ಬೆಂಗಳೂರು | ಮತ್ತೆ ಬುಲ್ಡೋಜರ್; ಒತ್ತುವರಿ ತೆರವು ಕಾರ್ಯ ಶೀಘ್ರ ಆರಂಭ

Date:

Advertisements
  • ತಹಶೀಲ್ದಾರ ಅವರಿಂದ ಆರ್ಡರ್ ಪಾಸ್ ಮಾಡಿರುವಂತಹ ಒತ್ತುವರಿ ಶೀಘ್ರ ತೆರವು
  • ಒತ್ತುವರಿ ತೆರವುಗೊಳಿಸಿ ಕಾಲುವೆ ನಿರ್ಮಾಣ ಮಾಡಬೇಕು: ತುಷಾರ್ ಗಿರಿನಾಥ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಗುರುತು ಮಾಡಲಾಗಿದೆ. ತಹಶೀಲ್ದಾರ ಅವರಿಂದ ಆರ್ಡರ್ ಪಾಸ್ ಮಾಡಿರುವಂತಹ ಒತ್ತುವರಿಗಳನ್ನು ಶೀಘ್ರದಲ್ಲಿಯೇ ತೆರವು ಮಾಡಲಾಗುವುದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ಗುರುವಾರ ಸಭೆ ನಡೆಯಿತು. ಈ ವೇಳೆ, ಮಾತನಾಡಿದ ಅವರು, “ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರಿಗೆ ಬಾಕಿ ಆರ್ಡರ್ ಪಾಸ್ ಮಾಡಬೇಕಿರುವಂತಹ ಸರ್ವೇಗಳಿಗೆ ತಹಶೀಲ್ದಾರ್ ಆರ್ಡರ್ ಪಾಸ್ ಮಾಡಬೇಕು. ತದನಂತರ ಹಂತ-ಹಂತವಾಗಿ ಎಲ್ಲ ಒತ್ತುವರಿಗಳ ತೆರವು ಮಾಡಬೇಕು. ಯಾರಾದರು ತಡೆಯೊಡ್ಡಿದರೆ ಪೊಲೀಸ್ ಭದ್ರತೆಯೊಂದಿಗೆ ಒತ್ತುವರಿಗಳ ತೆರವು ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಭೂ ಮಾಪನ ಕಾರ್ಯ ಮಾಡಿರುವ ಕಡೆ ಗ್ರಾಮ ನಕ್ಷೆ ಮತ್ತು ಟಿಪ್ಪಣಿಗಳ ಅನ್ವಯ ಯಾವುದೇ ವ್ಯತ್ಯಾಸ ಮಾಡದೆ ಸಂಬಂಧಪಟ್ಟ ಭೂ ಮಾಪಕರು ನಕ್ಷೆಯನ್ನು ಸಿದ್ಧಪಡಿಸಿ ತಹಶೀಲ್ದಾರ್ ರವರು ಅದಕ್ಕೆ ಆದೇಶಗಳನ್ನು ಜಾರಿಮಾಡಬೇಕು. ತದನಂತರ ಒತ್ತುವರಿ ತೆರವುಗೊಳಿಸಿ ಕಾಲುವೆ ನಿರ್ಮಾಣ ಮಾಡಬೇಕು” ಎಂದರು.

Advertisements

“ಪಾಲಿಕೆಯ ಎಂಟೂ ವಲಯಗಳಲ್ಲಿ ಬಾಕಿಯಿರುವ ಒತ್ತುವರಿಗಳನ್ನು ತೆರವು ಮಾಡಿ ರಾಜಕಾಲುವೆಗಳನ್ನು ನಿರ್ಮಾಣ ಮಾಡಿ ಎಲ್ಲಿಯೂ ಜಲಾವೃತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸಿಕೊಂಡು ಒತ್ತುವರಿ ತೆರವು ಮಾಡಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಇಂದಿರಾ ಕ್ಯಾಂಟೀನ್‌ನಲ್ಲಿ ಇನ್ನುಮುಂದೆ ಊಟದ ಜೊತೆಗೆ ಮೊಟ್ಟೆ ನೀಡಲು ಚಿಂತನೆ

ಈ ವೇಳೆ, ವಲಯ ಆಯುಕ್ತರಾದ ಜಯರಾಮ್ ರಾಯಪುರ, ಡಾ. ತ್ರಿಲೋಕ್ ಚಂದ್ರ, ರವೀಂದ್ರ, ಡಾ.ಹರೀಶ್ ಕುಮಾರ್, ಡಾ.ದೀಪಕ್, ಪ್ರೀತಿ ಗೆಹ್ಲೋಟ್ ಸೇರಿದಂತೆ ಎಲ್ಲ ವಲಯ ಜಂಟಿ ಆಯುಕ್ತರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X