ಎರಡು ಸಮುದಾಯಗಳ ಸದಸ್ಯರು ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ಇಚಕ್ ಬ್ಲಾಕ್ ಬಿಡಿಒ ಹೇಳಿದರು.

“ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಸುಮಾರು 150 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಅಗತ್ಯವಿದ್ದರೆ ಹೆಚ್ಚಿನ ಸಿಬ್ಬಂದಿಯನ್ನು ಕರೆಸಲಾಗುವುದು” ಎಂದು ಬಿಡಿಒ ಹೇಳಿದರು.

ಈ ಹಿಂದೆ, ಮದರಸದೊಳಗೆ ‘ಮಿನಾರ್ ರೀತಿಯ ರಚನೆ’ಯ ಬಗ್ಗೆ ಎರಡೂ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯವಿತ್ತು ಎಂದು ಬಿಡಿಒ ಹೇಳಿದರು. ಮದರಸದ ಬಳಿ ಧ್ವನಿವರ್ಧಕಗಳನ್ನು ಅಳವಡಿಸಿದಾಗ ಪರಿಸ್ಥಿತಿ ಉಲ್ಬಣಗೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X