ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ಉಳಿಸಿ-ಬೆಳೆಸಲು ಅಟ್ಲಾಂಟದಲ್ಲೊಂದು ಪ್ರದರ್ಶನ

Date:

Advertisements

ಅಮೇರಿಕಾದ ಅಟ್ಲಾಂಟ ನಗರದ ಮಾರ್ಟಿನ್ ಲೂಥರ್ ಕಿಂಗ್ ಸ್ಮಾರಕದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗ ಅನಿವಾಸಿ ಭಾರತೀಯರು ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕಾ ಸ್ವಾತಂತ್ರ್ಯ ಹಾಗೂ ಜಾತ್ಯತೀತತೆಯ ರಕ್ಷಣೆಗಾಗಿ ಮೇ 20, 2023 ಶನಿವಾರದಂದು ಪ್ರದರ್ಶನ ನಡೆಸಿದರು.

ಭಾರತದ ಮೋದಿ ಸರಕಾರದ ಜನವಿರೋಧಿ, ಪ್ರಜಾಪ್ರಭುತ್ವ ವಿರೋಧಿ ನೀತಿಗಳು, ಪತ್ರಿಕಾ ಸ್ವಾತಂತ್ರ್ಯದ ದಮನ, ಮಹಿಳಾ ಕುಸ್ತಿ ಪಟುಗಳ ಮೇಲಿನ ಅತ್ಯಾಚಾರ ಹಾಗೂ ಧರ್ಮ ದ್ವೇಷದ ರಾಜಕಾರಣವನ್ನು ಅಮೇರಿಕಾದ ಸರಕಾರದ ಹಾಗೂ ಅಮೆರಿಕನ್ ಪ್ರಜೆಗಳ ಗಮನ ಸೆಳೆಯಲು ಈ ಪ್ರದರ್ಶನ ಮಾಡಲಾಯಿತು.

ಮಾರ್ಟಿನ್ ಲೂಥರ್ ಕಿಂಗ್ ಅವರ ಹೋರಾಟಕ್ಕೆ ಮಹಾತ್ಮ ಗಾಂಧಿಯವರೇ ಸ್ಪೂರ್ತಿ. ಆದ್ದರಿಂದ ಈ ಸ್ಮಾರಕ ವೀಕ್ಷಿಸಲು ಪ್ರಪಂಚದ ವಿವಿಧ ದೇಶಗಳಿಂದ ಬರುತ್ತಾರೆ. ಶನಿವಾರದ ರಜೆಯಾದ್ದರಿಂದ ಹಲವಾರು ಜನರು ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿ ಆಸಕ್ತಿಯಿಂದ ಆಲಿಸಿ ತಮ್ಮ ಅಭಿಪ್ರಾಯವನ್ನು ತಿಳಿಸಿದರಲ್ಲದೆ ಅಮೇರಿಕಾದ ಬೈಡನ್ ಸರಕಾರವು ಭಾರತದ ಮೋದಿ ಸರಕಾರದ ಈ ಜನವಿರೋಧಿ ಕ್ರಮಗಳ ಬಗ್ಗೆ ಗಟ್ಟಿ ನಿಲುವು ತೋರಬೇಕೆಂದು ಆಗ್ರಹಿಸಿದರು.

Advertisements

ಪ್ರದರ್ಶನ ಆಯೋಜನೆ ಮಾಡಿದ್ದ ದಿನೇಶ್ ಪಟೇಲ್ ಇನ್ನು ಮುಂದೆಯೂ ಸಹ ಅಟ್ಲಾಂಟ ನಗರದ ವಿವಿಧ ಭಾಗಗಳಲ್ಲಿ ಇಂತಹ ಪ್ರತಿಭಟನೆಗಳನ್ನು ನಡೆಸಲಾಗುವುದೆಂದು ಹೇಳಿದರು. ದಿನೇಶ್ ಪಟೇಲ್ ಈ ಹಿಂದೆ ‘ಭಾರತ್ ಜೋಡೋ’ ಯಾತ್ರೆ ಬೆಂಬಲಿಸಿ ಸೆಪ್ಟೆಂಬರ್ 7, 2022 ರಿಂದ ಜನವರಿ 30, 2023 ರವರೆಗೆ ಅಮೇರಿಕಾದ ಕೊರೆಯುವ ಚಳಿಯಲ್ಲಿ ಸಂಪೂರ್ಣ ಬರಿಗಾಲಿನಲ್ಲಿದ್ದು ತಮ್ಮ ಬೆಂಬಲ ವ್ಯಕ್ತಪಡಿಸಿ ಪ್ರಸಿದ್ಧ ಪತ್ರಕರ್ತ ರವೀಶ್ ಕುಮಾರ್ ಅವರ ಗಮನ ಸೆಳೆದಿದ್ದರು.

ಭಾರತದಲ್ಲಿ ಮುಂಬರುವ ಚುನಾವಣೆಗಳಲ್ಲಿ ಜನರ ಮನಸ್ಸುಗಳನ್ನು ಜೋಡಿಸುವ, ಒಂದುಗೂಡಿಸುವ ಸರಕಾರದ ಅನಿವಾರ್ಯತೆ ಇದೆಯೆಂದು ಹೇಳಿದರು.

-ಶ್ರೇಯಸ್, ಅಟ್ಲಾಂಟ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X