ದೆಹಲಿ | ಕೋಚಿಂಗ್ ಸೆಂಟರ್‌ನಲ್ಲಿ ಬೆಂಕಿ ಅವಘಡ; ಹಗ್ಗದ ಸಹಾಯದಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು

Date:

Advertisements

ರಾಷ್ಟ್ರ ರಾಜಧಾನಿ ದೆಹಲಿಯ ಮುಖರ್ಜಿ ನಗರ ಪ್ರದೇಶದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬಾತ್ರಾ ಚಿತ್ರಮಂದಿರದ ಬಳಿಯ ಜ್ಞಾನ ಕಟ್ಟಡದ ಮೂರನೇ ಅಂತಸ್ತಿನಲ್ಲಿ ಕಾರ್ಯಾಚರಿಸುತ್ತಿದ್ದ ಸಂಸ್ಕೃತಿ ಕೋಚಿಂಗ್ ಸೆಂಟರ್‌ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ.  

ಕೋಚಿಂಗ್ ಸೆಂಟರ್‌ನಲ್ಲಿ ಪಾಠ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದರು. ಪ್ರಾಣ ಉಳಿಸಿಕೊಳ್ಳಲು ಕೆಲ ವಿದ್ಯಾರ್ಥಿಗಳು ಕಟ್ಟಡದ ಹೊರಗೆ ನೇತಾಡುತ್ತಿದ್ದ ಹಗ್ಗವನ್ನು ಬಳಸಿ ಕೆಳಗಿಳಿದಿದ್ದಾರೆ. ಈ ವೇಳೆ 4 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ʻಬೆಂಕಿ ನಂದಿಸುವ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕಟ್ಟಡದಿಂದ ಹೊರತರಲಾಗಿದೆʼ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಹೇಳಿದ್ಧಾರೆ.

Advertisements

ದುರದೃಷ್ಟಕರ: ದೆಹಲಿ ಸಿಎಂ

ಮುಖರ್ಜಿ ನಗರದಲ್ಲಿ ಸಂಭವಿಸಿದ ಬೆಂಕಿ ಅವಘಡ ಅತ್ಯಂತ ದುರದೃಷ್ಟಕರ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.  ʻಕಟ್ಟಡದಿಂದ ತಪ್ಪಿಸಿಕೊಳ್ಳುವ ವೇಳೆ ಕೆಲ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ, ಭಯಪಡುವ ಅಗತ್ಯವಿಲ್ಲ, ಅಗ್ನಿಶಾಮಕ ಇಲಾಖೆ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ಹತೋಟಿಗೆ ತರಲಾಗಿದೆʼ ಎಂದು ಕೇಜ್ರಿವಾಲ್ ಹೇಳಿದ್ದಾರೆ. 

ಮುಖರ್ಜಿ ನಗರವು ದೆಹಲಿ ವಿಶ್ವವಿದ್ಯಾನಿಲಯದ ಸಮೀಪದಲ್ಲಿದ್ದು, ಯುಪಿಎಸ್‌ಸಿ ಆಕಾಂಕ್ಷಿಗಳ ಪ್ರಮುಖ ಕೇಂದ್ರವಾಗಿದೆ. ನೂರಾರು ಶಿಕ್ಷಣ ಸಂಸ್ಥೆಗಳು ಮತ್ತು ಕೋಚಿಂಗ್ ಸೆಂಟರ್‌ಗಳು ಈ ಪ್ರದೇಶದಲ್ಲಿದ್ದು, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ನೆರೆ ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳ ಪ್ರಮುಖ ತಾಣವಾಗಿದೆ. 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X