ಎನ್‌ಡಿಎ ಸರ್ಕಾರ ಬಿಹಾರದ ಜನರ ಮೇಲೆ ಹೊರೆ, 15 ವರ್ಷ ಹಳೆಯ ವಾಹನದಂತೆ ಸ್ಕ್ರಾಪ್ ಮಾಡಬೇಕು: ತೇಜಸ್ವಿ ಯಾದವ್

Date:

Advertisements

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಶನಿವಾರ ಟೀಕಿಸಿದ್ದಾರೆ. “ರಾಜ್ಯದಲ್ಲಿ ವಾಯುಮಾಲಿನ್ಯವನ್ನು ತಡೆಗಟ್ಟಲು 15 ವರ್ಷಗಳಷ್ಟು ಹಳೆಯ ವಾಹನಗಳನ್ನು ಹೇಗೆ ಸ್ಕ್ರಾಪ್ (ರದ್ದಿ) ಮಾಡಲಾಯಿತೋ, ಹಾಗೆಯೇ ಬಿಹಾರದ ಜನರ ಮೇಲೆ ಹೊರೆಯಾಗಿರುವ ಎರಡು ದಶಕದ ಎನ್‌ಡಿಎ ಸರ್ಕಾರವನ್ನು ಸ್ಕ್ರಾಪ್ ಮಾಡಬೇಕು ಎಂದು ಹೇಳಿದ್ದಾರೆ.

ಈ ಬಗ್ಗೆ ಯಾದವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದ 20 ವರ್ಷ ಹಳೆಯ ಎನ್‌ಡಿಎ ಸರ್ಕಾರವು ದುರ್ಬಲ ವಾಹನದಂತೆ ಆಗಿದೆ. ಬಿಹಾರದಾದ್ಯಂತ 15 ವರ್ಷಗಳಷ್ಟು ಹಳೆಯದಾದ ವಾಹನವನ್ನು ನಿಷೇಧಿಸಲಾಗಿದೆ. ಹಳೆಯ ವಾಹನಗಳು ಹೆಚ್ಚು ಹೊಗೆ ಉಗುಳುತ್ತದೆ, ಇದರಿಂದಾಗಿ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಇದು ಜನರಿಗೆ ಅಪಾಯಕಾರಿ” ಎಂದು ಬಿಹಾರ ಸರ್ಕಾರವನ್ನು ಹಳೆಯ ವಾಹನಕ್ಕೆ ಹೋಲಿಸಿದ್ದಾರೆ.

ಇದನ್ನು ಓದಿದ್ದೀರಾ? ಉದ್ಯೋಗಕ್ಕಾಗಿ ಜಮೀನು ಹಗರಣ | ಲಾಲು ಪ್ರಸಾದ್, ತೇಜಸ್ವಿ ಯಾದವ್‌ಗೆ ಜಾಮೀನು

Advertisements

“ಹಳೆಯ ವಾಹನ ನಿಷೇಧಿಸುವಾಗ 20 ವರ್ಷ ಹಳೆಯದಾದ ದುರ್ಬಲ ಎನ್‌ಡಿಎ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸಲು ಯಾಕೆ ಅವಕಾಶ ನೀಡಬೇಕು? ಈ ಸರ್ಕಾರವು ಬಿಹಾರದ ಜನರ ಮೇಲೆ ಹೊರೆಯಾಗಿದೆ. ಈ ಸರ್ಕಾರವನ್ನು ಬದಲಾವಣೆ ಮಾಡಬೇಕು” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಬಿಹಾರ ವಿಪಕ್ಷ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

“ಕಳೆದ 20 ವರ್ಷಗಳ ಅವಧಿಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ಬಿಹಾರದಲ್ಲಿ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಅಪರಾಧ ಮತ್ತು ವಲಸೆ ಎಂಬ ಮಾರಕ ಮಾಲಿನ್ಯವನ್ನು ಹರಡಿದೆ” ಎಂದು ತೇಜಸ್ವಿ ಟೀಕಿಸಿದ್ದಾರೆ.

2013ರಲ್ಲಿ ಬಿಜೆಪಿ ಜೊತೆ ಮೈತ್ರಿ ಹೊಂದಿದ್ದ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಬಳಿಕ ಆರ್‌ಜೆಡಿ ಜೊತೆ ಮೈತ್ರಿ ಮಾಡಿಕೊಂಡರು. 2015ರಿಂದ 2017ರವರೆಗೆ ಆರ್‌ಜೆಡಿ ಜೊತೆ ಅಧಿಕಾರವನ್ನು ಹಂಚಿಕೊಂಡಿತ್ತು. 2017ರಲ್ಲಿ ಆರ್‌ಜೆಡಿ ಜೊತೆ ಮೈತ್ರಿ ತೊರೆದು ಮತ್ತೆ ಎನ್‌ಡಿಎ ಕೂಡ ಸೇರಿದರು. ಬಳಿಕ 2022ರ ಆಗಸ್ಟ್‌ನಲ್ಲಿ ಮತ್ತೆ ಆರ್‌ಜೆಡಿ ಮಹಾಘಟಬಂಧನ ಜೊತೆ ಮೈತ್ರಿ ಮಾಡಿಕೊಂಡರು. 2024ರಲ್ಲಿ ಮತ್ತೆ ಮಹಾಘಟಬಂಧನ ತೊರೆದು ಎನ್‌ಡಿಎ ಸೇರಿಕೊಂಡರು. ಹೀಗೆ ನಿರಂತರವಾಗಿ ಮೈತ್ರಿ ಬದಲಾಯಿಸಿಕೊಂಡ ನಿತೀಶ್ ಕುಮಾರ್ ಈಗ ಮತ್ತೆ ಯಾವಾಗ ಎನ್‌ಡಿಎ ಕೂಟ ತೊರೆಯುತ್ತಾರೆ ಎಂದು ಹೇಳಲಾಗದು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X