ರಾಯಚೂರು | ವಿವೇಚನಾ ನಿಧಿಯ ಅನುದಾನ ಸಮರ್ಪಕ ಬಳಕೆಯಾಗಬೇಕು: ರಾಘವೇಂದ್ರ ಕುಷ್ಟಗಿ

Date:

Advertisements

ಲೋಕಸಭಾ ಸದಸ್ಯ ವಿವೇಚನಾ ನಿಧಿಗೆ ಮೀಸಲಿಟ್ಟಿರುವ 5 ಕೋಟಿ ರೂ ಅನುದಾನವನ್ನು ಉದ್ದೇಶಿತ ಕಾರ್ಯಕ್ಕೆ ಸಮರ್ಪಕವಾಗಿ ಬಳಕೆಯಾಗಬೇಕು ಎಂದು ಹೈದರಾಬಾದ್‌ ಕರ್ನಾಟಕ ಜನಾಂದೋಲನ ಕೇಂದ್ರ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಹೇಳಿದರು.

ಅವರಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, “2024-25ನೇ ಸಾಲಿಗೆ ವಿವೇಚನಾ ನಿಧಿಗೆ 5 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ಅದನ್ನು ಜಿಲ್ಲೆಯ ಅಭಿವೃದ್ಧಿಗೆ ಬಳಕೆ ಮಾಡದೆ ಇರುವುದು ಸಮಂಜಸವಲ್ಲ. ಸಂಸದ ಜಿ. ಕುಮಾರ ನಾಯಕ ಅನುದಾನವನ್ನು ಬಳಸಿಕೊಂಡಿಲ್ಲ. ಜಿಲ್ಲೆಯ ಜನರು ಇಟ್ಟಿರುವ ನಂಬಿಕೆಗೆ ಮೋಸ ಮಾಡದಂತೆ ಅನುದಾನ ಬಳಕೆಗೆ ಬದ್ಧತೆ ತೋರಬೇಕು” ಎಂದರು.

“ಅನುದಾನದ ಸಮರ್ಪಕ ಬಳಕೆಯಾಗಿಲ್ಲದ ಕಾರಣ ಮತ್ತೆ ಜಿಲ್ಲೆಗೆ ಹೊಸ ಅನುದಾನ ಬಿಡುಗಡೆಯಾಗದಿರುವ ಆತಂಕವಿದೆ. ಅನುದಾನ ಯಾವುದೇ ಕಾರಣಕ್ಕೂ ದುರ್ಬಳಕೆಯಾಗದಂತೆ ಎಚ್ಚರವಹಿಸುವ ಜೊತೆಗೆ ಅನುದಾನ ಬಳಕೆಗೆ ಕೂಡಲೇ ಮುಂದಾಗಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಸಿಹಿ, ಗುಲಾಬಿ ನೀಡಿ ಸ್ವಾಗತ

Advertisements

ಈ ವೇಳೆ ಜಾನವೆಸ್ಲಿ ಶೆಟ್ಟಿ, ಈರಣ್ಣ ಭಂಡಾರಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X