ದಾವಣಗೆರೆ | ಸ್ಮಶಾನ, ಕೆರೆ, ಗೋಮಾಳದಲ್ಲಿ ಅಕ್ರಮ ಮಣ್ಣು ಸಾಗಾಟ; ಕ್ರಮಕ್ಕೆ ದಸಂಸ ಆಗ್ರಹ.‌

Date:

Advertisements

ಕಬ್ಬೂರು ಗ್ರಾಮದ ಸ್ಮಶಾನದ ವಿರೂಪ, ಅಕ್ರಮವಾಗಿ ಮಣ್ಣು ಸಾಗಾಟ ಮತ್ತು ಪೂರ್ವಜರ ಸಮಾಧಿಗಳನ್ನು, ಅಸ್ಥಿಪಂಜರ ನಾಶ ಮಾಡಿರುವವರ ಹಾಗೂ ಕೆರೆ ಮತ್ತು ಗೋಮಾಳವನ್ನು ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರೊ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ದಾವಣಗೆರೆ ತಾಲೂಕಿನ ಕಬ್ಬೂರಿನ ಗ್ರಾಮಸ್ಥರು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

1001631670

ಕಬ್ಬೂರು ಗ್ರಾಮದಲ್ಲಿ ಸರ್ವೆ ನಂ.31-32ರಲ್ಲಿ ಸರ್ಕಾರಿ ಗೋಮಾಳದಲ್ಲಿ ಸರಿ ಸುಮಾರು 25-30 ವರ್ಷಗಳಿಂದ ಆದಿಕರ್ನಾಟಕ (ಎಸ್.ಸಿ), ನಾಯಕ ಜನಾಂಗ, ಮಡಿವಾಳ, ಗೊಲ್ಲ, ಭೋವಿ ಇತರೆ ಜನಾಂಗದ ನಮ್ಮ ಪೂರ್ವಜರ ಅಂತ್ಯ ಸಂಸ್ಕಾರ ಮಾಡಿಕೊಂಡು ಬಂದಿದ್ದೇವೆ. ನಮ್ಮ ಗ್ರಾಮಕ್ಕೆ ಸೇರಿದ ಕೆರೆಯ ಜಾಗವನ್ನು ಒತ್ತುವರಿ ಮಾಡಿ ಒತ್ತುವರಿದಾರರು ಆ ಜಾಗದಲ್ಲಿ ಅಡಿಕೆ, ತೆಂಗು ಹಾಗೂ ಇತರೆ ಬೆಳೆಗಳ ತೋಟಗಳನ್ನಾಗಿ ಪರಿವರ್ತಿಸಿಕೊಂಡು ಒತ್ತುವರಿ ಮಾಡಿದ್ದು ಮತ್ತು ನಮ್ಮ ಗ್ರಾಮಕ್ಕೆ ಸೇರಿದ ಸರ್ಕಾರಿ ಗೋಮಾಳದಲ್ಲಿ ಕೆಲ ಮಣ್ಣು ಮಾಫಿಯ ದಂಧೆಕೋರರು ಕೆಲವಾರು ವರ್ಷಗಳಿಂದ ಜಾನುವಾರುಗಳಿಗೆ ಪಶು ಪಕ್ಷಿಗಳಿಗೆ, ಕುರಿ-ಮೇಕೆಗಳ ಮೇವಿಗೆ ಆಶ್ರಯವಾದ ಗೋಮಾಳದಲ್ಲಿ 8-10 ಅಡಿ ಆಳದವರೆಗೆ ಜೆ.ಸಿ.ಬಿ ಮತ್ತು ಟ್ರಾಕ್ಟರ್‌ನಿಂದ ಮಣ್ಣನ್ನು ಅಗೆದು ಸಾಗಾಟ ಮಾಡಿ ಮಾರಾಟ ಮಾಡಿದ್ದಾರೆ.

ಜನವರಿ 10ರ ತಡರಾತ್ರಿಯಲ್ಲಿ ನಮ್ಮ ಪೂರ್ವಜರ ಸಮಾಧಿಗಳನ್ನು ಸಹ ನಾಶ ಮಾಡಿ ಅಲ್ಲಿನ ಅಸ್ಥಿಪಂಜರಗಳನ್ನು ಯಾವುದೇ ಕುರುಹುಗಳು ಸಿಗದಂತೆ ಮಾಡಿ ಅಲ್ಲಿನ ಮಣ್ಣನ್ನು ಸಾಗಾಟ ಮಾಡಿದ್ದಾರೆ. ಮರುದಿನ ಜನವರಿ 11ರ ಶನಿವಾರ ಬೆಳಿಗ್ಗೆ 9.00ಗಂಟೆಗೆ ಜೆ.ಸಿ.ಬಿ. ಮತ್ತು ಟ್ರಾಕ್ಟರ್‌ಗಳ ಮಾಲೀಕರನ್ನು ಕೇಳಿದಾಗ ನಮಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಂದೇ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡಿಲ್ಲ.

Advertisements

ಆದ್ದರಿಂದ ಈ ಕೂಡಲೇ ಸ್ಮಶಾನದಲ್ಲಿ, ಗೋಮಾಳ, ಕೆರೆಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಮಾಡಿರುವವರ ವಿರುದ್ಧ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ ನಡೆಸಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮದುವೆ ಸಂಭ್ರಮ; ಹತ್ತಕ್ಕೂ ಹೆಚ್ಚು ಮನೆಗಳ ಸರಣಿ ಕಳ್ಳತನ

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ, ಮಂಜು ಕಬ್ಬೂರು, ಗ್ರಾಮಸ್ಥರಾದ ಕುಮಾರಪ್ಪ, ಮಲ್ಲಿಕಾರ್ಜುನ, ಶೇಖರಪ್ಪ, ಎಂ ರಾಮಚಂದ್ರಪ್ಪ, ಸಂದೀಪ್, ವಿಜಯಲಕ್ಷ್ಮಿ,‌ ಎನ್ಎಂ ಕೋಟಿ, ಅಂಜನಪ್ಪ, ಗೋವಿಂದಪ್ಪ, ಬಸವರಾಜಪ್ಪ, ಮಂಜಪ್ಪ, ಮಹೇಶ್, ಯಲ್ಲೇಶ, ಮಂಜುನಾಥ‌ ಸೇರಿದಂತೆ ಕಬ್ಬೂರಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X