ಕಾಂಗ್ರೆಸ್ ಸರ್ಕಾರ ಭದ್ರ, ಅದೃಷ್ಟ ಬಂದರೆ ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಜಿ ಟಿ ದೇವೇಗೌಡ‌

Date:

Advertisements

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭದ್ರವಾಗಿದೆ. ಅದೃಷ್ಟ ಒಲಿದು ಬಂದಾಗ ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ‌ ಅಭಿಪ್ರಾಯಪಟ್ಟರು.

ಮೈಸೂರಿನಲ್ಲಿ ಶನಿವಾರ ಮಾತನಾಡಿದ ಅವರು, “ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಇದ್ದಾರೆ. 138 ಸ್ಥಾನದಿಂದ ಕಾಂಗ್ರೆಸ್ ಸುಭದ್ರವಾಗಿದೆ” ಎಂದರು.

ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡ ಬಗ್ಗೆ ಪ್ರತಿಕ್ರಿಯಿಸಿ, “ನನ್ನ ಕ್ಷೇತ್ರ ತುಂಬಾ ವಿಶಾಲವಾಗಿದೆ. ಚಾಮುಂಡೇಶ್ವರಿ ಕ್ಷೇತ್ರ ಸಮಸ್ಯೆಗಳ ಆಗರವಾಗಿದೆ. ಮಹಾನಗರ ಪಾಲಿಕೆಯ ಹಲವು ವಾರ್ಡುಗಳು ಸೇರಿದಂತೆ ರಿಂಗ್ ರಸ್ತೆ ಸುತ್ತಲಿನ ಪ್ರದೇಶಗಳು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸೇರಿವೆ. ಹಾಗಾಗಿ ಕ್ಷೇತ್ರದ ಜನರ ಸಮಸ್ಯೆ ಬಗೆಹರಿಸಲು ಹೆಚ್ಚು ಆದ್ಯತೆ ನೀಡಿದ್ದೇನೆ” ಎಂದು ಸಮಜಾಯಿಷಿ ನೀಡಿದರು.

Advertisements

“ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಕಬಿನಿಯಿಂದ 180 ಎಂ.ಎಲ್.ಡಿ ನೀರು ತರಬೇಕು. ಇದಕ್ಕೆ ಬಜೆಟ್ ನಲ್ಲಿ ಹಣ ಕೇಳಿದ್ದೇವೆ. ನನ್ನ ಕ್ಷೇತ್ರದ ನೀರಿನ ಸಮಸ್ಯೆ, ಯುಜಿಡಿ ಸಮಸ್ಯೆ ಎಲ್ಲವನ್ನೂ ಸರಿ ಮಾಡಬೇಕು. ಪಟ್ಟಣ ಪಂಚಾಯತಿಗಳನ್ನು ಸೇರಿಸಿ ಗ್ರೇಟರ್ ಮೈಸೂರು ಮಾಡಿ ಅಂತ ಹೇಳಿದ್ದೇನೆ. ಬಜೆಟ್‌ನಲ್ಲಿ ಇದನ್ನು ಸೇರಿಸಿ ಅಂತ ಹೇಳಿದ್ದೇನೆ” ಎಂದು ತಿಳಿಸಿದರು.

ಮುಂಬರುವ ಜಿಲ್ಲಾ ತಾಲ್ಲೂಕು ಪಂಚಾಯಿತಿ ಚುನಾವಣೆ ವೇಳೆ ಜೆಡಿಎಸ್ ಪರ ಪ್ರಚಾರ ಕೈಗೊಳ್ಳುತ್ತೀರಾ? ಎಂಬ ಪ್ರಶ್ನೆಗೆ ಚುನಾವಣೆ ಘೋಷಣೆ ಆದಾಗ ನೋಡೋಣ’ ಎಂದು ಪ್ರತಿಕ್ರಿಯಿಸಿದರು.

“ಚಾಮುಂಡೇಶ್ವರಿ ಕ್ಷೇತ್ರದ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದೆ. ಎಲ್ಲ ಇಲಾಖೆ ಅಧಿಕಾರಿಗಳ ಸಭೆ ಮಾಡಿದ್ದೇನೆ. ರಾಜ್ಯ ಬಜೆಟ್ ಬರ್ತಿದೆ. ಯಾವೆಲ್ಲ ಕೆಲಸ ಆಗಬೇಕು, ಕುಡಿಯುವ ನೀರು, ನಗರಾಭಿವೃದ್ದಿ ಪ್ರಾಧಿಕಾರ ಸ್ಥಳೀಯ ಪಂಚಾಯತಿಗಳಿಗೆ ವರ್ಗಾವಣೆ ಆಗಿದೆ. ಆದರೆ ಸ್ಥಳೀಯ ಆಡಳಿತದಲ್ಲಿ ಹಣವಿಲ್ಲ. ಹೀಗಾಗಿ ಸಿಎಂ ಗಮನಕ್ಕೆ ಈ ವಿಚಾರ ತರುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X