ನನ್ನ ಸಾವಿಗೆ ರಾಜಮೌಳಿ, ಆತನ ಪತ್ನಿ ಕಾರಣ: ಡೆತ್‌ನೋಟ್‌ ಬರೆದಿಟ್ಟು ನಿರ್ಮಾಪಕನ ಆತ್ಮಹತ್ಯೆ

Date:

Advertisements

ನನ್ನ ಆತ್ಮಹತ್ಯೆಗೆ ನಿರ್ದೇಶಕ ಎಸ್ ಎಸ್ ರಾಜಮೌಳಿ ಹಾಗೂ ಆತನ ಪತ್ನಿ ಕಾರಣವೆಂದು ತೆಲುಗು ಚಿತ್ರರಂಗದ ನಿರ್ಮಾಪಕರು ಡೆತ್‌ನೋಟ್‌ನಲ್ಲಿ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿರ್ಮಾಪಕ ಶ್ರೀನಿವಾಸ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ರಾಜಮೌಳಿ ನಿರ್ದೇಶನ ಹಾಗೂ ಜ್ಯೂನಿಯರ್ ಎನ್‌ಟಿಆರ್ ನಟನೆಯ ಯಮದೊಂಗ ಸಿನಿಮಾದ ಕಾರ್ಯಕಾರಿ ನಿರ್ಮಾಪಕರಾಗಿದ್ದರು.

ಎಸ್ ಎಸ್ ರಾಜಮೌಳಿಯ ಆತ್ಮಿಯ ಸ್ನೇಹಿತನೂ ಆಗಿದ್ದ ಶ್ರೀನಿವಾಸ್ ರಾವ್‍ ಡೆತ್ ನೋಟ್ ಮತ್ತು ಸಾಯುವ ಮುನ್ನ ವಿಡಿಯೋವೊಂದನ್ನು ಮಾಡಿ, ತನ್ನ ಸಾವಿಗೆ ರಾಜಮೌಳಿ ಮತ್ತು ಅವರ ಪತ್ನಿ ರಮಾ ಕಾರಣ ಅಂತ ಹೇಳಿಕೊಂಡಿದ್ದಾರೆ. ಜೊತೆಗೆ ರಾಜಮೌಳಿ ಮತ್ತು ತನ್ನ ನಡುವಿನ ಪ್ರೇಮ ಪ್ರಸಂಗವನ್ನು ಶ್ರೀನಿವಾಸ್ ಹಂಚಿಕೊಂಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಫಿಲ್ಮ್‌ ಫೆಸ್ಟಿವಲ್‌ | ಚಾಮಯ್ಯ ಮೇಷ್ಟ್ರೇ… ನಿಮ್ಮನ್ನು ಮರೆಯುವುದುಂಟೆ!

ರಾಜಮೌಳಿ ಮತ್ತು ನಾನು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದೆವು. ಆ ಹುಡುಗಿಯನ್ನು ರಾಜಮೌಳಿ ತ್ಯಾಗ ಮಾಡುವಂತೆ ನನಗೆ ಹೇಳಿದ. ಹಾಗಾಗಿ ನಾನು ಆ ಹುಡುಗಿಯನ್ನು ರಾಜಮೌಳಿಗೆ ಬಿಟ್ಟು ಕೊಟ್ಟೆ. ಅಲ್ಲಿಂದ ನಾನು ಮದುವೆ ಆಗಿಲ್ಲ. ರಾಜಮೌಳಿಗೂ ನನಗೂ 34 ವರ್ಷದ ಸ್ನೇಹ. ಇತ್ತೀಚೆಗೆ ಸಣ್ಣ ಮನಸ್ತಾಪ ಆಯಿತು. ನಾನು ನಮ್ಮ ಲವ್ ಸ್ಟೋರಿಯನ್ನು ಸಿನಿಮಾ ಮಾಡೋದಾಗಿ ಹೇಳಿದೆ. ಅಲ್ಲಿಂದ ರಾಜಮೌಳಿ ನಿರಂತರವಾಗಿ ನನಗೆ ಟಾರ್ಚರ್ ಮಾಡಲು ಶುರು ಮಾಡಿದ ಅಂತ ಡೆತ್ ನೋಟ್ ನಲ್ಲಿ ಶ್ರೀನಿವಾಸ್ ರಾವ್ ಬರೆದಿದ್ದಾರೆ.

ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ರಾಜಮೌಳಿ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಸುಳ್ಳುಪತ್ತೆ ಪರೀಕ್ಷೆ ನಡೆಸಿದರೆ ಸತ್ಯಾಂಶ ಹೊರಬೀಳುತ್ತದೆ ಎಂದು ತಿಳಿಸಿದ್ದಾರೆ. ಈವರೆಗೂ ಶ್ರೀನಿವಾಸ್ ರಾವ್ ಅವರ ಮೃತದೇಹ ಸಿಕ್ಕಿಲ್ಲ ಎನ್ನುವ ಮಾಹಿತಿಯೂ ಇದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X