ರಾಯಚೂರು | ಒಳ ಮೀಸಲಾತಿ ಜಾರಿಯಾಗದೇ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ; ಹೋರಾಟಕ್ಕೆ ಸಜ್ಜು

Date:

Advertisements

ಒಳ ಮೀಸಲಾತಿ ಜಾರಿ ಮಾಡದೇ ಇಲಾಖೆಯ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಮುಂದಾಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌ ಸಿ ಮಹದೇವಪ್ಪ ವಿರುದ್ಧ ಇದೇ ಮಾ.3ರಂದು ರಾಯಚೂರಿನಲ್ಲಿ ಬೃಹತ್‌ ಪ್ರತಿಭಟನಾ ಹೋರಾಟ ಮಾಡಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ವಕೀಲ ಎಸ್ ಮಾರೆಪ್ಪ ಹೇಳಿದರು.

ಅವರಿಂದು ಮಾದ್ಯಮಗೋಷ್ಠಿಯಲ್ಲಿ ಮಾತನಾಡಿ, “ಪರಿಶಿಷ್ಟ ಜಾತಿಯ ಒಳಮೀಸಲಾತಿಗಾಗಿ ರಾಜ್ಯ ಸರ್ಕಾರ ನೇಮಿಸಿದ ನ್ಯಾಯಮೂರ್ತಿ ನಾಗಮೋಹನದಾಸ್ ಪರಿಶೀಲನಾ ಸಮಿತಿ ವರದಿ ನೀಡಲು ಮಾರ್ಚ್ 1 ಗಡುವು ಇದೆ. ಆದರೆ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿ ನೀಡುತ್ತಿಲ್ಲ ಎಂದು ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರು ಸರ್ಕಾರಕ್ಕೆ‌ ಪತ್ರ ಬರೆದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಆಯೋಗದ ಕಾರ್ಯಸೂಚಿಗಳು‌ ನೆನೆಗುದಿಗೆ ಬೀಳುವಂತಾಗಿದೆ” ಎಂದು ಆರೋಪಿಸಿದರು.

“ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಜಾರಿಯಾಗುವವರೆಗೆ ಬ್ಯಾಕ್ ಲಾಗ್ ಹುದ್ದೆಗಳನ್ನು ನೇಮಕ ಮಾಡಬಾರದು ಎಂದು ಪ್ರತಿಭಟನೆಗಳು ಮಾಡಿದ‌ ಬಳಿಕ ಸರ್ಕಾರ ಅದಕ್ಕೆ ಸ್ಪಂದಿಸಿ ನೇಮಕ ಪ್ರಕ್ರಿಯೆ ಮುಂದೂಡಿತ್ತು. ಆದರೆ ಸಚಿವ ಮಹದೇವಪ್ಪ ಸಾವಿರರು ಹುದ್ದೆಗಳನ್ನು ಭರ್ತಿ ಮಾಡುವ ತೀರ್ಮಾನ ಮಾಡಿರುವುದು ಖಂಡನೀಯ” ಎಂದರು.

“ಒಳಮೀಸಲಾತಿ ಇನ್ನೂ ಜಾರಿ ಆಗಿಲ್ಲ. ಇದೀಗ ಏಕಾಏಕಿ ಹುದ್ದೆ ಭರ್ತಿಗೆ ಮುಂದಾಗಿರುವುದು ಸರ್ಕಾಋ ದಲಿತರ ವಿರೋಧಿ ನಿಲುವು ಹೊಂದಿದೆ ಎನ್ನುವುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ. ಸಮುದಾಯದ ಪ್ರಮುಖರಾದ ಸಚಿವರೇ, ವರದಿ ಜಾರಿಗೆ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಮೌನ ವಹಿಸಿರುವುದನ್ನು ಖಂಡಿಸಿ ಅವರ ವಿರುದ್ಧ ಹೋರಾಟ ಮಾಡಲು ದಲಿತಪರ ಸಂಘಟನೆಗಳಿಂದ ತೀರ್ಮಾನಿಸಲಾಗಿದೆ. ಎಲ್ಲ ದಲಿತಪರ ಸಂಘಟನೆಗಳು ಸರ್ಕಾರದ ಕೈಗೊಂಬೆಯಂತೆ ನಡೆಯುತ್ತಿವೆ. ಇದರಿಂದ ಸರಕಾರ ಎಸ್‌ಸಿ ಎಸ್‌ಟಿ ಅನುದಾನವನ್ನು ಬೇರೆ ಕಾಮಗಾರಿಗಳಿಗೆ ಬಳಕೆ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ರಾಯಚೂರು | ಪಕ್ಷಿಗಳ ಸರಣಿ ಸಾವಿನಿಂದ ಜನರಲ್ಲಿ ಆತಂಕ; ಹಕ್ಕಿಜ್ವರದ ಶಂಕೆ

ಈ ವೇಳೆ ಹೇಮರಾಜ್ ಆಸ್ಕಿಹಾಳ, ನರಸಿಂಹಲು, ತಾಯಪ್ಪ, ಲಕ್ಷ್ಮಣ, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X