ದಕ್ಷಿಣ ಕನ್ನಡ | ಮೀಟರ್ ರೀಡರ್ ಎಡವಟ್ಟು; ಮನೆಗೆ 7.71 ಲಕ್ಷ ರೂ. ವಿದ್ಯುತ್‌ ಬಿಲ್‌ ನೀಡಿದ ಸಿಬ್ಬಂದಿ!

Date:

Advertisements

ಕೆಇಆರ್‌ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮನೆಯೊಂದಕ್ಕೆ ಬರೋಬ್ಬರಿ 7.71 ಲಕ್ಷ ರೂ. ವಿದ್ಯುತ್ ಬಿಲ್ ನೀಡಲಾಗಿತ್ತು. ಮೀಟರ್‌ ರೀಡರ್‌ನಿಂದ ಎಡವಟ್ಟಾಗಿ ಆ ಮೊತ್ತದ ಬಿಲ್‌ ನೀಡಿದ್ದು, ತಪ್ಪು ಗಮನಕ್ಕೆ ಬರುತ್ತಿದ್ದಂತೆಯೇ ಮೆಸ್ಕಾಂ ಅಧಿಕಾರಿಗಳು ತಪ್ಪನ್ನು ಸರಿಪಡಿಸಿ, ಪರಿಷ್ಕೃತ ಬಿಲ್ಲು ನೀಡಿದ್ದಾರೆ.

“ವಿದ್ಯುತ್ ಬಿಲ್ ರಸೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು, 7,71,072 ರೂಪಾಯಿ ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ದಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ‌ ತಿಂಗಳು ಬಂದ ಬಿಲ್ಲನ್ನ ನೋಡಿ ಮನೆ ಮಂದಿಯೆಲ್ಲ ತಬ್ಬಿಬ್ಬಾದೆವು” ಎಂದು ಮನೆ ಮಾಲೀಕ ಸದಾಶಿವ ಆಚಾರ್ಯ ಹೇಳಿದ್ದಾರೆ. ‌

“ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ. ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ ಎಂದು ಉಡಾಫೆಯ ಉತ್ತರ ನೀಡಿ ತೆರಳಿದ್ದರು” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸೇವೆ ಒದಗಿಸಲು ವಿಮಾ ಕಂಪನಿ ವಿಫಲ; ಪರಿಹಾರ ನೀಡುವಂತೆ ಆದೇಶ

“ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನು ಗ್ರಾಹಕರಿಗೆ ಕೊಡುವಂತಿಲ್ಲ. ಆದರೂ ಆತ ಕೊಟ್ಟಿದ್ದಾರೆ. ನಮಗೆ ಮಾಹಿತಿ ಲಭಿಸಿದ ಕೂಡಲೇ ನಾವು ಪರಿಷ್ಕೃತ ಬಿಲ್ಲನ್ನು ಸದಾಶಿವ ಅವರ ಮನೆಗೆ ತಲಪುಸಿದ್ದೇವೆ” ಎಂದು ಮೆಸ್ಕಾಂನ ಉಳ್ಳಾಲ ಉಪ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ದಯಾನಂದ ತಿಳಿಸಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X