ಬಿಜೆಪಿಯವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು: ಸಿದ್ದರಾಮಯ್ಯ ತರಾಟೆ

Date:

Advertisements
  • ‘ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡ ಕೇಂದ್ರ ಬಿಜೆಪಿ’
  • ‘ಅಕ್ಕಿ ಇಟ್ಟುಕೊಂಡು ಕೊಡಲ್ಲ ಎಂದರೆ ಬಿಜೆಪಿಯದ್ದು ದುಷ್ಟ ರಾಜಕಾರಣ’

ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3,400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡುವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ” ಎಂದು ದೂರಿದ್ದಾರೆ.

“ಜೂನ್ 13 ರಂದು ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದು 15 ಲಕ್ಷ ಮೆ.ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಯೋಜನೆಯಡಿ (ಒ.ಎಂಎಸ್.ಎಸ್ ಡಿ) ಮಾರಾಟ ಮಾಡಲು ಸೂಚಿಸಿದೆ. ಅಲ್ಲದೆ ಈಶಾನ್ಯ ರಾಜ್ಯಗಳನ್ನು ಹೊರತು ಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.

Advertisements

“ಎಫ್‌.ಸಿ.ಐ. ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್.ಸಿ.ಐ ನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಕ್ಕಿ ಪೂರೈಕೆ ನಿರಾಕರಣೆ: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗೆ ಕಲ್ಲು ಹಾಕಿದ ಕೇಂದ್ರ ಸರಕಾರ

“ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ಇಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಇಂದು ಸಂಜೆಯೊಳಗೆ ಲಭಿಸಲಿದೆ. ಇಂದು ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ” ಎಂದಿದ್ದಾರೆ.

“ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ ನಾವು ಹಣ ನೀಡಿ ಪಡೆಯುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನಃ ಮನವಿ ಮಾಡುವುದು ಇದ್ದೇ ಇರುತ್ತದೆ ಆದರೆ ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X