ಬೆಂಗಳೂರು | ಪಿಎಚ್‌ಡಿ ಫೆಲೋಶಿಪ್‌ ಅನ್ನು ಮೂಲ ಸ್ವರೂಪದಲ್ಲಿಯೇ ಜಾರಿಗೊಳಿಸಿ: ಎಸ್‌ಐಒ ಆಗ್ರಹ

Date:

Advertisements

ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಗಳ ಫೆಲೋಶಿಪ್‌ ಅನ್ನು ಮರು ಪರಿಶೀಲಿಸಿ ಮೂಲ ಸ್ವರೂಪದಲ್ಲಿಯೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗನೈಜೇಶನ್‌ (ಎಸ್‌ಐಒ) ಸರ್ಕಾರಕ್ಕೆ ಮನವಿ ಮಾಡಿದೆ.

ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನೆ ಮತ್ತು ಪ್ರತಿಭೆಯ ಮೂಲಕ ಸಾಮಾಜಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಆದರೆ ಇತ್ತೀಚಿನ ಸರ್ಕಾರದ ಬದಲಾದ ನೀತಿಗಳಿಂದ ಡಾಕ್ಟರೇಟ್ ಅಧ್ಯಯನವನ್ನು ಕೈಗೊಂಡಿರುವ ಅನೇಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಈ ಹಿಂದೆ ಅಲ್ಪಸಂಖ್ಯಾತ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾಸಿಕ ₹25,000 ಫೆಲೋಶಿಪ್ ನೀಡುತ್ತಿತ್ತು. ಅದನ್ನು ಈಗ ₹8,333ಕ್ಕೆ ಇಳಿಸಲಾಗಿದೆ. ಈ ಮಹತ್ವದ ಕಡಿತದಿಂದ ಸಂಶೋಧಕರು ತಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಇದು ಅವರ ಶೈಕ್ಷಣಿಕ ಅನ್ವೇಷಣೆಗಳಿಗೆ ಅಪಾಯವನ್ನುಂಟು ಮಾಡಿದೆ. ಡಾಕ್ಟರೇಟ್ ಅಧ್ಯಯನಗಳಿಗೆ ಪೂರ್ಣ ಸಮಯದ ಬದ್ಧತೆಯ ಅಗತ್ಯವಿರುತ್ತದೆ. ಇದನ್ನು ಹಣಕಾಸಿನ ಬೆಂಬಲವಿಲ್ಲದೆ ಮುಂದುವರೆಸುವುದು ಕಷ್ಟಕರ. ಅನೇಕ ಅರ್ಹ ವಿದ್ಯಾರ್ಥಿಗಳು ತಮ್ಮ ಸಂಶೋಧನೆಯನ್ನು ತ್ಯಜಿಸಲು ಮುಂದಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಹಾಗಾಗಿ ಕೂಡಲೇ ಫೆಲೋಶಿಪ್‌ ಮರು ಪರಿಶೀಲಿಸಬೇಕು ಎಂದು ಮನವಿ ಮಾಡಿದೆ.

Advertisements

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ವಿಧಾನಸೌಧದ ಆವರಣದಲ್ಲಿ ಇಂದಿನಿಂದ ʼಪುಸ್ತಕ ಮೇಳʼ

ಉನ್ನತ ಶಿಕ್ಷಣದಲ್ಲಿ ಮುಸ್ಲಿಮರ ಒಟ್ಟು ದಾಖಲಾತಿ ಅನುಪಾತ ಗಮನಾರ್ಹವಾಗಿ ಕಡಿಮೆಯಾಗಿದೆ. 2020-21ರಂತೆ, ಮುಸ್ಲಿಮರ ದಾಖಲಾತಿ ಅನುಪಾತ 8.91% ರಷ್ಟಿದೆ. ಇದು ರಾಷ್ಟ್ರೀಯ ಸರಾಸರಿ 27.1% ಗಿಂತ ಗಮನಾರ್ಹವಾಗಿ ಕಡಿಮೆಯಾಗಿದೆ. ಹಣಕಾಸಿನ ತೊಡಕು ಪ್ರಾಥಮಿಕ ತಡೆಗೋಡೆಯಾಗಿದ್ದು ಇದು ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದಲ್ಲಿ ಮುಂದುವರೆಯುವುದನ್ನು ತಡೆಯುತ್ತಿದೆ. ಫೆಲೋಶಿಪ್‌ನಲ್ಲಿನ ಕಡಿತವು ಈ ಸಮಸ್ಯೆಯನ್ನು ಇನ್ನಷ್ಟು ಹದಗೇಡಿಸುತ್ತಿದೆ. ಇದು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಮತ್ತಷ್ಟು ತಡೆಯಾಗುತ್ತಿದೆ ಎಂದು ಶೋಚನೀಯ. ಆದ್ದರಿಂದ ಸರ್ಕಾರ ತಡಮಾಡದೆ ₹25,000ಕ್ಕೆ ತುರ್ತಾಗಿ ಫೆಲೋಶಿಪ್ ಮರುಜಾರಿಗೊಳಿಸುವಂತೆ ಒತ್ತಾಯಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X