ಬೆಳ್ತಂಗಡಿ | 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಿಸಿದ ಸರಳಿಕಟ್ಟೆ ಗೈಸ್

Date:

Advertisements

ಸರಳಿಕಟ್ಟೆಯ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸರಳಿಕಟ್ಟೆ ಜುಮ್ಮಾ ಮಸೀದಿಯ ಖತೀಬ್ ಬಹು ಅಬ್ದುರ್‌ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ.

Advertisements

ಸರಳಿಕಟ್ಟೆ ಊರಿನ ಉದ್ಯಮಿಗಳು, ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ ಚಿಕಿತ್ಸೆಯ ವೆಚ್ಚ, ನಿರ್ಗತಿಕರಿಗೆ ನೆರವು, ಮನೆ ನಿರ್ಮಾಣಕ್ಕೆ ಸಹಾಯ, ಮದುವೆಗೆ ಸಹಾಯಧನ ಸೇರಿದಂತೆ ಹತ್ತಾರು ಸಮಾಜಮುಖಿ‌ ಕಾರ್ಯಗಳನ್ನು ಸದಾ ನಡೆಸುತ್ತ ಮುನ್ನಡೆಸಿಕೊಂಡು ಬಂದಿದೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸುಶಿಕ್ಷಿತ ಸಮಾಜ ನಿರ್ಮಾಣದಿಂದ ಬಾಲ್ಯ ವಿವಾಹ ನಿರ್ಮೂಲನೆ ಸಾಧ್ಯ : ನ್ಯಾ. ಸೋಮಶೇಖರ್ ಅಭಿಮತ

ಸರಳಿಕಟ್ಟೆ ಗೈಸ್ ಪದಾಧಿಕಾರಗಳೇ ವಾಹನಗಳ ಮೂಲಕ ಹೋಗಿ 175 ಕುಟುಂಬಗಳ ಮನೆಗಳಿಗೆ ರಂಝಾನ್‌ ಕಿಟ್ ವಿತರಿಸಿದರು.

ಕಾರ್ಯಕ್ರಮದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಎಂ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲತೀಫ್ ಪಿ ಎಸ್, ಜೊತೆ ಕಾರ್ಯದರ್ಶಿ ಆಸಿಫ್ ಪುಯಿಲ, ಸಮಿತಿ ಸದಸ್ಯರಾದ ಅಬ್ಬಾಸ್ ಮಡಿಕೆರೆಬೆಟ್ಟು, ನಾಸಿರ್ ಎಸ್, ಸಮದ್ ಎಸ್, ಉದ್ಯಮಿಗಳಾದ ಅಶ್ರಫ್ ಬಂಡಾಡ್, ಮುಸ್ತಫಾ ಕಾಜಿನಳಿಕೆ, ಉನೈಸ್ ಚಿಂಗಾಣಿಬೆಟ್ಟು, ನವಾಝ್ ಪಿ ಎಸ್. ಹೈದರ್ ಗುಂಪಕಲ್ಲು ಮತ್ತು ಜಮಾಅತ್‌ನ ಸದಸ್ಯರಾದ ಮುಸ್ತಫಾ ಕುರುಬರಪಾಲು, ನೌಮನ್ ಸರಳಿಕಟ್ಟೆ, ಖಾಸಿಂ ಮೇಗಿನಪುಯಿಲ, ಅಬ್ಬಾಸ್ ನೆಲ್ಲಿಪಳಿಕೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X