ಹಿಂದಿಯಿಂದ ಉತ್ತರ ಭಾರತದ 25 ಭಾಷೆಗಳು ನಾಶ: ಎಂ ಕೆ ಸ್ಟಾಲಿನ್

Date:

Advertisements

“ಹಿಂದಿ ಭಾರತದ ಎಷ್ಟು ಭಾಷೆಗಳನ್ನು ನುಂಗಿ ಹಾಕಿದೆ ಎಂದು ತಿಳಿದಿದೆಯೇ? ಉತ್ತರ ಭಾರತದ ಸುಮಾರು 25 ಭಾಷೆಗಳನ್ನು ನಾಶ ಮಾಡಿದೆ” ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ತ್ರಿಭಾಷಾ ನೀತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ಕೇಂದ್ರ ಸರ್ಕಾರದ ಈ ಕ್ರಮವನ್ನು ತಮಿಳುನಾಡು ಸರ್ಕಾರ ತೀವ್ರವಾಗಿ ವಿರೋಧಿಸಿದೆ. ಅದರಲ್ಲೂ ತಮಿಳುನಾಡಿನ ನಿಧಿ ಬಿಡುಗಡೆ ಮಾಡಬೇಕಾದರೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಬೇಕು ಎಂಬ ಕೇಂದ್ರ ಶಿಕ್ಷಣ ಸಚಿವ ಧರ್ಮೇದ್ರ ಪ್ರಧಾನ್ ಅವರ ಬೆದರಿಕೆಯು ತಮಿಳುನಾಡನ್ನು ಇನ್ನಷ್ಟು ಕೆಣಕಿದೆ.

ಇದನ್ನು ಓದಿದ್ದೀರಾ? ತ್ರಿಭಾಷಾ ಸೂತ್ರದ ಹೆಸರಿನಲ್ಲಿ‌ ಹಿಂದಿ‌ ಹೇರಿಕೆ‌ ಮಾಡುತ್ತಿದೆ ಕೇಂದ್ರ ಸರ್ಕಾರ? three-language formula | BJP

Advertisements

ಈ ಹಿಂದಿನಿಂದಲೂ ಹಿಂದಿ ಹೇರಿಕೆಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿರುವ ತಮಿಳುನಾಡು ಇದೀಗ ಹಿಂದಿ ಹೇರಿಕೆ ವಿರುದ್ಧ ಕೇಂದ್ರ ಸರ್ಕಾರದ ಜೊತೆ ವಾಕ್ಸಮರ ನಡೆಸುತ್ತಿದೆ. ಹಿಂದಿ ಅದೆಷ್ಟೋ ಸ್ಥಳೀಯ ಭಾಷೆಗಳನ್ನು ನುಂಗಿ ಹಾಕಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್, “ಇತರೆ ರಾಜ್ಯಗಳ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ, ಹಿಂದಿ ಭಾರತದ ಎಷ್ಟು ಭಾಷೆಗಳನ್ನು ನುಂಗಿ ಹಾಕಿದೆ ಎಂದು ನಿಮಗೆ ತಿಳಿದಿದೆಯೇ” ಎಂದು ಪ್ರಶ್ನಿಸಿದ್ದಾರೆ.

“ಭೋಜ್‌ಪುರಿ, ಮೈತಿಲಿ, ಅವಧಿ, ಬ್ರಜ್, ಬಂಡೇಲಿ, ಗರ್ವಾಲಿ, ಕುಮೌನಿ, ಮಗಹಿ, ಮರ್ವರಿ, ಮಾಲ್ವಿ, ಛತ್ತೀಸ್‌ಗರ್ಹಿ, ಸಂಥಾಲಿ, ಆಂಗಿಕ, ಹೊ, ಖಾರಿಆ, ಖೋರ್ಥಾ, ಕುರ್ಮಾಲಿ, ಕುರುಖ್, ಮುಂಡಾರಿ ಮತ್ತು ಇನ್ನೂ ಹಲವು ಭಾಷೆಗಳು ಉಳಿಯಲು ಒದ್ದಾಡುತ್ತಿದೆ” ಎಂದು ಸ್ಟಾಲಿನ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ಹೇರಿಕೆ ವಿವಾದ | ಶಾಲೆಗಳಲ್ಲಿ ತೆಲುಗು ಬೋಧನೆ, ಕಲಿಕೆ ಕಡ್ಡಾಯಗೊಳಿಸಿದ ತೆಲಂಗಾಣ

“ಹಿಂದಿಯ ಗುರುತಿಗಾಗಿ ನೀಡುವ ಉತ್ತೇಜನವು ಇತರೆ ಪ್ರಾಚೀನ ಮಾತೃ ಭಾಷೆಗಳನ್ನು ಕೊಂದು ಹಾಕಿದೆ. ಉತ್ತರ ಪ್ರದೇಶ ಮತ್ತು ಬಿಹಾರ ಬರೀ ಹಿಂದಿ ನೆಲೆಯಾಗಿರಲಿಲ್ಲ. ಆ ರಾಜ್ಯದ ನಿಜವಾದ ಭಾಷೆಯು ಅಳಿದುಹೋಗಿದೆ” ಎಂದಿದ್ದಾರೆ.

“ಮೈಥಿಲಿ ಭಾಷೆಯು ಸದ್ಯ ಹಿಂದಿಯನ್ನು ಮಾತನಾಡುವ ಬಿಹಾರದ ಜನರ ಸ್ಥಳೀಯ ಭಾಷೆ ಆಗಿತ್ತು. ಹಿಂದಿ ಭಾರತದ ಅತೀ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶದ ಮಾತೃ ಭಾಷೆ ಅಂದುಕೊಳ್ಳೋಣ. ಆದರೆ ಅದು ಕೂಡಾ ನಿಜವಲ್ಲ. ಆದರೆ ಹಿಂದಿ ಸ್ಥಳೀಯ ಭಾಷೆಯನ್ನು ಧಮಿನಿಸಿ ಈಗ ಉತ್ತರ ಪ್ರದೇಶ ಭಾಷೆ ಎಂಬಂತಾಗಿದೆ” ಎಂದು ಸ್ಟಾಲಿನ್ ಹೇಳಿದ್ದಾರೆ.

“ಕಳೆದ ಶತಕದಲ್ಲಿ ಹಿಂದಿ ಮತ್ತು ಸಂಸ್ಕೃತದ ಪ್ರಾಬಲ್ಯದಿಂದ ಉತ್ತರ ಭಾರತದ ಸುಮಾರು 25ಕ್ಕೂ ಅಧಿಕ ಭಾಷೆಗಳು ನಾಶವಾಗಿದೆ” ಎಂದು ಕೂಡಾ ಸ್ಟಾಲಿನ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X