ʼಸಿಟಿʼ ರವಿಗೂ, ಕಾರು ಅಘಾತಕ್ಕೂ, ʼಓಟಿʼ ಮದ್ಯಕ್ಕೂ ಜನ್ಮಾಂತರದ ಸಂಬಂಧ: ಕಾಂಗ್ರೆಸ್‌ ಲೇವಡಿ

Date:

Advertisements
  • ʼಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆʼ
  • ʼಹೆಂಡ ಹಂಚುವ ಕಾರ್ಯಸೂಚಿ ಆರ್‌ಎಸ್‌ಎಸ್‌ ಕಚೇರಿಯಿಂದ ಬಂತಾ ರವಿ ಅವರೇ?ʼ

“ಬಿಜೆಪಿಯ ಸಿ ಟಿ ರವಿ ಬೆಂಬಲಿಗರ ಕಾರು ಅಪಘಾತವಾಗುತ್ತದೆ. ಅದರೊಳಗೆ ಮದ್ಯದ ರಾಶಿ, ಜೊತೆಗೊಂದು ಮಾರಕಾಸ್ತ್ರ ಇರುತ್ತದೆ. ಈ ʼಸಿಟಿʼ ರವಿಗೂ, ಕಾರು ಆಘಾತಕ್ಕೂ, ʼಓಟಿʼ ಮದ್ಯಕ್ಕೂ ಏನು ಈ ಜನ್ಮಾಂತರದ ಸಂಬಂಧ!” ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಧರ್ಮ, ಸಂಸ್ಕೃತಿಯ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆ!” ಎಂದು ಕುಟುಕಿದೆ.

“ ʼಸಿಟಿʼ ರವಿಗೂ ʼಓಟಿʼ ಮದ್ಯಕ್ಕೂ ಯಾವ ಜನ್ಮದ ಮೈತ್ರಿ ಇದೆಯೋ? ಮತದಾರರಿಗೆ ಸಾಧನೆ ತೋರಿಸಿ ಮತ ಕೇಳಲಾಗದ ಬಿಜೆಪಿ ಹೆಂಡದ ಮೊರೆ ಹೋಗಿರುವುದು ನಾಚಿಕೆಗೇಡು. ಹೆಂಡ ಹಂಚುವ ಕಾರ್ಯಸೂಚಿ ಆರ್‌ಎಸ್‌ಎಸ್‌ ಕಚೇರಿಯಿಂದ ಬಂದಿದ್ದೇ ಸಿ ಟಿ ರವಿ ಅವರೇ? ಹೆಂಡ ಪೂರೈಕೆ ಮಾಡಲೆಂದೇ ವಾರಕ್ಕೊಮ್ಮೆ ಮೋದಿ, ಶಾ ಕರ್ನಾಟಕಕ್ಕೆ ಬರುತ್ತಿದ್ದಾರೆಯೇ?” ಎಂದು ಕಿಚಾಯಿಸಿದೆ.

Advertisements

“ಶಾಸಕರಿಗೆ “ಬಾಂಬೆ ಮಿಠಾಯಿ” ಆಮಿಷ ತೋರಿಸಿ ಆಪರೇಷನ್ ಮಾಡುವ ಬಿಜೆಪಿ ಮತದಾರರಿಗೆ ಹೆಂಡ ತೋರಿಸಿ ಮತ ಪಡೆಯಲು ಮುಂದಾಗಿದೆ. ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೆ ಸಂಬಂಧಿಸಿದ ಕಾರಿನಲ್ಲಿ “ಓಟಿ ಮದ್ಯ” ಹಾಗೂ ಲಾಂಗ್ ಪತ್ತೆಯಾಗಿದೆ. ಹೆಂಡ ಕುಡಿಸಿ, ಬೆದರಿಸಿ ಮತ ಪಡೆಯುವ ಜವಾಬ್ದಾರಿಯನ್ನು ರೌಡಿ ಮೋರ್ಚಾಗೆ ವಹಿಸಲಾಗಿದೆಯೇ” ಎಂದು ಬಿಜೆಪಿಯನ್ನು ಹಿಯಾಳಿಸಿದೆ.

ಚಿಕ್ಕಮಗಳೂರು ನಗರದ ಎಐಟಿ ವೃತ್ತ ಸಮೀಪ ಭಾನುವಾರ ರಾತ್ರಿ ಅಪಘಾತಕೀಡಾಗಿದ್ದ ಕಾರಿನಲ್ಲಿ ಶಾಸಕ ಸಿ ಟಿ ರವಿ ಭಾವಚಿತ್ರದ ಕ್ಯಾಲೆಂಡರ್‌ಗಳು, ಮದ್ಯದ ಪ್ಯಾಕೆಟ್‌ಗಳು, ಕತ್ತಿ (ಲಾಂಗ್) ಸಿಕ್ಕಿವೆ. ಕಾರು, ಚಾಲಕ ಮಂಜುನಾಥ, ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X