ಗಾಲ್ವಾನ್ ಘರ್ಷಣೆಗೆ ಮೂರು ವರ್ಷ: ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

Date:

Advertisements

ಭಾರತ-ಚೀನಾ ಗಡಿಭಾಗದ ಗಾಲ್ವಾನ್‌ ಕಣಿವೆಯಲ್ಲಿ ಉಭಯ ರಾಷ್ಟ್ರಗಳ ಸೈನಿಕರ ನಡುವೆ ಸಶಸ್ತ್ರ ದಾಳಿ ನಡೆದು, 20 ಮಂದಿ ಭಾರತೀಯ ಯೋದರು ಹತ್ಯೆಯಾದ ಘಟನೆ ನಡೆದು ಇಂದಿಗೆ (ಜೂನ್‌ 15) ಮೂರು ವರ್ಷಗಳಾಗಿವೆ. ಇದು, ಕಳೆದ ಐದು ದಶಕಗಳಲ್ಲಿ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ನಡುವೆ ನಡೆದ ಷರ್ಘಣೆಯಾಗಿತ್ತು. ಆ ಘಟನೆಯನ್ನು ನೆನಪಿಸಿಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮೂರು ವರ್ಷಗಳ ಹಿಂದೆ ಗಾಲ್ವಾನ್ ಕಣಿವೆಯಲ್ಲಿ 20 ವೀರರು ಮಾಡಿದ ತ್ಯಾಗಕ್ಕೆ ಭಾರತವು ಗೌರವಗಳನ್ನು ಸಲ್ಲಿಸುತ್ತದೆ. ಇದೇ ಸಮಯದಲ್ಲಿ, ಗಡಿ ನಿಯಂತ್ರಣ ರೇಖೆ (ಎಲ್‌ಎಸಿ)ಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಲ್ಲಿ ಮೋದಿ ವಿಫಲವಾಗಿದೆ. ಪರಿಣಾಮ, ನಾವು 65ರಲ್ಲಿ 26 ಪೆಟ್ರೋಲಿಂಗ್ ಪಾಯಿಂಟ್‌ಗಳನ್ನು (ಪಿಪಿ) ಕಳೆದುಕೊಂಡಿದ್ದೇವೆ” ಎಂದು ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ನಾವು ಗಡಿ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಹಲವಾರು ಬಾರಿ ಪ್ರಸ್ತಾಪಿಸಲು ಪ್ರಯತ್ನಿಸಿದ್ದೇವೆ. ಆದರೆ, ಮೋದಿ ಸರ್ಕಾರವು ದೇಶದ ದಿಕ್ಕು ತಪ್ಪಿಸುತ್ತಿದೆ. ಭಾರತೀಯರನ್ನು ಕತ್ತಲೆಯಲ್ಲಿಡಲು ಯತ್ನಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

Advertisements
https://twitter.com/kharge/status/1669203497986797568?s=20

“ಗಾಲ್ವಾನ್‌ನಲ್ಲಿ ಚೀನಾದ ಸೈನಿಕರು ಭಾರತದ ಗಡಿ ಪ್ರವೇಶಿಲ್ಲವೆಂದು ಹೇಳುವ ಮೂಲಕ ಚೀನಾಕ್ಕೆ ಮೋದಿ ಜಿ ‘ಕ್ಲೀನ್ ಚಿಟ್’ ನೀಡಿದ್ದಾರೆ. ಇದು ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತಂದಿದೆ” ಎಂದು ಅವರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಉತ್ತರಾಖಂಡದಲ್ಲಿ ‘ಕೋಮುವಾದಿ’ ಮಹಾಪಂಚಾಯತ್‌; ಅನುಮತಿ ನೀಡದಂತೆ ನಿವೃತ್ತ ಅಧಿಕಾರಿಗಳ ಒತ್ತಾಯ

“ಜವಾಬ್ದಾರಿಯುತ ಪ್ರತಿಪಕ್ಷವಾಗಿ, ಚೀನಾದ ವಿಸ್ತರಣಾ ನೀತಿಯ ವಿರುದ್ಧ ದೇಶವನ್ನು ಒಗ್ಗೂಡಿಸಿ ಮೋದಿ ಸರ್ಕಾರಕ್ಕೆ ಸತ್ಯದ ಕನ್ನಡಿ ತೋರಿಸುವುದು ನಮ್ಮ ಕೆಲಸವಾಗಿದೆ. ನಾವು ಅದನ್ನು ಮಾಡುತ್ತೇವೆ” ಎಂದು ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಅಂದಹಾಗೆ, 2020ರ ಜೂನ್‌ 15ರಂದು ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮಾರಣಾಂತಿಕ ಘರ್ಷಣೆ ನಡೆದಿತ್ತು. ಇದೀಗ, ಕೇಂದ್ರ ಸರ್ಕಾರವು ಸುಮಾರು 3,500 ಕಿಮೀ ಉದ್ದದ ಎಲ್‌ಎಸಿ ಉದ್ದಕ್ಕೂ ಮಿಲಿಟರಿ ಮೂಲಸೌಕರ್ಯ, ಕಣ್ಗಾವಲು ಮತ್ತು ಯುದ್ಧ ಸಲಕರಣೆಗಳನ್ನು ಹೆಚ್ಚಿಸಿದೆ. ಈ ಬಗ್ಗೆ ರಕ್ಷಣಾ ಸಂಸ್ಥೆಯ ಮೂಲಗಳು ಬುಧವಾರ ತಿಳಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X