ಮಾರ್ಚ್‌ನಿಂದ ಸಾಮಾನ್ಯಕ್ಕಿಂತ ಅಧಿಕ ತಾಪಮಾನ; ಬಿಸಿ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

Advertisements

ಈಗಾಗಲೇ ಬೆಚ್ಚಗಿನ ಚಳಿಗಾಲ ಮುಗಿದಿದ್ದು, ಬಿಸಿಲು ಚಳಿಗಾಲದ ಅಂತ್ಯದಲ್ಲೇ ಅಧಿಕವಾಗಿದೆ. ಈ ನಡುವೆ ಮಾರ್ಚ್‌ನಿಂದ ಅಂದರೆ ಇಂದಿನಿಂದ (ಮಾರ್ಚ್‌ 1) ದೇಶದಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರಲಿದೆ. ಹಾಗೆಯೇ ಬಿಸಿ ಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

1901ರ ನಂತರ 2025ರ ಫೆಬ್ರವರಿಯು ಅತೀ ಅಧಿಕ ಬಿಸಿಯಾದ ತಿಂಗಳು ಎಂದು ಐಎಂಡಿ ಹೇಳಿದೆ. ಫೆಬ್ರವರಿಯ ಸರಾಸರಿ ತಾಪಮಾನ 20.7 ಡಿಗ್ರಿ ಸೆಲ್ಸಿಯಸ್ ಆಗಿದೆ. ಆದರೆ ಈ ವರ್ಷ 22.04 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. 1901ರ ಬಳಿಕ ದಾಖಲಾದ ಅತೀ ಗರಿಷ್ಠ ತಾಪಮಾನ ಮತ್ತು ಅತ್ಯಧಿಕ ಕನಿಷ್ಠ ತಾಪಮಾನ ಇದಾಗಿದೆ.

ಇದನ್ನು ಓದಿದ್ದೀರಾ? ಅತೀವ ಬಿಸಿಲು | ರಾಜ್ಯದ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

Advertisements

ಈ ನಡುವೆ ದೇಶದಲ್ಲಿ ಜನವರಿ ಮತ್ತು ಫೆಬ್ರವರಿ ನಡುವೆ ಶೇಕಡ 59ರಷ್ಟು ಮಳೆಯ ಕೊರತೆ ಕಾಣಿಸಿಕೊಂಡಿದೆ. ಮಧ್ಯ ಭಾರತದಲ್ಲಿ ಶೇಖಡ 89ರಷ್ಟು ಮಳೆಯ ಕೊರತೆಯಿದ್ದರೆ, ವಾಯುವ್ಯ ಭಾರತದಲ್ಲಿ ಶೇಕಡ 64ರಷ್ಟು ಮಳೆ ಕೊರತೆ ಕಂಡು ಬಂದಿದೆ.

ಇನ್ನು ಪರ್ಯಾಯ ದ್ವೀಪ ಭಾರತದ ದಕ್ಷಿಣ ಭಾಗಗಳು ಮತ್ತು ಈಶಾನ್ಯ ಭಾರತದ ಪ್ರತ್ಯೇಕ ಪ್ರದೇಶಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈಶಾನ್ಯ ಭಾರತ, ಉತ್ತರ ಭಾರತ, ಪರ್ಯಾಯ ದ್ವೀಪದ ನೈಋತ್ಯ ಮತ್ತು ದಕ್ಷಿಣ ಭಾಗಗಳನ್ನು ಹೊರತುಪಡಿಸಿ ದೇಶದ ಅಧಿಕ ಭಾಗಗಳಲ್ಲಿ ಮಾರ್ಚ್‌ನಿಂದ ಮೇ ತಿಂಗಳವರೆಗೆ ಸಾಮಾನ್ಯಕ್ಕಿಂತ ಅಧಿಕ ಶಾಖದ ಅಲೆಗಳು ಇರಬಹುದೆಂದು ಮುನ್ಸೂಚನೆ ನೀಡಿದೆ.

ಇದನ್ನು ಓದಿದ್ದೀರಾ? ಕರ್ನಾಟಕದ ಗೇರುಸೊಪ್ಪ ಸೇರಿ ಹಲವೆಡೆ ಮಳೆ; 4 ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

ಈ ನಡುವೆ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಮತ್ತು ಬಿಸಿ ಗಾಳಿ ಇರಬಹುದು. ಇದು ಕೃಷಿಯ ಮೇಲೆ ಪ್ರಭಾವ ಬೀರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪಂಜಾಬ್ ಮತ್ತು ಹರಿಯಾಣದಲ್ಲಿ ಗೋಧಿಯಂತಹ ಪ್ರಮುಖ ರಬಿ ಬೆಳೆಗಳ ಕೊಯ್ಲು ಮಾರ್ಚ್ ಮಧ್ಯದಲ್ಲಿ ಪ್ರಾರಂಭವಾಗುತ್ತದೆ. ಈ ನಡುವೆ ತಾಪಮಾನ ಏರಿಕೆ ಮುನ್ಸೂಚನೆ ರೈತರಲ್ಲಿ ಆತಂಕ ಸೃಷ್ಟಿಸಿದೆ. ಈಗಾಗಲೇ ಕಳೆದ ಮೂರು ವರ್ಷಗಳಿಂದ ದೇಶದಲ್ಲಿ ಗೋಧಿ ಬೆಳೆಯಲ್ಲಿ ಕೊರತೆ ಕಾಣಿಸಿಕೊಂಡಿದೆ. ಅದರಿಂದಾಗಿ ಗೋಧಿ ಬೆಲೆಯು ಗಗನಕ್ಕೇರಿದೆ. ಈಗ ಮತ್ತೆ ಹವಾಮಾನ ಬದಲಾವಣೆಯಿಂದಾಗಿ ಗೋಧಿ ಬೆಳೆ ಮೇಲೆ ಪ್ರಭಾವ ಬೀರಿದರೆ ಮತ್ತಷ್ಟು ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X