ಹಾಸನ | ಅಂತಾರಾಷ್ಟ್ರೀಯ ಬೂಕರ್ ಪುರಸ್ಕಾರ; ಬಾನು ಮುಷ್ತಾಕ್‌ ಕೃತಿ ಆಯ್ಕೆ

Date:

Advertisements

ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ಸಣ್ಣಕತೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪುರಸ್ಕಾರಕ್ಕೆ ಪರಿಗಣನೆಗೆ ಸಿದ್ಧವಾಗಿರುವ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ.

ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನವನ್ನು ದೀಪಾ ಭಸ್ತಿ ಅವರು ‘ಹಾರ್ಟ್ ಲ್ಯಾಂಪ್’ ಶೀರ್ಷಿಕೆಯೊಂದಿಗೆ ಇಂಗ್ಲಿಷ್‌ಗೆ ಅನುವಾದಿಸಿದ್ದರು.

“ಕನ್ನಡ ಭಾಷೆಯ ಕೃತಿಯೊಂದು ಬೂಕರ್ ಸ್ಪರ್ಧೆಗೆ ಪ್ರವೇಶ ಪಡೆದಿರುವುದು ಇದೇ ಮೊದಲ ಬಾರಿ. ಕುಟುಂಬ ಹಾಗೂ ಸಮುದಾಯದ ತುಮುಲಗಳನ್ನು ಹೃದಯಸ್ಪರ್ಶಿಯಾಗಿ ಪ್ರಾದೇಶಿಕ ಸೊಗಡಿನೊಂದಿಗೆ ಮುಷ್ತಾಕ್ ಅವರ ಕಥೆಗಳು ಕಟ್ಟಿಕೊಟ್ಟಿವೆ” ಎಂದು ತೀರ್ಪುಗಾರರು ತಿಳಿಸಿದ್ದಾರೆ.

Advertisements

ಅಂಚಿನಲ್ಲಿರುವ ಸಮುದಾಯಗಳಿಗೆ ದೀರ್ಘಕಾಲದಿಂದ ಧ್ವನಿಯಾಗಿರುವ ಹಾಸನ ಮೂಲದ ಮುಷ್ತಾಕ್ ಅವರು ನಾಮನಿರ್ದೇಶನದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದು, “ಹಾರ್ಟ್ ಲ್ಯಾಂಪ್ ಸಂಕಲನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ʼಅತ್ಯುತ್ತಮ ಶಿವರಾತ್ರಿ ಉಡುಗೊರೆʼಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿವಿಗಳನ್ನು ಮುಚ್ಚುವ ತೀರ್ಮಾನ ಕೂಡಲೇ ಹಿಂಪಡೆಯಲು ಸಿಪಿಐಎಂ ಆಗ್ರಹ

50 ಸಾವಿರ ಪೌಂಡ್(ಸುಮಾರು ₹55 ಲಕ್ಷ) ಮೊತ್ತದ ಬೂಕರ್ ಪ್ರಶಸ್ತಿಗೆ, ಪರಿಗಣನೆಯ ಪಟ್ಟಿಯಲ್ಲಿ ಒಟ್ಟು 13 ಕೃತಿಗಳು ಪ್ರವೇಶಪಡೆದಿವೆ.

ಅಂತಿಮ ಸುತ್ತಿಗೆ ಪ್ರವೇಶ ಪಡೆಯುವ 6 ಕೃತಿಗಳ ಪೈಕಿ ಒಂದನ್ನು ಬೂಕರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಏಪ್ರಿಲ್ 8ರಂದು ಬೂಕರ್ ಪುರಸ್ಕಾರ ಘೋಷಣೆಯಾಗಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X